AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 275 ರನ್ ಗಳಿಸಿದೆ.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 15, 2021 | 1:38 PM

Share

ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 274 ರನ್ ಗಳಿಸಿದೆ. ಭಾರತದ ಪರ ನಟರಾಜನ್​ 2 ವಿಕೆಟ್​ ಪಡೆದು ಮಿಂಚಿದರೆ,ಮಹಮದ್ ಸಿರಾಜ್​, ಶಾರ್ದೂಲ್​ ಠಾಕೂರ್​, ವಾಷಿಂಗ್​ಟನ್​ ಸುಂದರ್​ ತಲಾ 1 ವಿಕೆಟ್​ ಪಡೆದಿದ್ದಾರೆ.

ಟಾಸ್​ ಗೆದ್ದು ಬ್ಯಾಟಿಂಗ್​ ಆರಂಭಿಸಿದ ಆಸಿಸ್​ನ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್​ ವಾರ್ನರ್ (1 ರನ್​)​ ಹಾಗೂ ಹ್ಯಾರಿಸ್​ (5 ರನ್) ಬಹುಬೇಗನೆ ಟೀಂ ಇಂಡಿಯಾದ ದಾಳಿಗೆ ಬಲಿಯಾದರು. ನಂತರ ಬಂದ ಸ್ಮಿತ್​ ಹಾಗೂ ಲಾಬುಶೆನ್ ಅವರ ಅರ್ಧಶತಕದ ಜೊತೆಯಾಟ ತಂಡಕ್ಕೆ ನೆರವಾಯಿತು. ಉತ್ತಮವಾಗಿ ಆಡುತ್ತಿದ್ದ ಸ್ಮಿತ್​ಗೆ (36 ರನ್) ವಾಷಿಂಗ್​ಟನ್​ ಸುಂದರ್​ ಪೆವಿಲಿಯನ್​ ದಾರಿ ತೋರಿಸಿದರು.

ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಕೈಚೆಲ್ಲಿದ ಕ್ಯಾಚ್​ನ ಸದುಪಯೋಗ ಪಡಿಸಿಕೊಂಡ ಲಾಬುಶೆನ್ ಭರ್ಜರಿ ಶತಕ ಬಾರಿಸಿ ಸಂಭ್ರಮಿಸಿದರು. ಶತಕದೊಂದಿಗೆ ಇನ್ನಿಂಗ್ಸ್​ ಮುಂದುವರೆಸಿದ್ದ ಲಾಬುಶೆನ್ ನಟರಾಜ್​ನ ದಾಳಿಗೆ ಬಲಿಯಾದರು. ನಂತರ 45 ರನ್​ ಗಳಿಸಿ ಅಪಾಯಕಾರಿಯಾಗುತ್ತಿದ್ದ ಮ್ಯಾಥ್ಯೂ ವೆಡ್​ನನ್ನು ಸಹ ನಟರಾಜನ್ ತಮ್ಮ ಯಾರ್ಕರ್​ ದಾಳಿಯಿಂದ ಔಟಾಗುವಂತೆ ಮಾಡಿದರು. ನಾಳಿನ ಆಟಕ್ಕೆ ಕ್ಯಾಮರೂನ್​ ಗ್ರೀನ್ ಹಾಗೂ ಟಿಂ ಪೈನ್​ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ.

Published On - 1:22 pm, Fri, 15 January 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!