AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia vs India Test Series | ಅಂತಿಮ ಟೆಸ್ಟ್​: 336 ರನ್​ಗಳಿಗೆ ಪತನಗೊಂಡ ಟೀಂ ಇಂಡಿಯಾ, ಆಸಿಸ್​ಗೆ 33 ರನ್​ಗಳ ಮುನ್ನಡೆ..

ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 336 ರನ್​ ಗಳಿಸಲಷ್ಟೇ ಶಕ್ತವಾಗಿದೆ. ಹೀಗಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ನಲ್ಲಿ 33 ರನ್​ಗಳ ಮುನ್ನಡೆ​ ಪಡೆದಿದೆ.

Australia vs India Test Series | ಅಂತಿಮ ಟೆಸ್ಟ್​: 336 ರನ್​ಗಳಿಗೆ ಪತನಗೊಂಡ ಟೀಂ ಇಂಡಿಯಾ, ಆಸಿಸ್​ಗೆ 33 ರನ್​ಗಳ ಮುನ್ನಡೆ..
ಶತಕದ ಜೊತೆಯಾಟ ಆಡಿ ತಂಡಕ್ಕೆ ನೆರವಾದ ಶಾರ್ದೂಲ್​ ಠಾಕೂರ್ ಹಾಗೂ ವಾಷಿಂಗ್​ಟನ್​ ಸುಂದರ್​
ಪೃಥ್ವಿಶಂಕರ
|

Updated on:Jan 17, 2021 | 12:59 PM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದ 3ನೇ ದಿನದಾಟ ನಡೆಯುತ್ತಿದ್ದು, ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 336 ರನ್​ ಗಳಿಸಲಷ್ಟೇ ಶಕ್ತವಾಗಿದೆ. ಹೀಗಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ನಲ್ಲಿ 33 ರನ್​ಗಳ ಮುನ್ನಡೆ​ ಪಡೆದಿದೆ.

180 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾಕ್ಕೆ ಶಾರ್ದೂಲ್​ ಠಾಕೂರ್​ ಹಾಗೂ ವಾಷಿಂಗ್ಟನ್ ಸುಂದರ್​ ಅವರ ಶತಕದ ಜೊತೆಯಾಟ ಕೊಂಚ ನೆರವು ನೀಡಿತು. ಅಲ್ಲದೆ ಈ ಜೋಡಿ ವೈಯಕ್ತಿಕವಾಗಿ ಚೊಚ್ಚಲ ಅರ್ಧ ಶತಕ ಸಹ ಬಾರಿಸಿದರು.

ಡ್ರಿಂಕ್ಸ್​ ವಿರಾಮಕ್ಕೂ ಮುನ್ನ 67 ರನ್​ ಗಳಿಸಿದ್ದ ಶಾರ್ದೂಲ್​ ಠಾಕೂರ್​, ಪ್ಯಾಟ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರೆ, 62 ರನ್​ ಗಳಿಸಿ ತಂಡಕ್ಕೆ ಆಸರೆಯಾಗಿದ್ದ ವಾಷಿಂಗ್​ಟನ್ ಸುಂದರ್​ ಮಿಚೆಲ್​ ಸ್ಟಾರ್ಕ್​ಗೆ ವಿಕೆಟ್​ ಒಪ್ಪಿಸಿದರು. ಈ ಜೋಡಿಯ ನಂತರ ಬಂದ ಕೆಳಕ್ರಮಾಂಕದ ಆಟಗಾರರು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಬೇಗನೆ ವಿಕೆಟ್​ ಒಪ್ಪಿಸಿದರು. ಪರಿಣಾಮವಾಗಿ ಟೀಂ ಇಂಡಿಯಾ 336 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡಿತು.

ಭಾರತದ ಪರ ರೋಹಿತ್​ ಶರ್ಮ 44, ಶುಭ್​ಮನ್​ ಗಿಲ್​ 7, ಚೇತೇಶ್ವರ್​ ಪೂಜಾರ 27, ಅಜಿಂಕ್ಯಾ ರಹಾನೆ 37, ಮಾಯಾಂಕ್​ ಅಗರ್​ವಾಲ್​ 38, ರಿಷಬ್ ಪಂತ್ 23,​ ವಾಷಿಂಗ್ಟನ್ ಸುಂದರ್ 62,​ ಶಾರ್ದೂಲ್​ ಠಾಕೂರ್ 67,​ ನವ್​ದೀಪ್​ ಸೈನಿ 5, ಮಹಮದ್​ ಸಿರಾಜ್ 13,​ ನಟರಾಜನ್ 1 ರನ್​ ಗಳಿಸಿದರು.

ಆಸ್ಟ್ರೇಲಿಯಾ ಪರ ಮಿಂಚಿದ ಜೋಶ್​ ಹ್ಯಾಝಲ್​ವುಡ್​ 5 ವಿಕೆಟ್ ಪಡೆದರು. ಕಮಿನ್ಸ್​ ಹಾಗೂ ಸ್ಟಾರ್ಕ್​ ತಲಾ 2 ವಿಕೆಟ್​ ಪಡೆದರೆ, ಲಿಯಾನ್​ 1 ವಿಕೆಟ್​ ಪಡೆದರು.

Published On - 12:48 pm, Sun, 17 January 21

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು