AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series | ರೋಹಿತ್​-ಗಿಲ್​ ಔಟ್​; ಅಂತಿಮ ದಿನದಲ್ಲಿ ಗೆಲ್ಲಲು ಭಾರತಕ್ಕೆ ಬೇಕು 309 ರನ್​, ಆಸಿಸ್​ಗೆ ಕೇವಲ 8 ವಿಕೆಟ್​

ನಾಳಿನ ಹಾಗೂ ಅಂತಿಮ ದಿನದ ಆಟಕ್ಕೆ ರಹಾನೆ ಹಾಗೂ ಪೂಜಾರ ಬ್ಯಾಟಿಂಗ್​ ಉಳಿಸಿಕೊಂಡಿದ್ದು, ಗೆಲ್ಲಲು ಭಾರತಕ್ಕೆ ಕೊನೆಯ ದಿನ 309 ರನ್‌ಗಳ ಅಗತ್ಯವಿದ್ದರೆ, ಆಸ್ಟ್ರೇಲಿಯಾಕ್ಕೆ 8 ವಿಕೆಟ್‌ಗಳ ಅಗತ್ಯವಿದೆ. ಈ ಪಂದ್ಯವನ್ನು ಗೆಲ್ಲುವ ತಂಡವು ಸರಣಿಯಲ್ಲಿ ಮುನ್ನಡೆ ಸಾಧಿಸುತ್ತದೆ.

India vs Australia Test Series | ರೋಹಿತ್​-ಗಿಲ್​ ಔಟ್​; ಅಂತಿಮ ದಿನದಲ್ಲಿ ಗೆಲ್ಲಲು ಭಾರತಕ್ಕೆ ಬೇಕು 309 ರನ್​, ಆಸಿಸ್​ಗೆ ಕೇವಲ 8 ವಿಕೆಟ್​
ರೋಹಿತ್​ ಶರ್ಮ ಹಾಗೂ ಶುಭ​ಮನ್​ ಗಿಲ್​
ಪೃಥ್ವಿಶಂಕರ
| Edited By: |

Updated on:Jan 10, 2021 | 1:28 PM

Share

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಅಲೆನ್ ಟ್ರೋಫಿಯ ಮೂರನೇ ಟೆಸ್ಟ್ ಸಿಡ್ನಿಯಲ್ಲಿ ನಡೆಯುತ್ತಿದೆ. ನಾಲ್ಕನೇ ದಿನ ಆಸ್ಟ್ರೇಲಿಯಾ 312 ರನ್‌ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿ ಭಾರತಕ್ಕೆ 407 ರನ್‌ಗಳ ಗುರಿ ನೀಡಿತು.

ಆಸ್ಟ್ರೇಲಿಯಾ ನೀಡಿದ ಬೃಹತ್​ ಮೊತ್ತವನ್ನು ಬೆನ್ನತ್ತಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ ಎದುರಾಗಿದೆ. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್​ ಶರ್ಮ ಹಾಗೂ ಶುಬ್​ಮನ್​ ಗಿಲ್​ ಉತ್ತಮ ಅಡಿಪಾಯ ಹಾಕಿದರು. ರೋಹಿತ್​ ಜೊತೆಗೂಡಿ ತಂಡಕ್ಕೆ ಅಗತ್ಯದ ರನ್​ ಕಲೆ ಹಾಕಿದ ಗಿಲ್​ 36 ರನ್​ ಗಳಿಸಿದ್ದಾಗ ಹ್ಯಾಝಲ್​ವುಡ್​ಗೆ ವಿಕೆಟ್​ ಒಪ್ಪಿಸಿದರು.

ನಂತರ ಬಂದ ಚೇತೇಶ್ವರ್​ ಪೂಜಾರ, ರೋಹಿತ್​ಗೆ ಉತ್ತಮ ಸಾಥ್​ ನೀಡಿದರು. ಹೀಗಾಗಿ ಅವಶ್ಯಕ ಅರ್ಧ ಶತಕ ಬಾರಿಸಿದ ರೋಹಿತ್​ ತಾಳ್ಮೆಯ ಆಟಕ್ಕೆ ಮುಂದಾಗದೆ ಪ್ಯಾಟ್​ ಕಮಿನ್ಸ್​ಗೆ ತಮ್ಮ ವಿಕೆಟ್​ ಒಪ್ಪಿಸಿದರು. ರೋಹಿತ್​ ಔಟಾದ ನಂತರ ಪೂಜಾರ ಜೊತೆಗೂಡಿರುವ ನಾಯಕ ರಹಾನೆ ಮೇಲೆ ಟೀಂ ಇಂಡಿಯಾದ ಗೆಲುವು ನಿಂತಿದೆ. ಈಗಾಗಲೇ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿರುವ ರಿಷಭ್​ ಪಂತ್​ ಹಾಗೂ ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಬೇಕಾದ ಜವಾಬ್ದಾರಿ ಈಗ ನಾಯಕ ರಹಾನೆ ಮೇಲೆ ನಿಂತಿದೆ.

ನಾಳಿನ ಹಾಗೂ ಅಂತಿಮ ದಿನದ ಆಟಕ್ಕೆ ರಹಾನೆ ಹಾಗೂ ಪೂಜಾರ ಬ್ಯಾಟಿಂಗ್​ ಉಳಿಸಿಕೊಂಡಿದ್ದು, ಗೆಲ್ಲಲು ಭಾರತಕ್ಕೆ ಕೊನೆಯ ದಿನ 309 ರನ್‌ಗಳ ಅಗತ್ಯವಿದ್ದರೆ, ಆಸ್ಟ್ರೇಲಿಯಾಕ್ಕೆ 8 ವಿಕೆಟ್‌ಗಳ ಅಗತ್ಯವಿದೆ. ಈ ಪಂದ್ಯವನ್ನು ಗೆಲ್ಲುವ ತಂಡವು ಸರಣಿಯಲ್ಲಿ ಮುನ್ನಡೆ ಸಾಧಿಸುತ್ತದೆ.

India vs Australia Test Series | ಭಾರತೀಯ ಆಟಗಾರರಿಗೆ ಜನಾಂಗೀಯ ನಿಂದನೆ.. ಪಂದ್ಯವನ್ನ ಅರ್ಧಕ್ಕೆ ನಿಲ್ಲಿಸಿದ ನಾಯಕ ರಹಾನೆ..!

Published On - 1:27 pm, Sun, 10 January 21

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು