AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Adelaide Test ಗುಡಿಸಿ ಗುಂಡಾತರವಾಯ್ತು ಭಾರತದ ಬ್ಯಾಟಿಂಗ್​.. ತಂಡಕ್ಕೆ ಮತ್ತೊಂದು ಆಘಾತ!

ಆಸ್ಟ್ರೇಲಿಯಾದ ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್​ನ ಬ್ಯಾಟಿಂಗ್​ ಮುಂದುವರಿಸಿರುವ ಭಾರತ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ತಾಜಾ ವರದಿಗಳ ಪ್ರಕಾರ ಭಾರತ ತಂಡವು ಟೆಸ್ಟ್ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್​ ಆಗಿದೆ. ಸ್ಕೋರ್​: 36ಕ್ಕೆ ಆಲೌಟ್​.

India vs Australia Adelaide Test ಗುಡಿಸಿ ಗುಂಡಾತರವಾಯ್ತು ಭಾರತದ ಬ್ಯಾಟಿಂಗ್​.. ತಂಡಕ್ಕೆ ಮತ್ತೊಂದು ಆಘಾತ!
ಭಾರತ ತಂಡವು ಟೆಸ್ಟ್ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್​
ಡಾ. ಭಾಸ್ಕರ ಹೆಗಡೆ
| Edited By: ಸಾಧು ಶ್ರೀನಾಥ್​|

Updated on:Dec 19, 2020 | 11:29 AM

Share

ಅಡಿಲೇಡ್:​ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್​ನ ಎರಡನೇ ಇನ್ನಿಂಗ್ಸ್ ಬಳಿಕ ಭಾರತ ತುಂಬಾ ಸಂಕಷ್ಟಕ್ಕೆ ಸಿಲುಕಿದೆ. ಮೂರನೇ ದಿನ ತನ್ನ ಬ್ಯಾಟಿಂಗ್ ಮುಂದುವರಿಸಿದ ಭಾರತ ತಂಡವು ಟೆಸ್ಟ್ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್​ ಆಗಿದೆ.

ಕಳಪೆ ಬ್ಯಾಟಿಂಗ್​ನಿಂದಾಗಿ ಭಾರತ ತಂಡವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸ್ಕೋರ್​: 36ಕ್ಕೆ ಆಲೌಟ್​. ಇದರೊಂದಿಗೆ ಭಾರತ ಮೊದಲ ಇನ್ನಿಂಗ್ಸ್ ಲೀಡ್​ ಸೇರಿ 90 ರನ್ನುಗಳ ಮುನ್ನಡೆ ಸಾಧಿಸಿದೆ. ಅಂದರೆ ಆಸ್ಟ್ರೇಲಿಯಾಕ್ಕೆ 90 ರನ್​ಗಳ ಗುರಿ ನೀಡಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳದ್ದೇ ಇದುವರೆಗಿನ ಅತ್ಯಲ್ಪ ಸ್ಕೋರ್! ಭಾರತ 1974 ರಲ್ಲಿ ಒಂದು ಇನ್ನಿಂಗ್ಸ್​ನಲ್ಲಿ 47 ಗಳಿಸಿದ್ದು ಟೆಸ್ಟ್​ ಇನ್ನಿಂಗ್ಸ್​ ಒಂದರಲ್ಲಿ ಗಳಿಸಿದ ಕನಿಷ್ಠ ಮೊತ್ತವಾಗಿತ್ತು. ಅದೇ ರೀತಿ ಆಸ್ಟ್ರೇಲಿಯಾ ಕೂಡ ಒಂದು ಟೆಸ್ಟ್​ ಇನ್ನಿಂಗ್ಸ್​​ನಲ್ಲಿ ಗಳಿಸಿದ ಕನಿಷ್ಠ ಮೊತ್ತ 47 ರನ್​ಗಳು.

ಭಾರತ ತಂಡಕ್ಕೆ ಮತ್ತೊಂದು ಆಘಾತ! ಐತಿಹಾಸಿಕ ಅಲ್ಪ ಸ್ಕೋರಿಗೆ ಆಲ್​ ಔಟ್​ ಆಗಿದ್ದರೂ ಭಾರತ ತಂಡ ಉತ್ತಮ ಬೌಲಿಂಗ್​ ಮೂಲಕ ತಿರುಗೇಟು ನೀಡಬಹುದು ಎಂದು ಭಾವಿಸಲಾಗಿತ್ತು. ಆದ್ರೆ ಕೊನೆಯ ಬ್ಯಾಟ್ಸ್​ಮನ್​ ಆಗಿ ಔಟಾದ ಮೊಹಮದ್ ಶಮಿ ಗಾಯಗೊಂಡು ಮೈದಾನದಿಂದ ಹೊರನಡೆದಿದ್ದಾರೆ. ಅದೂ ಶಮಿ ಮುಂಗೈಗೆ ತೀವ್ರ ಪೆಟ್ಟು ಮಾಡಿಕೊಂಡಿದ್ದಾರೆ. ಬೌಲಿಂಗ್​ ಮಾಡಲೂ ಸಹ ಕಷ್ಟಕರವಾಗಬಹುದು ಎಂದು ತಿಳಿದುಬಂದಿದೆ. ಹಾಗೇನಾದರೂ ಆದ್ರೆ ಬೌಲಿಂಗ್​ನಲ್ಲಿ ಅತ್ಯುತ್ತಮ ಫಾರಂನಲ್ಲಿರುವ ಶಮಿ ಇಲ್ಲದೆಯೇ ಭಾರತ ತಂಡವು ಬೌಲಿಂಗ್ ದಾಳಿಗೆ ಇಳಿದರೆ ಇಕ್ಕಟ್ಟಿಗೆ ಸಿಲುಕಬೇಕಾದೀತು.

Published On - 11:17 am, Sat, 19 December 20

Follow Us
Dr Bhaskar Hegde
Dr Bhaskar Hegde

ಟಿವಿ9 ಡಿಜಿಟಲ್​ ಸಂಪಾದಕ. 28 ವರ್ಷಗಳಿಂದ ಇಂಗ್ಲಿಷ್ ಮುದ್ರಣ ಮಾಧ್ಯಮ​ ಮತ್ತು ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಸುದ್ದಿ, ದೀರ್ಘ ಲೇಖನ, ನುಡಿಚಿತ್ರ, ವಿಶ್ಲೇಷಣೆ, ಅಂಕಣ ಸ್ಕೂಪ್​ ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಎರಡು ಕಥಾ ಸಂಕಲನಗಳ ಪ್ರಕಟಣೆ. ಸಾರ್ವಜನಿಕ ನೀತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿ. ಹಿಂದೂಸ್ತಾನಿ ಸಂಗೀತ, ಕ್ರಿಕೆಟ್​, ತತ್ವಶಾಸ್ತ್ರ ಮತ್ತು ಕಾನೂನಿನ ವಿಷಯದ ತೀವ್ರ ಆಸಕ್ತಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ