AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 275 ರನ್ ಗಳಿಸಿದೆ.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 15, 2021 | 1:38 PM

Share

ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 274 ರನ್ ಗಳಿಸಿದೆ. ಭಾರತದ ಪರ ನಟರಾಜನ್​ 2 ವಿಕೆಟ್​ ಪಡೆದು ಮಿಂಚಿದರೆ,ಮಹಮದ್ ಸಿರಾಜ್​, ಶಾರ್ದೂಲ್​ ಠಾಕೂರ್​, ವಾಷಿಂಗ್​ಟನ್​ ಸುಂದರ್​ ತಲಾ 1 ವಿಕೆಟ್​ ಪಡೆದಿದ್ದಾರೆ.

ಟಾಸ್​ ಗೆದ್ದು ಬ್ಯಾಟಿಂಗ್​ ಆರಂಭಿಸಿದ ಆಸಿಸ್​ನ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್​ ವಾರ್ನರ್ (1 ರನ್​)​ ಹಾಗೂ ಹ್ಯಾರಿಸ್​ (5 ರನ್) ಬಹುಬೇಗನೆ ಟೀಂ ಇಂಡಿಯಾದ ದಾಳಿಗೆ ಬಲಿಯಾದರು. ನಂತರ ಬಂದ ಸ್ಮಿತ್​ ಹಾಗೂ ಲಾಬುಶೆನ್ ಅವರ ಅರ್ಧಶತಕದ ಜೊತೆಯಾಟ ತಂಡಕ್ಕೆ ನೆರವಾಯಿತು. ಉತ್ತಮವಾಗಿ ಆಡುತ್ತಿದ್ದ ಸ್ಮಿತ್​ಗೆ (36 ರನ್) ವಾಷಿಂಗ್​ಟನ್​ ಸುಂದರ್​ ಪೆವಿಲಿಯನ್​ ದಾರಿ ತೋರಿಸಿದರು.

ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಕೈಚೆಲ್ಲಿದ ಕ್ಯಾಚ್​ನ ಸದುಪಯೋಗ ಪಡಿಸಿಕೊಂಡ ಲಾಬುಶೆನ್ ಭರ್ಜರಿ ಶತಕ ಬಾರಿಸಿ ಸಂಭ್ರಮಿಸಿದರು. ಶತಕದೊಂದಿಗೆ ಇನ್ನಿಂಗ್ಸ್​ ಮುಂದುವರೆಸಿದ್ದ ಲಾಬುಶೆನ್ ನಟರಾಜ್​ನ ದಾಳಿಗೆ ಬಲಿಯಾದರು. ನಂತರ 45 ರನ್​ ಗಳಿಸಿ ಅಪಾಯಕಾರಿಯಾಗುತ್ತಿದ್ದ ಮ್ಯಾಥ್ಯೂ ವೆಡ್​ನನ್ನು ಸಹ ನಟರಾಜನ್ ತಮ್ಮ ಯಾರ್ಕರ್​ ದಾಳಿಯಿಂದ ಔಟಾಗುವಂತೆ ಮಾಡಿದರು. ನಾಳಿನ ಆಟಕ್ಕೆ ಕ್ಯಾಮರೂನ್​ ಗ್ರೀನ್ ಹಾಗೂ ಟಿಂ ಪೈನ್​ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ.

Published On - 1:22 pm, Fri, 15 January 21

Follow Us
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?