AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 275 ರನ್ ಗಳಿಸಿದೆ.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
Follow us
ಪೃಥ್ವಿಶಂಕರ
|

Updated on:Jan 15, 2021 | 1:38 PM

ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 274 ರನ್ ಗಳಿಸಿದೆ. ಭಾರತದ ಪರ ನಟರಾಜನ್​ 2 ವಿಕೆಟ್​ ಪಡೆದು ಮಿಂಚಿದರೆ,ಮಹಮದ್ ಸಿರಾಜ್​, ಶಾರ್ದೂಲ್​ ಠಾಕೂರ್​, ವಾಷಿಂಗ್​ಟನ್​ ಸುಂದರ್​ ತಲಾ 1 ವಿಕೆಟ್​ ಪಡೆದಿದ್ದಾರೆ.

ಟಾಸ್​ ಗೆದ್ದು ಬ್ಯಾಟಿಂಗ್​ ಆರಂಭಿಸಿದ ಆಸಿಸ್​ನ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್​ ವಾರ್ನರ್ (1 ರನ್​)​ ಹಾಗೂ ಹ್ಯಾರಿಸ್​ (5 ರನ್) ಬಹುಬೇಗನೆ ಟೀಂ ಇಂಡಿಯಾದ ದಾಳಿಗೆ ಬಲಿಯಾದರು. ನಂತರ ಬಂದ ಸ್ಮಿತ್​ ಹಾಗೂ ಲಾಬುಶೆನ್ ಅವರ ಅರ್ಧಶತಕದ ಜೊತೆಯಾಟ ತಂಡಕ್ಕೆ ನೆರವಾಯಿತು. ಉತ್ತಮವಾಗಿ ಆಡುತ್ತಿದ್ದ ಸ್ಮಿತ್​ಗೆ (36 ರನ್) ವಾಷಿಂಗ್​ಟನ್​ ಸುಂದರ್​ ಪೆವಿಲಿಯನ್​ ದಾರಿ ತೋರಿಸಿದರು.

ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಕೈಚೆಲ್ಲಿದ ಕ್ಯಾಚ್​ನ ಸದುಪಯೋಗ ಪಡಿಸಿಕೊಂಡ ಲಾಬುಶೆನ್ ಭರ್ಜರಿ ಶತಕ ಬಾರಿಸಿ ಸಂಭ್ರಮಿಸಿದರು. ಶತಕದೊಂದಿಗೆ ಇನ್ನಿಂಗ್ಸ್​ ಮುಂದುವರೆಸಿದ್ದ ಲಾಬುಶೆನ್ ನಟರಾಜ್​ನ ದಾಳಿಗೆ ಬಲಿಯಾದರು. ನಂತರ 45 ರನ್​ ಗಳಿಸಿ ಅಪಾಯಕಾರಿಯಾಗುತ್ತಿದ್ದ ಮ್ಯಾಥ್ಯೂ ವೆಡ್​ನನ್ನು ಸಹ ನಟರಾಜನ್ ತಮ್ಮ ಯಾರ್ಕರ್​ ದಾಳಿಯಿಂದ ಔಟಾಗುವಂತೆ ಮಾಡಿದರು. ನಾಳಿನ ಆಟಕ್ಕೆ ಕ್ಯಾಮರೂನ್​ ಗ್ರೀನ್ ಹಾಗೂ ಟಿಂ ಪೈನ್​ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ.

Published On - 1:22 pm, Fri, 15 January 21

ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್