AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series ಅಂತಿಮ ಟೆಸ್ಟ್​: 369 ರನ್​ಗೆ ಆಸಿಸ್​ ಆಲ್​ಔಟ್.. ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ..!

ಈಗಾಗಲೇ ಪಂದ್ಯದ ಎರಡನೇ ದಿನದ ಆಟ ಶುರುವಾಗಿದ್ದು, ಆಸ್ಟ್ರೇಲಿಯಾ ತಂಡ 2ನೇ ದಿನದ ಮೊದಲ ಸೆಷನ್‌ನಲ್ಲಿ ತನ್ನೇಲ್ಲಾ ವಿಕೆಟ್​ ಕಳೆದುಕೊಂಡು 369 ರನ್​ಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ.

India vs Australia Test Series ಅಂತಿಮ ಟೆಸ್ಟ್​: 369 ರನ್​ಗೆ ಆಸಿಸ್​ ಆಲ್​ಔಟ್.. ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ..!
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 16, 2021 | 9:44 AM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಈಗಾಗಲೇ ಪಂದ್ಯದ ಎರಡನೇ ದಿನದ ಆಟ ಶುರುವಾಗಿದ್ದು, ಆಸ್ಟ್ರೇಲಿಯಾ ತಂಡ 2ನೇ ದಿನದ ಮೊದಲ ಸೆಷನ್‌ನಲ್ಲಿ ತನ್ನೇಲ್ಲಾ ವಿಕೆಟ್​ ಕಳೆದುಕೊಂಡು 369 ರನ್​ಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ.

ಮೊದಲನೇ ದಿನದಾಟದಲ್ಲಿ 5 ವಿಕೆಟ್​ ಕಳೆದುಕೊಂಡು 274 ರನ್​ ಗಳಿಸಿದ್ದ ಆಸ್ಟ್ರೇಲಿಯಾ, 2ನೇ ದಿನದಾಟದಲ್ಲಿ ಕ್ಯಾಮರೂನ್​ ಗ್ರೀನ್​ ಅವರ 47 ರನ್​ ಹಾಗೂ ಟಿಮ್​ ಪೈನ್​ ಅವರ ಅರ್ಧಶತಕದ ನೆರವಿನಂದಾಗಿ 369 ರನ್​ ಗಳಿಸಿತು. ಈ ಇಬ್ಬರು ಆಟಗಾರರನ್ನ ಹೊರತು ಪಡಿಸಿದರೆ, ಆಸಿಸ್​ನ ಕೆಳಕ್ರಮಾಂಕದ ಬ್ಯಾಟ್ಸ್​ಮನ್​ಗಳು ಅಷ್ಟೇನೂ ಪ್ರತಿರೋಧ ತೋರಲಿಲ್ಲ ಹೀಗಾಗಿ ಆಸಿಸ್​ ತಂಡ ತನ್ನೇಲ್ಲಾ ವಿಕೆಟ್​ ಕಳೆದುಕೊಂಡು 369 ಗಳಿಸಿತು.

ಭಾರತದ ಪರ ಪದಾರ್ಪಣೆ ಪಂದ್ಯದಲ್ಲೇ ಮಿಂಚಿದ ನಟರಾಜನ್ ಹಾಗೂ ವಾಷಿಂಗ್​ಟನ್​ ಸುಂದರ್ ತಲಾ 3 ವಿಕೆಟ್​ ಪಡೆದು ಮಿಂಚಿದರು. ನಟರಾಜನ್​ಗೆ ಉತ್ತಮವಾಗಿ ಸಾಥ್​ ನೀಡಿದ ಶಾರ್ದೂಲ್​ ಠಾಕೂರ್​ ಸಹ 3 ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾದರು.ವೇಗಿ ಮಹಮದ್​ ಸಿರಾಜ್​ 1 ವಿಕೆಟ್​ ಪಡೆದು ಭಾರತಕ್ಕೆ ನೆರವಾದರು.

ಆಸ್ಟ್ರೇಲಿಯಾ ನೀಡಿರುವ ಸವಾಲಿನ ಮೊತ್ತವನ್ನ ಬೆನ್ನತ್ತಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ ಎದುರಾಗಿದೆ. ಕಳೆದ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿ ಮಿಂಚಿದ ಶುಭ್​ಮನ್​ ಗಿಲ್​ ಈ ಪಂದ್ಯದಲ್ಲಿ ಬಹುಬೇಗನ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಸೇರಿಕೊಂಡಿದ್ದಾರೆ.ರೋಹಿತ್​ ಶರ್ಮ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಗಿಲ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರು. 2ನೇ ದಿನದಾಟದಲ್ಲಿ 2ನೇ ಸೆಷನ್​ ಆಡುತ್ತಿರುವ ಟೀಂ ಇಂಡಿಯಾ 1 ವಿಕೆಟ್​ ನಷ್ಟಕ್ಕೆ 51 ರನ್​ ಗಳಿಸಿದೆ. ಆರಂಭಿಕ ರೋಹಿತ್​ ಶರ್ಮ ಅವರಿಗೆ ಚೇತೇಶ್ವರ್​ ಪೂಜಾರ ಜೊತೆಯಾಗಿದ್ದಾರೆ.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..

Published On - 9:27 am, Sat, 16 January 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ