ಅಪರೂಪಕ್ಕೊಮ್ಮೆ ನಕ್ಕ ಬಿಎಸ್ ಯಡಿಯೂರಪ್ಪ ಕೇಳಿದ ಪ್ರಶ್ನೆಗೆ ಉತ್ತರ ನೀಡಲಿಲ್ಲ!

ಯಾರೇನೇ ಹೇಳಿದರೂ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ವರ್ಚಸ್ಸು ಪುನಃ ಕ್ರಮೇಣ ಹೆಚ್ಚುತ್ತಿದೆ, ವಿಧಾನಸಭಾ ಚುನಾವಣಾ ಸಮಯದಲ್ಲಿ ಅವರನ್ನು ಮೂಲೆಗುಂಪು ಮಾಡಿದ್ದ ಪಕ್ಷದ ಹಿರಿಯ ನಾಯಕರಿಗೆ ತಪ್ಪಿನ ಅರಿವಾಗಿದೆ. ಯಡಿಯೂರಪ್ಪ ಅಪೇಕ್ಷೆಯ ಮೇರೆಗೆ ಅವರ ಮಗನನ್ನೇ ಪಕ್ಷದ ರಾಜ್ಯ ಘಟಕಕ್ಕೆ ಅಧ್ಯಕ್ಷನಾಗಿ ನೇಮಕ ಮಾಡಲಾಗಿದೆ. ಪಕ್ಷದ ಕೆಲ ನಾಯಕರ ತೀವ್ರ ಸ್ವರೂಪದ ವಿರೋಧವನ್ನು ಯಡಿಯೂರಪ್ಪ ಕಡೆಗಣಿಸುತ್ತಿದ್ದಾರೆ.

ಅಪರೂಪಕ್ಕೊಮ್ಮೆ ನಕ್ಕ ಬಿಎಸ್ ಯಡಿಯೂರಪ್ಪ ಕೇಳಿದ ಪ್ರಶ್ನೆಗೆ ಉತ್ತರ ನೀಡಲಿಲ್ಲ!
|

Updated on: Jan 01, 2024 | 2:42 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಪತ್ರಕರ್ತರು ಕೇಳಿದ ಪ್ರಶ್ನೆಗೆ ನಕ್ಕರು ಅಂತ ನಾವು ಹೇಳಿದರೆ, ಅವರು ಯಾವಾಗ ಮಾರಾಯ್ರೇ ನಕ್ಕಿದ್ದು ಅಂತ ನೀವು ಕೇಳಿಬಿಡುತ್ತೀರಿ! ಅವರ ಸ್ವಭಾವವೇ ಹಾಗೆ, ಯಾವಾಗಲೂ ಗಂಭೀರ ಮುಖಮುದ್ರೆ. ಆದರೆ, ಇಂದು ಅಪರೂಪಕ್ಕೆ ಅವರು ಮಾಧ್ಯಮ ಕೆಮೆರಾಗಳ ಮುಂದೆ ನಕ್ಕರು (smiled). ನಕ್ಕರು ಅನ್ನೋದಕ್ಕಿಂತ ಮುಗುಳ್ನಗೆ ಬೀರಿದರು ಅನ್ನೋದು ಹೆಚ್ಚು ಸೂಕ್ತವೆನಿಸಬಹುದು. ಹೊಸ ವರ್ಷಕ್ಕೆ ನಿಮ್ಮ ರೆಸುಲ್ಯೂಷನ್ (resolution) ಏನು ಸಾರ್ ಅಂತ ಕೇಳಿದಾಗ ಅವರು ನಕ್ಕು ಏನನ್ನೂ ಹೇಳದೆ ಮಾಧ್ಯಮದವರಿಗೆ ಬೆನ್ನು ಹಾಕಿದರು. ಅದಕ್ಕೂ ಮೊದಲು ಮಾತಾಡಿದ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅಭಿನಂದಿಸಿ ಶುಭ ಹಾರೈಸಿದರು. ವಿಪಕ್ಷ ನಾಯಕನಾಗಿ ಕೆಲಸ ಮಾಡಿರುವ ಅನುಭವ ಪೂಜಾರಿ ಅವರಿಗಿರುವುದರಿಂದ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸ ತಮಗಿದೆ ಎಂದು ಯಡಿಯೂರಪ್ಪ ಹೇಳಿದರು. ವಿಪಕ್ಷದ ಮುಖ್ಯ ಸಚೇತಕರಾಗಿ ಆಯ್ಕೆಯಾಗಿರುವ ಎನ್ ರವಿಕುಮಾರ್​ಗೂ ಅವರು ಶುಭ ಕೋರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!