
ಮೈಸೂರು: ಕೊರೊನಾ ವಿರುದ್ಧ ಹೋರಾಡಲು ಪಣ ತೊಟ್ಟಿ ಕಾರ್ಯ ನಿರ್ವಹಿಸುತ್ತಿದ್ದ ಕೊರೊನಾ ವಾರಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಆಲನಹಳ್ಳಿಯಲ್ಲಿ ನಡೆದಿದೆ.
ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ನಾಗೇಂದ್ರ ತಮ್ಮ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಾಗೇಂದ್ರ ನಂಜನಗೂಡಿನಲ್ಲಿ ಸುಮಾರು 1 ವರ್ಷದಿಂದ ತಾಲೂಕು ಆರೋಗ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.