ಸುಮಲತಾ ಕಹಳೆ ದೇವೇಗೌಡ ಪಾಲು! ಮತದಾರ ಕಂಗಾಲು

ಮಂಡ್ಯ: ಕಳೆದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಕಹಳೆ ಚಿಹ್ನೆಯಿಂದ ಮಂಡ್ಯದಲ್ಲಿ ರಣ ಕಹಳೆ ಊದಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದರು. ಈ ಬಾರಿಯೂ ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಮತ್ತೆ ಕಹಳೆ ಮೊಳಗಲಿದೆ. ಆದರೆ ಅದು ವಿಧಾನ ಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿಗೆ ದಕ್ಕಿದೆ. ಇದರಿಂದ ಮತದಾರರು ಯಾರಿಗಪ್ಪಾ ವೋಟ್ ಹಾಕುವುದು ಅಂತ ಯೋಚನೆಯಲ್ಲಿ ತೊಡಗಿದ್ದಾರೆ. ಕೆ.ಆರ್.ಪೇಟೆ ಉಪ ಚುನಾವಣೆ ಹಿನ್ನಲೆ ಪಕ್ಷೇತರ ಅಭ್ಯರ್ಥಿ ಸರ್ವೇ ದೇವೇಗೌಡಗೆ ಚುನಾವಣಾ ಆಯೋಗ ಕಹಳೆ ಗುರುತು ನೀಡಿದೆ. ಹಾಗಾಗಿ ಅಭ್ಯರ್ಥಿ ಸರ್ವೇ […]

ಸುಮಲತಾ ಕಹಳೆ ದೇವೇಗೌಡ ಪಾಲು! ಮತದಾರ ಕಂಗಾಲು
ಸಾಧು ಶ್ರೀನಾಥ್​

Updated on: Nov 22, 2019 | 11:45 AM

ಮಂಡ್ಯ: ಕಳೆದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಕಹಳೆ ಚಿಹ್ನೆಯಿಂದ ಮಂಡ್ಯದಲ್ಲಿ ರಣ ಕಹಳೆ ಊದಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದರು. ಈ ಬಾರಿಯೂ ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಮತ್ತೆ ಕಹಳೆ ಮೊಳಗಲಿದೆ. ಆದರೆ ಅದು ವಿಧಾನ ಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿಗೆ ದಕ್ಕಿದೆ. ಇದರಿಂದ ಮತದಾರರು ಯಾರಿಗಪ್ಪಾ ವೋಟ್ ಹಾಕುವುದು ಅಂತ ಯೋಚನೆಯಲ್ಲಿ ತೊಡಗಿದ್ದಾರೆ.

ಕೆ.ಆರ್.ಪೇಟೆ ಉಪ ಚುನಾವಣೆ ಹಿನ್ನಲೆ ಪಕ್ಷೇತರ ಅಭ್ಯರ್ಥಿ ಸರ್ವೇ ದೇವೇಗೌಡಗೆ ಚುನಾವಣಾ ಆಯೋಗ ಕಹಳೆ ಗುರುತು ನೀಡಿದೆ. ಹಾಗಾಗಿ ಅಭ್ಯರ್ಥಿ ಸರ್ವೇ ದೇವೇಗೌಡ ಪ್ರಚಾರದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹಾಗೂ ಅಂಬರೀಶ್ ಅವರ ಭಾವ ಚಿತ್ರಗಳನ್ನ ಹಾಕಿಕೊಂಡು ಪ್ರಚಾರ ಮಾಡ್ತಿದ್ದಾರೆ. ಜೊತೆಗೆ ಅಂದು ಮಂಡ್ಯ ಜಿಲ್ಲೆಯ ಸ್ವಾಭಿಮಾನ. ಇಂದು ಕೆ ಆರ್ ಪೇಟೆ ತಾಲೂಕಿನ ಸ್ವಾಭಿಮಾನ ಎಂಬ ಧ್ಯೇಯವಾಕ್ಯದೊಂದಿಗೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಇದರಿಂದ ಬಿಜೆಪಿಯ ಅಭ್ಯರ್ಥಿ ನಾರಾಯಣ ಗೌಡ ಸ್ವಲ್ಪ ಗಲಿಬಿಲಿಗೊಂಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us