AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸ್ ಎಂದು ಯಾಮಾರಿದ ರಶ್ಮಿಕಾ ಮನೆಯವರು, ಒಳಗೆ ಬಂದ್ಮೇಲೆ ಫುಲ್ ಶಾಕ್

ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳ ಹೆಸರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ರಶ್ಮಿಕಾ ನಿವಾಸ‌ಕ್ಕೆ ರಶ್ಮಿಕಾ ಫ್ಯಾನ್ಸ್ ಅಂತಾ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳನ್ನು ರಶ್ಮಿಕಾ ಮನೆಯವರು ಸ್ವಾಗತಿಸಿದ್ದಾರೆ. ಮನೆ ಒಳಗೆ ಬಂದ ನಂತರ ಬಂದಿರುವುದು ಐಟಿ ಅಧಿಕಾರಿಗಳು ಫ್ಯಾನ್ಸ್ ಅಲ್ಲ ಎಂದು ತಿಳಿದ ಮೇಲೆ ಮನೆಯವರೆಲ್ಲಾ ಕಕ್ಕಾಬಿಕ್ಕಿಯಾಗಿದ್ದಾರೆ. ಸದ್ಯ ರಶ್ಮಿಕಾ ಏನ್ ಮಾಡ್ತಿದ್ದಾರೆ. ಎಲ್ಲಿದ್ದಾರೆ? ತಮಿಳು ಸಿನಿಮಾದಲ್ಲೂ ಫುಲ್ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ. ಖ್ಯಾತ ನಟ ಕಾರ್ತಿ ಶಿವಕುಮಾರ್ ಜತೆ […]

ಫ್ಯಾನ್ಸ್ ಎಂದು ಯಾಮಾರಿದ ರಶ್ಮಿಕಾ ಮನೆಯವರು, ಒಳಗೆ ಬಂದ್ಮೇಲೆ ಫುಲ್ ಶಾಕ್
ಸಾಧು ಶ್ರೀನಾಥ್​
|

Updated on:Jan 16, 2020 | 2:17 PM

Share

ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳ ಹೆಸರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ರಶ್ಮಿಕಾ ನಿವಾಸ‌ಕ್ಕೆ ರಶ್ಮಿಕಾ ಫ್ಯಾನ್ಸ್ ಅಂತಾ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳನ್ನು ರಶ್ಮಿಕಾ ಮನೆಯವರು ಸ್ವಾಗತಿಸಿದ್ದಾರೆ. ಮನೆ ಒಳಗೆ ಬಂದ ನಂತರ ಬಂದಿರುವುದು ಐಟಿ ಅಧಿಕಾರಿಗಳು ಫ್ಯಾನ್ಸ್ ಅಲ್ಲ ಎಂದು ತಿಳಿದ ಮೇಲೆ ಮನೆಯವರೆಲ್ಲಾ ಕಕ್ಕಾಬಿಕ್ಕಿಯಾಗಿದ್ದಾರೆ.

ಸದ್ಯ ರಶ್ಮಿಕಾ ಏನ್ ಮಾಡ್ತಿದ್ದಾರೆ. ಎಲ್ಲಿದ್ದಾರೆ? ತಮಿಳು ಸಿನಿಮಾದಲ್ಲೂ ಫುಲ್ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ. ಖ್ಯಾತ ನಟ ಕಾರ್ತಿ ಶಿವಕುಮಾರ್ ಜತೆ ನಟಿಸುತ್ತಿದ್ದಾರೆ. ತಮಿಳಿನ ಬಕ್ಕಿಯರಾಜ್ ಕಣ್ಣನ್ ನಿರ್ದೇಶನದ ಸುಲ್ತಾನ್ ಸಿನಿಮಾದ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. 2021ಕ್ಕೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.

ರಶ್ಮಿಕಾ ತೆಲುಗು ನಂತರ ಮೊದಲ ಬಾರಿಗೆ ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಕನ್ನಡದಲ್ಲಿ ಕಿರಿಕ್ ಪಾರ್ಟಿ, ಅಂಜನಿ ಪುತ್ರ,ಚಮಕ್, ಯಜಮಾನ, ಪೊಗರು ಸೇರಿದಂತೆ ಒಟ್ಟು ಐದು ಚಿತ್ರಗಳಲ್ಲಿ ರಶ್ಮಿಕಾ ಅಭಿನಯಿಸಿದ್ದಾರೆ. ತೆಲುಗಿನಲ್ಲಿ ಒಪ್ಪಿಕೊಂಡಿರುವ ಚಿತ್ರಗಳನ್ನು ಸೇರಿಸಿದರೆ ಒಟ್ಟು ಏಳು ಚಿತ್ರಗಳಾಗಿವೆ. ಚಲೋ, ಗೀತಗೋವಿಂದಂ, ದೇವದಾಸ್, ಡಿಯರ್ ಕಾಮ್ ರೇಡ್, ಸರಿಲೇರು ನೀಕ್ಕೆವರು, ಭೀಷ್ಮಾ, AA-20 ರಶ್ಮಿಕಾಳ ತೆಲುಗು ಚಿತ್ರಗಳು.

ಸೆರೆನಿಟಿ ಹಾಲ್​ನಲ್ಲಿ ಐಟಿ ಅಧಿಕಾರಿಗಳಿಂದ ಪರಿಶೀಲನೆ: ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ ಬೆನ್ನಲೆ ಈಗ ರಶ್ಮಿಕಾ ಮಂದಣ್ಣ ತಂದೆ ಒಡೆತನದ ಸೆರೆನಿಟಿ ಹಾಲ್​ನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಒಂದು ತಂಡದಿಂದ ರಶ್ಮಿಕಾ ನಿವಾಸ‌ದಲ್ಲಿ ಪರಿಶೀಲನೆ ನಡೀತಿದ್ರೆ. ಮತ್ತೊಂದು ತಂಡದಿಂದ ಸೆರೆನಿಟಿ ಹಾಲ್​ನಲ್ಲಿ ಪರಿಶೀಲನೆ ನಡೆಯುತ್ತಿದೆ.

Published On - 12:17 pm, Thu, 16 January 20

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ