AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್ ಮಾಡ್ತಿದ್ದೀರಿ: DCP ಕೃಷ್ಣಕಾಂತ್ ಮಾರುತ್ತರ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿದ್ರೂ ಉನ್ನತ ಖಾಕಿ ಅಧಿಕಾರಿಗಳ ನಡುವಣ ಒಳಜಗಳ ನಿಲ್ಲುತ್ತಿಲ್ಲ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ದಿಲೀಪ್ ಮತ್ತು ಡಿಸಿಪಿ ಕೃಷ್ಣಕಾಂತ್ ನಡುವೆ ಒಳಜಗಳ ಮುಂದುವರಿದಿದೆ. ಮತ್ತೆ ಡಿಸಿಪಿಗೆ ನೋಟಿಸ್ ನೀಡಿದ ಕಮಿಷನರ್ ದಿಲೀಪ್! ಭ್ರಷ್ಟಾಚಾರ ಆರೋಪ ಮಾಡಿ ಯುಟರ್ನ್ ತೆಗೆದುಕೊಂಡಿದ್ಯಾಕೆ? ನೀವು ಮತ್ತೋರ್ವ ಡಿಸಿಪಿ ವಿರುದ್ಧವೂ ಆರೋಪ ಮಾಡಿದ್ದೀರಿ. ಇನ್ನೂ ಕೆಲವು ಅಧಿಕಾರಿಗಳ ವಿರುದ್ಧವೂ ಆರೋಪಿಸಿ ಸುಮ್ಮನಿದ್ದೀರಿ. ಹಾಗಾಗಿ, ಆ ಬಗ್ಗೆ ವರದಿ ನೀಡುವಂತೆ ನಿಮಗೆ ಹೇಳಿದ್ದೆ. ನೀವ್ಯಾಕೆ ಯುಟರ್ನ್ ತೆಗೆದುಕೊಂಡಿದ್ದೀರಿ […]

ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್ ಮಾಡ್ತಿದ್ದೀರಿ: DCP ಕೃಷ್ಣಕಾಂತ್ ಮಾರುತ್ತರ
ಸಾಧು ಶ್ರೀನಾಥ್​
|

Updated on:Oct 09, 2020 | 12:59 PM

Share

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿದ್ರೂ ಉನ್ನತ ಖಾಕಿ ಅಧಿಕಾರಿಗಳ ನಡುವಣ ಒಳಜಗಳ ನಿಲ್ಲುತ್ತಿಲ್ಲ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ದಿಲೀಪ್ ಮತ್ತು ಡಿಸಿಪಿ ಕೃಷ್ಣಕಾಂತ್ ನಡುವೆ ಒಳಜಗಳ ಮುಂದುವರಿದಿದೆ.

ಮತ್ತೆ ಡಿಸಿಪಿಗೆ ನೋಟಿಸ್ ನೀಡಿದ ಕಮಿಷನರ್ ದಿಲೀಪ್! ಭ್ರಷ್ಟಾಚಾರ ಆರೋಪ ಮಾಡಿ ಯುಟರ್ನ್ ತೆಗೆದುಕೊಂಡಿದ್ಯಾಕೆ? ನೀವು ಮತ್ತೋರ್ವ ಡಿಸಿಪಿ ವಿರುದ್ಧವೂ ಆರೋಪ ಮಾಡಿದ್ದೀರಿ. ಇನ್ನೂ ಕೆಲವು ಅಧಿಕಾರಿಗಳ ವಿರುದ್ಧವೂ ಆರೋಪಿಸಿ ಸುಮ್ಮನಿದ್ದೀರಿ. ಹಾಗಾಗಿ, ಆ ಬಗ್ಗೆ ವರದಿ ನೀಡುವಂತೆ ನಿಮಗೆ ಹೇಳಿದ್ದೆ. ನೀವ್ಯಾಕೆ ಯುಟರ್ನ್ ತೆಗೆದುಕೊಂಡಿದ್ದೀರಿ ಎಂದು ಡಿಸಿಪಿ ಕೃಷ್ಣಕಾಂತ್‌ಗೆ ಕಮಿಷನರ್ ದಿಲೀಪ್ ಇದೀಗ ನೋಟಿಸ್ (ಮೆಮೋ) ನೀಡಿದ್ದಾರೆ.

ಅಪ್ಪ ಅಮ್ಮ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋಹಾಗೆ.. ಈ ಇಬ್ಬರು ಉನ್ನತ ಐಪಿಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಪೊಲೀಸರು ಸುಸ್ತೋ ಸುಸ್ತು ಹೊಡೆದಿದ್ದಾರೆ. ಇಷ್ಟೆಲ್ಲಾ ಒಳಜಗಳಗಳ‌ ಮಧ್ಯೆ ಸಾರ್ವಜನಿಕರ ಗೋಳು ಕೇಳೋರು ಯಾರು? ಜೊತೆಗೆ, ಈಗಿನ ನೋಟಿಸ್​ ನೋಡಿದರೆ ಅವಳಿ ನಗರದ ಖಾಕಿ ಪಡೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆಯಾ ಎಂಬ ಅನುಮಾನ ಹೋಗಿ, ನಿಜಾನಾ ಅನ್ನುವತ್ತ ಸಾಗಿದೆ.

ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡುತ್ತಿದ್ದೀರಿ: ಡಿಸಿಪಿ ಕೃಷ್ಣಕಾಂತ್ ಮಾರುತ್ತರ ಡಿಸಿಪಿ ಕೃಷ್ಣಕಾಂತ್ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ನೋಟಿಸ್‌ಗೆ ಮಾರುತ್ತರ ಪತ್ರದ ಮೂಲಕ ತಿರುಗೇಟು ನೀಡಿದ್ದಾರೆ. ನೀವು ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದೀರಿ ಎಂದೂ ಡಿಸಿಪಿ ಕೃಷ್ಣಕಾಂತ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Published On - 11:45 am, Fri, 9 October 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ