AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series ಅಂತಿಮ ಟೆಸ್ಟ್​: 369 ರನ್​ಗೆ ಆಸಿಸ್​ ಆಲ್​ಔಟ್.. ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ..!

ಈಗಾಗಲೇ ಪಂದ್ಯದ ಎರಡನೇ ದಿನದ ಆಟ ಶುರುವಾಗಿದ್ದು, ಆಸ್ಟ್ರೇಲಿಯಾ ತಂಡ 2ನೇ ದಿನದ ಮೊದಲ ಸೆಷನ್‌ನಲ್ಲಿ ತನ್ನೇಲ್ಲಾ ವಿಕೆಟ್​ ಕಳೆದುಕೊಂಡು 369 ರನ್​ಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ.

India vs Australia Test Series ಅಂತಿಮ ಟೆಸ್ಟ್​: 369 ರನ್​ಗೆ ಆಸಿಸ್​ ಆಲ್​ಔಟ್.. ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ..!
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 16, 2021 | 9:44 AM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಈಗಾಗಲೇ ಪಂದ್ಯದ ಎರಡನೇ ದಿನದ ಆಟ ಶುರುವಾಗಿದ್ದು, ಆಸ್ಟ್ರೇಲಿಯಾ ತಂಡ 2ನೇ ದಿನದ ಮೊದಲ ಸೆಷನ್‌ನಲ್ಲಿ ತನ್ನೇಲ್ಲಾ ವಿಕೆಟ್​ ಕಳೆದುಕೊಂಡು 369 ರನ್​ಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ.

ಮೊದಲನೇ ದಿನದಾಟದಲ್ಲಿ 5 ವಿಕೆಟ್​ ಕಳೆದುಕೊಂಡು 274 ರನ್​ ಗಳಿಸಿದ್ದ ಆಸ್ಟ್ರೇಲಿಯಾ, 2ನೇ ದಿನದಾಟದಲ್ಲಿ ಕ್ಯಾಮರೂನ್​ ಗ್ರೀನ್​ ಅವರ 47 ರನ್​ ಹಾಗೂ ಟಿಮ್​ ಪೈನ್​ ಅವರ ಅರ್ಧಶತಕದ ನೆರವಿನಂದಾಗಿ 369 ರನ್​ ಗಳಿಸಿತು. ಈ ಇಬ್ಬರು ಆಟಗಾರರನ್ನ ಹೊರತು ಪಡಿಸಿದರೆ, ಆಸಿಸ್​ನ ಕೆಳಕ್ರಮಾಂಕದ ಬ್ಯಾಟ್ಸ್​ಮನ್​ಗಳು ಅಷ್ಟೇನೂ ಪ್ರತಿರೋಧ ತೋರಲಿಲ್ಲ ಹೀಗಾಗಿ ಆಸಿಸ್​ ತಂಡ ತನ್ನೇಲ್ಲಾ ವಿಕೆಟ್​ ಕಳೆದುಕೊಂಡು 369 ಗಳಿಸಿತು.

ಭಾರತದ ಪರ ಪದಾರ್ಪಣೆ ಪಂದ್ಯದಲ್ಲೇ ಮಿಂಚಿದ ನಟರಾಜನ್ ಹಾಗೂ ವಾಷಿಂಗ್​ಟನ್​ ಸುಂದರ್ ತಲಾ 3 ವಿಕೆಟ್​ ಪಡೆದು ಮಿಂಚಿದರು. ನಟರಾಜನ್​ಗೆ ಉತ್ತಮವಾಗಿ ಸಾಥ್​ ನೀಡಿದ ಶಾರ್ದೂಲ್​ ಠಾಕೂರ್​ ಸಹ 3 ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾದರು.ವೇಗಿ ಮಹಮದ್​ ಸಿರಾಜ್​ 1 ವಿಕೆಟ್​ ಪಡೆದು ಭಾರತಕ್ಕೆ ನೆರವಾದರು.

ಆಸ್ಟ್ರೇಲಿಯಾ ನೀಡಿರುವ ಸವಾಲಿನ ಮೊತ್ತವನ್ನ ಬೆನ್ನತ್ತಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ ಎದುರಾಗಿದೆ. ಕಳೆದ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿ ಮಿಂಚಿದ ಶುಭ್​ಮನ್​ ಗಿಲ್​ ಈ ಪಂದ್ಯದಲ್ಲಿ ಬಹುಬೇಗನ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಸೇರಿಕೊಂಡಿದ್ದಾರೆ.ರೋಹಿತ್​ ಶರ್ಮ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಗಿಲ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರು. 2ನೇ ದಿನದಾಟದಲ್ಲಿ 2ನೇ ಸೆಷನ್​ ಆಡುತ್ತಿರುವ ಟೀಂ ಇಂಡಿಯಾ 1 ವಿಕೆಟ್​ ನಷ್ಟಕ್ಕೆ 51 ರನ್​ ಗಳಿಸಿದೆ. ಆರಂಭಿಕ ರೋಹಿತ್​ ಶರ್ಮ ಅವರಿಗೆ ಚೇತೇಶ್ವರ್​ ಪೂಜಾರ ಜೊತೆಯಾಗಿದ್ದಾರೆ.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..

Published On - 9:27 am, Sat, 16 January 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ