AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series | ಮೂರನೇ ಟೆಸ್ಟ್ ಪಂದ್ಯಕ್ಕೆ ವರುಣನ ಅಡ್ಡಿ.. ಆಸಿಸ್​ಗೆ ಆರಂಭಿಕ ಆಘಾತ

ಆಸಿಸ್​ ತಂಡದಿಂದ ವಿಲ್ ಪುಕೊವ್ಸ್ಕಿ ಹಾಗೂ ಇಂದಿನ ಪಂದ್ಯಕ್ಕೆ ಆಯ್ಕೆಯಾಗಿರುವ ಡೇವಿಡ್ ವಾರ್ನರ್ ಆರಂಭಿಕರಾಗಿ ಕಣಕ್ಕಿಳಿದರು. ಆದರೆ ತಂಡದ ಭರವಸೆಯ ಆಟಗಾರ ಡೇವಿಡ್ ವಾರ್ನರ್​ಗೆ(5 ರನ್) ಟೀಂ ಇಂಡಿಯಾದ ವೇಗಿ ಮಹಮ್ಮದ್​ ಸಿರಾಜ್​ ಬಹುಬೇಗನೆ ಪೆವಿಲಿಯನ್​ ದಾರಿ ತೋರಿಸಿದ್ದಾರೆ.

India vs Australia Test Series | ಮೂರನೇ ಟೆಸ್ಟ್ ಪಂದ್ಯಕ್ಕೆ ವರುಣನ ಅಡ್ಡಿ.. ಆಸಿಸ್​ಗೆ ಆರಂಭಿಕ ಆಘಾತ
ಸಿಡ್ನಿ ಮೈದಾನ
ಪೃಥ್ವಿಶಂಕರ
|

Updated on:Jan 07, 2021 | 2:09 PM

Share

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಮೂರನೇ ಪಂದ್ಯ ಇಂದು ಸಿಡ್ನಿಯಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಆಸಿಸ್​ ತಂಡದಿಂದ ವಿಲ್ ಪುಕೊವ್ಸ್ಕಿ ಹಾಗೂ ಇಂದಿನ ಪಂದ್ಯಕ್ಕೆ ಆಯ್ಕೆಯಾಗಿರುವ ಡೇವಿಡ್ ವಾರ್ನರ್ ಆರಂಭಿಕರಾಗಿ ಕಣಕ್ಕಿಳಿದರು. ಆದರೆ ತಂಡದ ಭರವಸೆಯ ಆಟಗಾರ ಡೇವಿಡ್ ವಾರ್ನರ್​ಗೆ(5 ರನ್) ಟೀಂ ಇಂಡಿಯಾದ ವೇಗಿ ಮಹಮ್ಮದ್​ ಸಿರಾಜ್​ ಬಹುಬೇಗನೆ ಪೆವಿಲಿಯನ್​ ದಾರಿ ತೋರಿಸಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ಆರಂಭಿಕ ಆಘಾತ ಅನುಭವಿಸಬೇಕಾಯಿತು.

ನಂತರ ಬಂದ ಮಾರ್ನಸ್ ಲಾಬುಸ್ಚೆನ್, ವಿಲ್ ಪುಕೊವ್ಸ್ಕಿ ಜೊತೆ ಸೇರಿ ತಾಳ್ಮೆಯ ಆಟಕ್ಕೆ ಮುಂದಾಗಿದ್ದಾರೆ. ಆದರೆ ಏಳು ಓವರ್‌ಗಳ ನಂತರ, ಮಳೆಯಿಂದಾಗಿ ಪಂದ್ಯವನ್ನು ನಿಲ್ಲಿಸಲಾಗಿದೆ. ಅಂಪೈರ್‌ಗಳು ಪಿಚ್ ಪರಿಶೀಲಿಸುತ್ತಿದ್ದು, ಊಟದ ನಂತರವೂ ಸಹ ಆಟ ಪ್ರಾರಂಭವಾಗಿಲ್ಲ. ಸದ್ಯ ಆಸ್ಟ್ರೇಲಿಯಾ 21 ರನ್​ಗೆ 1 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

Published On - 9:23 am, Thu, 7 January 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ