AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia vs India Test Series | ಅಂತಿಮ ಟೆಸ್ಟ್​: 336 ರನ್​ಗಳಿಗೆ ಪತನಗೊಂಡ ಟೀಂ ಇಂಡಿಯಾ, ಆಸಿಸ್​ಗೆ 33 ರನ್​ಗಳ ಮುನ್ನಡೆ..

ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 336 ರನ್​ ಗಳಿಸಲಷ್ಟೇ ಶಕ್ತವಾಗಿದೆ. ಹೀಗಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ನಲ್ಲಿ 33 ರನ್​ಗಳ ಮುನ್ನಡೆ​ ಪಡೆದಿದೆ.

Australia vs India Test Series | ಅಂತಿಮ ಟೆಸ್ಟ್​: 336 ರನ್​ಗಳಿಗೆ ಪತನಗೊಂಡ ಟೀಂ ಇಂಡಿಯಾ, ಆಸಿಸ್​ಗೆ 33 ರನ್​ಗಳ ಮುನ್ನಡೆ..
ಶತಕದ ಜೊತೆಯಾಟ ಆಡಿ ತಂಡಕ್ಕೆ ನೆರವಾದ ಶಾರ್ದೂಲ್​ ಠಾಕೂರ್ ಹಾಗೂ ವಾಷಿಂಗ್​ಟನ್​ ಸುಂದರ್​
ಪೃಥ್ವಿಶಂಕರ
|

Updated on:Jan 17, 2021 | 12:59 PM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದ 3ನೇ ದಿನದಾಟ ನಡೆಯುತ್ತಿದ್ದು, ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 336 ರನ್​ ಗಳಿಸಲಷ್ಟೇ ಶಕ್ತವಾಗಿದೆ. ಹೀಗಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ನಲ್ಲಿ 33 ರನ್​ಗಳ ಮುನ್ನಡೆ​ ಪಡೆದಿದೆ.

180 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾಕ್ಕೆ ಶಾರ್ದೂಲ್​ ಠಾಕೂರ್​ ಹಾಗೂ ವಾಷಿಂಗ್ಟನ್ ಸುಂದರ್​ ಅವರ ಶತಕದ ಜೊತೆಯಾಟ ಕೊಂಚ ನೆರವು ನೀಡಿತು. ಅಲ್ಲದೆ ಈ ಜೋಡಿ ವೈಯಕ್ತಿಕವಾಗಿ ಚೊಚ್ಚಲ ಅರ್ಧ ಶತಕ ಸಹ ಬಾರಿಸಿದರು.

ಡ್ರಿಂಕ್ಸ್​ ವಿರಾಮಕ್ಕೂ ಮುನ್ನ 67 ರನ್​ ಗಳಿಸಿದ್ದ ಶಾರ್ದೂಲ್​ ಠಾಕೂರ್​, ಪ್ಯಾಟ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರೆ, 62 ರನ್​ ಗಳಿಸಿ ತಂಡಕ್ಕೆ ಆಸರೆಯಾಗಿದ್ದ ವಾಷಿಂಗ್​ಟನ್ ಸುಂದರ್​ ಮಿಚೆಲ್​ ಸ್ಟಾರ್ಕ್​ಗೆ ವಿಕೆಟ್​ ಒಪ್ಪಿಸಿದರು. ಈ ಜೋಡಿಯ ನಂತರ ಬಂದ ಕೆಳಕ್ರಮಾಂಕದ ಆಟಗಾರರು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಬೇಗನೆ ವಿಕೆಟ್​ ಒಪ್ಪಿಸಿದರು. ಪರಿಣಾಮವಾಗಿ ಟೀಂ ಇಂಡಿಯಾ 336 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡಿತು.

ಭಾರತದ ಪರ ರೋಹಿತ್​ ಶರ್ಮ 44, ಶುಭ್​ಮನ್​ ಗಿಲ್​ 7, ಚೇತೇಶ್ವರ್​ ಪೂಜಾರ 27, ಅಜಿಂಕ್ಯಾ ರಹಾನೆ 37, ಮಾಯಾಂಕ್​ ಅಗರ್​ವಾಲ್​ 38, ರಿಷಬ್ ಪಂತ್ 23,​ ವಾಷಿಂಗ್ಟನ್ ಸುಂದರ್ 62,​ ಶಾರ್ದೂಲ್​ ಠಾಕೂರ್ 67,​ ನವ್​ದೀಪ್​ ಸೈನಿ 5, ಮಹಮದ್​ ಸಿರಾಜ್ 13,​ ನಟರಾಜನ್ 1 ರನ್​ ಗಳಿಸಿದರು.

ಆಸ್ಟ್ರೇಲಿಯಾ ಪರ ಮಿಂಚಿದ ಜೋಶ್​ ಹ್ಯಾಝಲ್​ವುಡ್​ 5 ವಿಕೆಟ್ ಪಡೆದರು. ಕಮಿನ್ಸ್​ ಹಾಗೂ ಸ್ಟಾರ್ಕ್​ ತಲಾ 2 ವಿಕೆಟ್​ ಪಡೆದರೆ, ಲಿಯಾನ್​ 1 ವಿಕೆಟ್​ ಪಡೆದರು.

Published On - 12:48 pm, Sun, 17 January 21

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!