AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Test Championship: ಇಂಗ್ಲೆಂಡ್​ ವಿರುದ್ದ ಅಧಿಕಾರಯುತ ಜಯದೊಂದಿಗೆ ಫೈನಲ್ ಪ್ರವೇಶಿಸಿದ ಭಾರತ!

ಇಂಗ್ಲೆಂಡ್ ವಿರುದ್ಧ ಸರಣಿ ಗೆಲುವು ಭಾರತಕ್ಕೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ (WTC ) ಆಡುವ ಅರ್ಹತೆ ದೊರಕಿಸಿದೆ. ಹಾಗೆ ನೋಡಿದರೆ, ಕೊನೆಯ ಟೆಸ್ಟ್​ ಪಂದ್ಯವನ್ನು ಭಾರತ ಡ್ರಾ ಮಾಡಿಕೊಂಡಿದ್ದರೂ ಡಬ್ಲ್ಯೂಟಿಸಿ ಫೈನಲ್ ಪ್ರವೇಶಿಸುತ್ತಿತ್ತು.

World Test Championship: ಇಂಗ್ಲೆಂಡ್​ ವಿರುದ್ದ ಅಧಿಕಾರಯುತ ಜಯದೊಂದಿಗೆ ಫೈನಲ್ ಪ್ರವೇಶಿಸಿದ ಭಾರತ!
ಟೀಂ ಇಂಡಿಯಾ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 06, 2021 | 7:06 PM

Share

ಇಂಗ್ಲೆಂಡ್ ವಿರುದ್ದ ಭಾರತ ಮೊದಲ ಟೆಸ್ಟ್ ಸೋತಾಗ ಭಾರತದ ಪ್ರದರ್ಶನವನ್ನು ಮತ್ತು ವಿರಾಟ್​ ಕೊಹ್ಲಿಯ ನಾಯಕತ್ವವನ್ನು ಬಹಳ ಜನರು ಟೀಕಿಸಿದ್ದರು. ಆದರೆ, ಭಾರತ ಸೋಲಿನ ವಿರುದ್ಧ ಪುಟಿದೆದ ಕೊಹ್ಲಿ ಪಡೆ ನಂತರದ ಮೂರು ಟೆಸ್ಟ್​ ಪಂದ್ಯಗಳನ್ನು ಬಹಳ ಸುಲಭವಾಗಿ ಗೆದ್ದು ಸರಣಿಯನ್ನು 3-1 ಅಂತರದಿಂದ ತನ್ನದಾಗಿಸಿಕೊಂಡಿದೆ. ಅದಕ್ಕೂ ಮಿಗಿಲಾದ ಸಂಗತಿಯೆಂದರೆ, ಈ ಸರಣಿ ಗೆಲುವು ಭಾರತಕ್ಕೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ (WTC ) ಆಡುವ ಅರ್ಹತೆ ದೊರಕಿಸಿದೆ. ಹಾಗೆ ನೋಡಿದರೆ, ಕೊನೆಯ ಟೆಸ್ಟ್​ ಪಂದ್ಯವನ್ನು ಭಾರತ ಡ್ರಾ ಮಾಡಿಕೊಂಡಿದ್ದರೂ ಡಬ್ಲ್ಯೂಟಿಸಿ ಫೈನಲ್ ಪ್ರವೇಶಿಸುತ್ತಿತ್ತು.

ನಾವು ಈಗಾಗಲೇ ಚರ್ಚಿಸಿರುವಂತೆ ನ್ಯೂಜಿಲೆಂಡ್ ಅದಾಗಲೇ  ಡಬ್ಲ್ಯೂಟಿಸಿ ಫೈನಲ್ ಪ್ರವೇಶಿಸಿದೆ. ಪ್ರತಿಷ್ಠಿತ ಫೈನಲ್ ಪಂದ್ಯವು ಜೂನ್​ನಲ್ಲಿ ಕ್ರಿಕೆಟ್ ಕಾಶಿಯೆಂದು ಕರೆಸಿಕೊಳ್ಳುವ  ಇಂಗ್ಲೆಂಡ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ. ಭಾರತದ ಅನೇಕ ಆಟಗಾರರು ಡಬ್ಲ್ಯೂಟಿಸಿ ಚಾಂಪಿಯನ್​ಶಿಪ್​ ಗೆಲ್ಲುವುದು 50 ಓವರ್​ಗಳ ಐಸಿಸಿ ವಿಶ್ವಕಪ್ ಗೆಲ್ಲುವದಕ್ಕಿಂತ ಮಹತ್ವದ್ದು ಅಂತ ಹೇಳಿದ್ದಾರೆ. ಹಾಗಾಗಿ, ಭಾರತೀಯರೆಲ್ಲರು ಆ ಪಂದ್ಯಕ್ಕಾಗಿ ಕಾತುರದಿಂದ ಎದುರು ನೋಡುತ್ತಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್​ ಮಧ್ಯೆ ಕೊನೆಯ ಟೆಸ್ಟ್ ಆರಂಭವಾಗುವ ಮೊದಲು ಡಬ್ಲ್ಯೂಟಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿತ್ತು ಮತ್ತು ಭಾರತ ಎರಡನೇ ಸ್ಥಾನದಲ್ಲಿತ್ತು. ಆದರೆ, ಇಂದಿನ ಭರ್ಜರಿ ಜಯದೊಂದಿಗೆ ಭಾರತ ಈ ಟೇಬಲ್​ನ ಅಗ್ರಸ್ಥಾನಕ್ಕೆ ಜಿಗಿದಿದೆ. ಭಾರತದ ಪರ್ಸೆಂಟೇಜ್ ಆಫ್ ಪಾಯಿಂಟ್ಸ್ (ಪಿಸಿಟಿ) 72.2 ಇದ್ದರೆ ನ್ಯೂಜಿಲೆಂಡ್ ಪಿಸಿಟಿ 70.0 ಇದೆ.

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಕ್ರಮವಾಗಿ 3 ಮತ್ತು 4 ನೇ ಸ್ಥಾನದಲ್ಲಿವೆ. 2019 ರ ಜೂನ್​​ನಿಂದ 2021 ರ ಜೂನ್​ವರೆಗಿನ ಡಬ್ಲ್ಯೂಟಿಸಿ ಸೈಕಲ್​ನಲ್ಲಿ ಭಾರತ 5 ಸರಣಿಗಳನ್ನಾಡಿ,  12 ಟೆಸ್ಟ್​ ಪಂದ್ಯಗಳನ್ನು ಗೆದ್ದು 4 ರಲ್ಲಿ ಮಾತ್ರ ಸೋತು 1 ಪಂದ್ಯ ಡ್ರಾ ಮಾಡಿಕೊಂಡಿದೆ. ಇದೇ ಅವಧಿಯಲ್ಲಿ ನ್ಯೂಜಿಲೆಂಡ್ ಸಹ 5 ಸರಣಿಗಳನ್ನಾಡಿ 7 ಗೆದ್ದು 4ರಲ್ಲಿ ಸೋಲುಂಡಿದೆ.    ​

ಅಂದ ಹಾಗೆ, ಐಸಿಸಿ ಟೆಸ್ಟ್​ ರ‍್ಯಾಕಿಂಗ್​ನಲ್ಲೂ ಬಾರತ ಮೊದಲ ಸ್ಥಾನಕ್ಕೆ ಜಿಗಿದಿದೆ. ಇಲ್ಲೂ ಭಾರತ ನ್ಯೂಜಿಲೆಂಡನ್ನು ಮೊದಲ ಸ್ಥಾನದಿಂದ ಪಲ್ಲಟಗೊಳಿಸಿದೆ.

ಹೊಸದಾಗಿ ಬಿಡುಗಡೆಯಾಗಿರುವ ಐಸಿಸಿ ರ‍್ಯಾಕಿಂಗ್​ಗಳ ಪ್ರಕಾರ,​ 122 ಅಂಕ ಗಳಿಸಿರುವ ಭಾರತ ಮೊದಲ ಸ್ಥಾನವನ್ನು ಆಕ್ರಮಿಸಿದರೆ, 118 ಅಂಕಗಳೊಂದಿಗೆ ನ್ಯೂಜಿಲೆಂಡ್ ಒಂದು ಸ್ಥಾನ ಕೆಳಗಡೆ ಜಾರಿದೆ.  ಆಸ್ಟ್ರೇಲಿಯಾ 113 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದರೆ 105 ಪಾಯಿಂಟ್ಸ್​ ಗಳಿಸಿರುವ ಇಂಗ್ಲೆಂಡ್ 4ನೇ  ಸ್ಥಾನದಲ್ಲಿದೆ.

ಇದನ್ನೂ ಓದಿ: India vs England 4th Test Day 3: ಭರ್ಜರಿ ಜಯದೊಂದಿಗೆ ಡಬ್ಲ್ಯೂಟಿಸಿ ಫೈನಲ್ ಪ್ರವೇಶಿಸಿದ ಭಾರತ

Published On - 5:23 pm, Sat, 6 March 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ