AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia vs India Test Series | ಅಂತಿಮ ಟೆಸ್ಟ್​: 336 ರನ್​ಗಳಿಗೆ ಪತನಗೊಂಡ ಟೀಂ ಇಂಡಿಯಾ, ಆಸಿಸ್​ಗೆ 33 ರನ್​ಗಳ ಮುನ್ನಡೆ..

ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 336 ರನ್​ ಗಳಿಸಲಷ್ಟೇ ಶಕ್ತವಾಗಿದೆ. ಹೀಗಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ನಲ್ಲಿ 33 ರನ್​ಗಳ ಮುನ್ನಡೆ​ ಪಡೆದಿದೆ.

Australia vs India Test Series | ಅಂತಿಮ ಟೆಸ್ಟ್​: 336 ರನ್​ಗಳಿಗೆ ಪತನಗೊಂಡ ಟೀಂ ಇಂಡಿಯಾ, ಆಸಿಸ್​ಗೆ 33 ರನ್​ಗಳ ಮುನ್ನಡೆ..
ಶತಕದ ಜೊತೆಯಾಟ ಆಡಿ ತಂಡಕ್ಕೆ ನೆರವಾದ ಶಾರ್ದೂಲ್​ ಠಾಕೂರ್ ಹಾಗೂ ವಾಷಿಂಗ್​ಟನ್​ ಸುಂದರ್​
ಪೃಥ್ವಿಶಂಕರ
|

Updated on:Jan 17, 2021 | 12:59 PM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದ 3ನೇ ದಿನದಾಟ ನಡೆಯುತ್ತಿದ್ದು, ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 336 ರನ್​ ಗಳಿಸಲಷ್ಟೇ ಶಕ್ತವಾಗಿದೆ. ಹೀಗಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ನಲ್ಲಿ 33 ರನ್​ಗಳ ಮುನ್ನಡೆ​ ಪಡೆದಿದೆ.

180 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾಕ್ಕೆ ಶಾರ್ದೂಲ್​ ಠಾಕೂರ್​ ಹಾಗೂ ವಾಷಿಂಗ್ಟನ್ ಸುಂದರ್​ ಅವರ ಶತಕದ ಜೊತೆಯಾಟ ಕೊಂಚ ನೆರವು ನೀಡಿತು. ಅಲ್ಲದೆ ಈ ಜೋಡಿ ವೈಯಕ್ತಿಕವಾಗಿ ಚೊಚ್ಚಲ ಅರ್ಧ ಶತಕ ಸಹ ಬಾರಿಸಿದರು.

ಡ್ರಿಂಕ್ಸ್​ ವಿರಾಮಕ್ಕೂ ಮುನ್ನ 67 ರನ್​ ಗಳಿಸಿದ್ದ ಶಾರ್ದೂಲ್​ ಠಾಕೂರ್​, ಪ್ಯಾಟ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರೆ, 62 ರನ್​ ಗಳಿಸಿ ತಂಡಕ್ಕೆ ಆಸರೆಯಾಗಿದ್ದ ವಾಷಿಂಗ್​ಟನ್ ಸುಂದರ್​ ಮಿಚೆಲ್​ ಸ್ಟಾರ್ಕ್​ಗೆ ವಿಕೆಟ್​ ಒಪ್ಪಿಸಿದರು. ಈ ಜೋಡಿಯ ನಂತರ ಬಂದ ಕೆಳಕ್ರಮಾಂಕದ ಆಟಗಾರರು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಬೇಗನೆ ವಿಕೆಟ್​ ಒಪ್ಪಿಸಿದರು. ಪರಿಣಾಮವಾಗಿ ಟೀಂ ಇಂಡಿಯಾ 336 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡಿತು.

ಭಾರತದ ಪರ ರೋಹಿತ್​ ಶರ್ಮ 44, ಶುಭ್​ಮನ್​ ಗಿಲ್​ 7, ಚೇತೇಶ್ವರ್​ ಪೂಜಾರ 27, ಅಜಿಂಕ್ಯಾ ರಹಾನೆ 37, ಮಾಯಾಂಕ್​ ಅಗರ್​ವಾಲ್​ 38, ರಿಷಬ್ ಪಂತ್ 23,​ ವಾಷಿಂಗ್ಟನ್ ಸುಂದರ್ 62,​ ಶಾರ್ದೂಲ್​ ಠಾಕೂರ್ 67,​ ನವ್​ದೀಪ್​ ಸೈನಿ 5, ಮಹಮದ್​ ಸಿರಾಜ್ 13,​ ನಟರಾಜನ್ 1 ರನ್​ ಗಳಿಸಿದರು.

ಆಸ್ಟ್ರೇಲಿಯಾ ಪರ ಮಿಂಚಿದ ಜೋಶ್​ ಹ್ಯಾಝಲ್​ವುಡ್​ 5 ವಿಕೆಟ್ ಪಡೆದರು. ಕಮಿನ್ಸ್​ ಹಾಗೂ ಸ್ಟಾರ್ಕ್​ ತಲಾ 2 ವಿಕೆಟ್​ ಪಡೆದರೆ, ಲಿಯಾನ್​ 1 ವಿಕೆಟ್​ ಪಡೆದರು.

Published On - 12:48 pm, Sun, 17 January 21

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!