AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 275 ರನ್ ಗಳಿಸಿದೆ.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 15, 2021 | 1:38 PM

Share

ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 274 ರನ್ ಗಳಿಸಿದೆ. ಭಾರತದ ಪರ ನಟರಾಜನ್​ 2 ವಿಕೆಟ್​ ಪಡೆದು ಮಿಂಚಿದರೆ,ಮಹಮದ್ ಸಿರಾಜ್​, ಶಾರ್ದೂಲ್​ ಠಾಕೂರ್​, ವಾಷಿಂಗ್​ಟನ್​ ಸುಂದರ್​ ತಲಾ 1 ವಿಕೆಟ್​ ಪಡೆದಿದ್ದಾರೆ.

ಟಾಸ್​ ಗೆದ್ದು ಬ್ಯಾಟಿಂಗ್​ ಆರಂಭಿಸಿದ ಆಸಿಸ್​ನ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್​ ವಾರ್ನರ್ (1 ರನ್​)​ ಹಾಗೂ ಹ್ಯಾರಿಸ್​ (5 ರನ್) ಬಹುಬೇಗನೆ ಟೀಂ ಇಂಡಿಯಾದ ದಾಳಿಗೆ ಬಲಿಯಾದರು. ನಂತರ ಬಂದ ಸ್ಮಿತ್​ ಹಾಗೂ ಲಾಬುಶೆನ್ ಅವರ ಅರ್ಧಶತಕದ ಜೊತೆಯಾಟ ತಂಡಕ್ಕೆ ನೆರವಾಯಿತು. ಉತ್ತಮವಾಗಿ ಆಡುತ್ತಿದ್ದ ಸ್ಮಿತ್​ಗೆ (36 ರನ್) ವಾಷಿಂಗ್​ಟನ್​ ಸುಂದರ್​ ಪೆವಿಲಿಯನ್​ ದಾರಿ ತೋರಿಸಿದರು.

ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಕೈಚೆಲ್ಲಿದ ಕ್ಯಾಚ್​ನ ಸದುಪಯೋಗ ಪಡಿಸಿಕೊಂಡ ಲಾಬುಶೆನ್ ಭರ್ಜರಿ ಶತಕ ಬಾರಿಸಿ ಸಂಭ್ರಮಿಸಿದರು. ಶತಕದೊಂದಿಗೆ ಇನ್ನಿಂಗ್ಸ್​ ಮುಂದುವರೆಸಿದ್ದ ಲಾಬುಶೆನ್ ನಟರಾಜ್​ನ ದಾಳಿಗೆ ಬಲಿಯಾದರು. ನಂತರ 45 ರನ್​ ಗಳಿಸಿ ಅಪಾಯಕಾರಿಯಾಗುತ್ತಿದ್ದ ಮ್ಯಾಥ್ಯೂ ವೆಡ್​ನನ್ನು ಸಹ ನಟರಾಜನ್ ತಮ್ಮ ಯಾರ್ಕರ್​ ದಾಳಿಯಿಂದ ಔಟಾಗುವಂತೆ ಮಾಡಿದರು. ನಾಳಿನ ಆಟಕ್ಕೆ ಕ್ಯಾಮರೂನ್​ ಗ್ರೀನ್ ಹಾಗೂ ಟಿಂ ಪೈನ್​ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ.

Published On - 1:22 pm, Fri, 15 January 21

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!