AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series ಅಂತಿಮ ಟೆಸ್ಟ್​: 369 ರನ್​ಗೆ ಆಸಿಸ್​ ಆಲ್​ಔಟ್.. ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ..!

ಈಗಾಗಲೇ ಪಂದ್ಯದ ಎರಡನೇ ದಿನದ ಆಟ ಶುರುವಾಗಿದ್ದು, ಆಸ್ಟ್ರೇಲಿಯಾ ತಂಡ 2ನೇ ದಿನದ ಮೊದಲ ಸೆಷನ್‌ನಲ್ಲಿ ತನ್ನೇಲ್ಲಾ ವಿಕೆಟ್​ ಕಳೆದುಕೊಂಡು 369 ರನ್​ಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ.

India vs Australia Test Series ಅಂತಿಮ ಟೆಸ್ಟ್​: 369 ರನ್​ಗೆ ಆಸಿಸ್​ ಆಲ್​ಔಟ್.. ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ..!
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 16, 2021 | 9:44 AM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಈಗಾಗಲೇ ಪಂದ್ಯದ ಎರಡನೇ ದಿನದ ಆಟ ಶುರುವಾಗಿದ್ದು, ಆಸ್ಟ್ರೇಲಿಯಾ ತಂಡ 2ನೇ ದಿನದ ಮೊದಲ ಸೆಷನ್‌ನಲ್ಲಿ ತನ್ನೇಲ್ಲಾ ವಿಕೆಟ್​ ಕಳೆದುಕೊಂಡು 369 ರನ್​ಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ.

ಮೊದಲನೇ ದಿನದಾಟದಲ್ಲಿ 5 ವಿಕೆಟ್​ ಕಳೆದುಕೊಂಡು 274 ರನ್​ ಗಳಿಸಿದ್ದ ಆಸ್ಟ್ರೇಲಿಯಾ, 2ನೇ ದಿನದಾಟದಲ್ಲಿ ಕ್ಯಾಮರೂನ್​ ಗ್ರೀನ್​ ಅವರ 47 ರನ್​ ಹಾಗೂ ಟಿಮ್​ ಪೈನ್​ ಅವರ ಅರ್ಧಶತಕದ ನೆರವಿನಂದಾಗಿ 369 ರನ್​ ಗಳಿಸಿತು. ಈ ಇಬ್ಬರು ಆಟಗಾರರನ್ನ ಹೊರತು ಪಡಿಸಿದರೆ, ಆಸಿಸ್​ನ ಕೆಳಕ್ರಮಾಂಕದ ಬ್ಯಾಟ್ಸ್​ಮನ್​ಗಳು ಅಷ್ಟೇನೂ ಪ್ರತಿರೋಧ ತೋರಲಿಲ್ಲ ಹೀಗಾಗಿ ಆಸಿಸ್​ ತಂಡ ತನ್ನೇಲ್ಲಾ ವಿಕೆಟ್​ ಕಳೆದುಕೊಂಡು 369 ಗಳಿಸಿತು.

ಭಾರತದ ಪರ ಪದಾರ್ಪಣೆ ಪಂದ್ಯದಲ್ಲೇ ಮಿಂಚಿದ ನಟರಾಜನ್ ಹಾಗೂ ವಾಷಿಂಗ್​ಟನ್​ ಸುಂದರ್ ತಲಾ 3 ವಿಕೆಟ್​ ಪಡೆದು ಮಿಂಚಿದರು. ನಟರಾಜನ್​ಗೆ ಉತ್ತಮವಾಗಿ ಸಾಥ್​ ನೀಡಿದ ಶಾರ್ದೂಲ್​ ಠಾಕೂರ್​ ಸಹ 3 ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾದರು.ವೇಗಿ ಮಹಮದ್​ ಸಿರಾಜ್​ 1 ವಿಕೆಟ್​ ಪಡೆದು ಭಾರತಕ್ಕೆ ನೆರವಾದರು.

ಆಸ್ಟ್ರೇಲಿಯಾ ನೀಡಿರುವ ಸವಾಲಿನ ಮೊತ್ತವನ್ನ ಬೆನ್ನತ್ತಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ ಎದುರಾಗಿದೆ. ಕಳೆದ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿ ಮಿಂಚಿದ ಶುಭ್​ಮನ್​ ಗಿಲ್​ ಈ ಪಂದ್ಯದಲ್ಲಿ ಬಹುಬೇಗನ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಸೇರಿಕೊಂಡಿದ್ದಾರೆ.ರೋಹಿತ್​ ಶರ್ಮ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಗಿಲ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರು. 2ನೇ ದಿನದಾಟದಲ್ಲಿ 2ನೇ ಸೆಷನ್​ ಆಡುತ್ತಿರುವ ಟೀಂ ಇಂಡಿಯಾ 1 ವಿಕೆಟ್​ ನಷ್ಟಕ್ಕೆ 51 ರನ್​ ಗಳಿಸಿದೆ. ಆರಂಭಿಕ ರೋಹಿತ್​ ಶರ್ಮ ಅವರಿಗೆ ಚೇತೇಶ್ವರ್​ ಪೂಜಾರ ಜೊತೆಯಾಗಿದ್ದಾರೆ.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..

Published On - 9:27 am, Sat, 16 January 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು