AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Adelaide Test ಗುಡಿಸಿ ಗುಂಡಾತರವಾಯ್ತು ಭಾರತದ ಬ್ಯಾಟಿಂಗ್​.. ತಂಡಕ್ಕೆ ಮತ್ತೊಂದು ಆಘಾತ!

ಆಸ್ಟ್ರೇಲಿಯಾದ ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್​ನ ಬ್ಯಾಟಿಂಗ್​ ಮುಂದುವರಿಸಿರುವ ಭಾರತ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ತಾಜಾ ವರದಿಗಳ ಪ್ರಕಾರ ಭಾರತ ತಂಡವು ಟೆಸ್ಟ್ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್​ ಆಗಿದೆ. ಸ್ಕೋರ್​: 36ಕ್ಕೆ ಆಲೌಟ್​.

India vs Australia Adelaide Test ಗುಡಿಸಿ ಗುಂಡಾತರವಾಯ್ತು ಭಾರತದ ಬ್ಯಾಟಿಂಗ್​.. ತಂಡಕ್ಕೆ ಮತ್ತೊಂದು ಆಘಾತ!
ಭಾರತ ತಂಡವು ಟೆಸ್ಟ್ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್​
ಡಾ. ಭಾಸ್ಕರ ಹೆಗಡೆ
| Edited By: |

Updated on:Dec 19, 2020 | 11:29 AM

Share

ಅಡಿಲೇಡ್:​ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್​ನ ಎರಡನೇ ಇನ್ನಿಂಗ್ಸ್ ಬಳಿಕ ಭಾರತ ತುಂಬಾ ಸಂಕಷ್ಟಕ್ಕೆ ಸಿಲುಕಿದೆ. ಮೂರನೇ ದಿನ ತನ್ನ ಬ್ಯಾಟಿಂಗ್ ಮುಂದುವರಿಸಿದ ಭಾರತ ತಂಡವು ಟೆಸ್ಟ್ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್​ ಆಗಿದೆ.

ಕಳಪೆ ಬ್ಯಾಟಿಂಗ್​ನಿಂದಾಗಿ ಭಾರತ ತಂಡವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸ್ಕೋರ್​: 36ಕ್ಕೆ ಆಲೌಟ್​. ಇದರೊಂದಿಗೆ ಭಾರತ ಮೊದಲ ಇನ್ನಿಂಗ್ಸ್ ಲೀಡ್​ ಸೇರಿ 90 ರನ್ನುಗಳ ಮುನ್ನಡೆ ಸಾಧಿಸಿದೆ. ಅಂದರೆ ಆಸ್ಟ್ರೇಲಿಯಾಕ್ಕೆ 90 ರನ್​ಗಳ ಗುರಿ ನೀಡಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳದ್ದೇ ಇದುವರೆಗಿನ ಅತ್ಯಲ್ಪ ಸ್ಕೋರ್! ಭಾರತ 1974 ರಲ್ಲಿ ಒಂದು ಇನ್ನಿಂಗ್ಸ್​ನಲ್ಲಿ 47 ಗಳಿಸಿದ್ದು ಟೆಸ್ಟ್​ ಇನ್ನಿಂಗ್ಸ್​ ಒಂದರಲ್ಲಿ ಗಳಿಸಿದ ಕನಿಷ್ಠ ಮೊತ್ತವಾಗಿತ್ತು. ಅದೇ ರೀತಿ ಆಸ್ಟ್ರೇಲಿಯಾ ಕೂಡ ಒಂದು ಟೆಸ್ಟ್​ ಇನ್ನಿಂಗ್ಸ್​​ನಲ್ಲಿ ಗಳಿಸಿದ ಕನಿಷ್ಠ ಮೊತ್ತ 47 ರನ್​ಗಳು.

ಭಾರತ ತಂಡಕ್ಕೆ ಮತ್ತೊಂದು ಆಘಾತ! ಐತಿಹಾಸಿಕ ಅಲ್ಪ ಸ್ಕೋರಿಗೆ ಆಲ್​ ಔಟ್​ ಆಗಿದ್ದರೂ ಭಾರತ ತಂಡ ಉತ್ತಮ ಬೌಲಿಂಗ್​ ಮೂಲಕ ತಿರುಗೇಟು ನೀಡಬಹುದು ಎಂದು ಭಾವಿಸಲಾಗಿತ್ತು. ಆದ್ರೆ ಕೊನೆಯ ಬ್ಯಾಟ್ಸ್​ಮನ್​ ಆಗಿ ಔಟಾದ ಮೊಹಮದ್ ಶಮಿ ಗಾಯಗೊಂಡು ಮೈದಾನದಿಂದ ಹೊರನಡೆದಿದ್ದಾರೆ. ಅದೂ ಶಮಿ ಮುಂಗೈಗೆ ತೀವ್ರ ಪೆಟ್ಟು ಮಾಡಿಕೊಂಡಿದ್ದಾರೆ. ಬೌಲಿಂಗ್​ ಮಾಡಲೂ ಸಹ ಕಷ್ಟಕರವಾಗಬಹುದು ಎಂದು ತಿಳಿದುಬಂದಿದೆ. ಹಾಗೇನಾದರೂ ಆದ್ರೆ ಬೌಲಿಂಗ್​ನಲ್ಲಿ ಅತ್ಯುತ್ತಮ ಫಾರಂನಲ್ಲಿರುವ ಶಮಿ ಇಲ್ಲದೆಯೇ ಭಾರತ ತಂಡವು ಬೌಲಿಂಗ್ ದಾಳಿಗೆ ಇಳಿದರೆ ಇಕ್ಕಟ್ಟಿಗೆ ಸಿಲುಕಬೇಕಾದೀತು.

Published On - 11:17 am, Sat, 19 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್