AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series | ರೋಹಿತ್​-ಗಿಲ್​ ಔಟ್​; ಅಂತಿಮ ದಿನದಲ್ಲಿ ಗೆಲ್ಲಲು ಭಾರತಕ್ಕೆ ಬೇಕು 309 ರನ್​, ಆಸಿಸ್​ಗೆ ಕೇವಲ 8 ವಿಕೆಟ್​

ನಾಳಿನ ಹಾಗೂ ಅಂತಿಮ ದಿನದ ಆಟಕ್ಕೆ ರಹಾನೆ ಹಾಗೂ ಪೂಜಾರ ಬ್ಯಾಟಿಂಗ್​ ಉಳಿಸಿಕೊಂಡಿದ್ದು, ಗೆಲ್ಲಲು ಭಾರತಕ್ಕೆ ಕೊನೆಯ ದಿನ 309 ರನ್‌ಗಳ ಅಗತ್ಯವಿದ್ದರೆ, ಆಸ್ಟ್ರೇಲಿಯಾಕ್ಕೆ 8 ವಿಕೆಟ್‌ಗಳ ಅಗತ್ಯವಿದೆ. ಈ ಪಂದ್ಯವನ್ನು ಗೆಲ್ಲುವ ತಂಡವು ಸರಣಿಯಲ್ಲಿ ಮುನ್ನಡೆ ಸಾಧಿಸುತ್ತದೆ.

India vs Australia Test Series | ರೋಹಿತ್​-ಗಿಲ್​ ಔಟ್​; ಅಂತಿಮ ದಿನದಲ್ಲಿ ಗೆಲ್ಲಲು ಭಾರತಕ್ಕೆ ಬೇಕು 309 ರನ್​, ಆಸಿಸ್​ಗೆ ಕೇವಲ 8 ವಿಕೆಟ್​
ರೋಹಿತ್​ ಶರ್ಮ ಹಾಗೂ ಶುಭ​ಮನ್​ ಗಿಲ್​
ಪೃಥ್ವಿಶಂಕರ
| Edited By: |

Updated on:Jan 10, 2021 | 1:28 PM

Share

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಅಲೆನ್ ಟ್ರೋಫಿಯ ಮೂರನೇ ಟೆಸ್ಟ್ ಸಿಡ್ನಿಯಲ್ಲಿ ನಡೆಯುತ್ತಿದೆ. ನಾಲ್ಕನೇ ದಿನ ಆಸ್ಟ್ರೇಲಿಯಾ 312 ರನ್‌ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿ ಭಾರತಕ್ಕೆ 407 ರನ್‌ಗಳ ಗುರಿ ನೀಡಿತು.

ಆಸ್ಟ್ರೇಲಿಯಾ ನೀಡಿದ ಬೃಹತ್​ ಮೊತ್ತವನ್ನು ಬೆನ್ನತ್ತಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ ಎದುರಾಗಿದೆ. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್​ ಶರ್ಮ ಹಾಗೂ ಶುಬ್​ಮನ್​ ಗಿಲ್​ ಉತ್ತಮ ಅಡಿಪಾಯ ಹಾಕಿದರು. ರೋಹಿತ್​ ಜೊತೆಗೂಡಿ ತಂಡಕ್ಕೆ ಅಗತ್ಯದ ರನ್​ ಕಲೆ ಹಾಕಿದ ಗಿಲ್​ 36 ರನ್​ ಗಳಿಸಿದ್ದಾಗ ಹ್ಯಾಝಲ್​ವುಡ್​ಗೆ ವಿಕೆಟ್​ ಒಪ್ಪಿಸಿದರು.

ನಂತರ ಬಂದ ಚೇತೇಶ್ವರ್​ ಪೂಜಾರ, ರೋಹಿತ್​ಗೆ ಉತ್ತಮ ಸಾಥ್​ ನೀಡಿದರು. ಹೀಗಾಗಿ ಅವಶ್ಯಕ ಅರ್ಧ ಶತಕ ಬಾರಿಸಿದ ರೋಹಿತ್​ ತಾಳ್ಮೆಯ ಆಟಕ್ಕೆ ಮುಂದಾಗದೆ ಪ್ಯಾಟ್​ ಕಮಿನ್ಸ್​ಗೆ ತಮ್ಮ ವಿಕೆಟ್​ ಒಪ್ಪಿಸಿದರು. ರೋಹಿತ್​ ಔಟಾದ ನಂತರ ಪೂಜಾರ ಜೊತೆಗೂಡಿರುವ ನಾಯಕ ರಹಾನೆ ಮೇಲೆ ಟೀಂ ಇಂಡಿಯಾದ ಗೆಲುವು ನಿಂತಿದೆ. ಈಗಾಗಲೇ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿರುವ ರಿಷಭ್​ ಪಂತ್​ ಹಾಗೂ ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಬೇಕಾದ ಜವಾಬ್ದಾರಿ ಈಗ ನಾಯಕ ರಹಾನೆ ಮೇಲೆ ನಿಂತಿದೆ.

ನಾಳಿನ ಹಾಗೂ ಅಂತಿಮ ದಿನದ ಆಟಕ್ಕೆ ರಹಾನೆ ಹಾಗೂ ಪೂಜಾರ ಬ್ಯಾಟಿಂಗ್​ ಉಳಿಸಿಕೊಂಡಿದ್ದು, ಗೆಲ್ಲಲು ಭಾರತಕ್ಕೆ ಕೊನೆಯ ದಿನ 309 ರನ್‌ಗಳ ಅಗತ್ಯವಿದ್ದರೆ, ಆಸ್ಟ್ರೇಲಿಯಾಕ್ಕೆ 8 ವಿಕೆಟ್‌ಗಳ ಅಗತ್ಯವಿದೆ. ಈ ಪಂದ್ಯವನ್ನು ಗೆಲ್ಲುವ ತಂಡವು ಸರಣಿಯಲ್ಲಿ ಮುನ್ನಡೆ ಸಾಧಿಸುತ್ತದೆ.

India vs Australia Test Series | ಭಾರತೀಯ ಆಟಗಾರರಿಗೆ ಜನಾಂಗೀಯ ನಿಂದನೆ.. ಪಂದ್ಯವನ್ನ ಅರ್ಧಕ್ಕೆ ನಿಲ್ಲಿಸಿದ ನಾಯಕ ರಹಾನೆ..!

Published On - 1:27 pm, Sun, 10 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್