AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia vs India Test Series | ಅಂತಿಮ ಟೆಸ್ಟ್​: 336 ರನ್​ಗಳಿಗೆ ಪತನಗೊಂಡ ಟೀಂ ಇಂಡಿಯಾ, ಆಸಿಸ್​ಗೆ 33 ರನ್​ಗಳ ಮುನ್ನಡೆ..

ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 336 ರನ್​ ಗಳಿಸಲಷ್ಟೇ ಶಕ್ತವಾಗಿದೆ. ಹೀಗಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ನಲ್ಲಿ 33 ರನ್​ಗಳ ಮುನ್ನಡೆ​ ಪಡೆದಿದೆ.

Australia vs India Test Series | ಅಂತಿಮ ಟೆಸ್ಟ್​: 336 ರನ್​ಗಳಿಗೆ ಪತನಗೊಂಡ ಟೀಂ ಇಂಡಿಯಾ, ಆಸಿಸ್​ಗೆ 33 ರನ್​ಗಳ ಮುನ್ನಡೆ..
ಶತಕದ ಜೊತೆಯಾಟ ಆಡಿ ತಂಡಕ್ಕೆ ನೆರವಾದ ಶಾರ್ದೂಲ್​ ಠಾಕೂರ್ ಹಾಗೂ ವಾಷಿಂಗ್​ಟನ್​ ಸುಂದರ್​
ಪೃಥ್ವಿಶಂಕರ
|

Updated on:Jan 17, 2021 | 12:59 PM

Share

ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದ 3ನೇ ದಿನದಾಟ ನಡೆಯುತ್ತಿದ್ದು, ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 336 ರನ್​ ಗಳಿಸಲಷ್ಟೇ ಶಕ್ತವಾಗಿದೆ. ಹೀಗಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ನಲ್ಲಿ 33 ರನ್​ಗಳ ಮುನ್ನಡೆ​ ಪಡೆದಿದೆ.

180 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾಕ್ಕೆ ಶಾರ್ದೂಲ್​ ಠಾಕೂರ್​ ಹಾಗೂ ವಾಷಿಂಗ್ಟನ್ ಸುಂದರ್​ ಅವರ ಶತಕದ ಜೊತೆಯಾಟ ಕೊಂಚ ನೆರವು ನೀಡಿತು. ಅಲ್ಲದೆ ಈ ಜೋಡಿ ವೈಯಕ್ತಿಕವಾಗಿ ಚೊಚ್ಚಲ ಅರ್ಧ ಶತಕ ಸಹ ಬಾರಿಸಿದರು.

ಡ್ರಿಂಕ್ಸ್​ ವಿರಾಮಕ್ಕೂ ಮುನ್ನ 67 ರನ್​ ಗಳಿಸಿದ್ದ ಶಾರ್ದೂಲ್​ ಠಾಕೂರ್​, ಪ್ಯಾಟ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರೆ, 62 ರನ್​ ಗಳಿಸಿ ತಂಡಕ್ಕೆ ಆಸರೆಯಾಗಿದ್ದ ವಾಷಿಂಗ್​ಟನ್ ಸುಂದರ್​ ಮಿಚೆಲ್​ ಸ್ಟಾರ್ಕ್​ಗೆ ವಿಕೆಟ್​ ಒಪ್ಪಿಸಿದರು. ಈ ಜೋಡಿಯ ನಂತರ ಬಂದ ಕೆಳಕ್ರಮಾಂಕದ ಆಟಗಾರರು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಬೇಗನೆ ವಿಕೆಟ್​ ಒಪ್ಪಿಸಿದರು. ಪರಿಣಾಮವಾಗಿ ಟೀಂ ಇಂಡಿಯಾ 336 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡಿತು.

ಭಾರತದ ಪರ ರೋಹಿತ್​ ಶರ್ಮ 44, ಶುಭ್​ಮನ್​ ಗಿಲ್​ 7, ಚೇತೇಶ್ವರ್​ ಪೂಜಾರ 27, ಅಜಿಂಕ್ಯಾ ರಹಾನೆ 37, ಮಾಯಾಂಕ್​ ಅಗರ್​ವಾಲ್​ 38, ರಿಷಬ್ ಪಂತ್ 23,​ ವಾಷಿಂಗ್ಟನ್ ಸುಂದರ್ 62,​ ಶಾರ್ದೂಲ್​ ಠಾಕೂರ್ 67,​ ನವ್​ದೀಪ್​ ಸೈನಿ 5, ಮಹಮದ್​ ಸಿರಾಜ್ 13,​ ನಟರಾಜನ್ 1 ರನ್​ ಗಳಿಸಿದರು.

ಆಸ್ಟ್ರೇಲಿಯಾ ಪರ ಮಿಂಚಿದ ಜೋಶ್​ ಹ್ಯಾಝಲ್​ವುಡ್​ 5 ವಿಕೆಟ್ ಪಡೆದರು. ಕಮಿನ್ಸ್​ ಹಾಗೂ ಸ್ಟಾರ್ಕ್​ ತಲಾ 2 ವಿಕೆಟ್​ ಪಡೆದರೆ, ಲಿಯಾನ್​ 1 ವಿಕೆಟ್​ ಪಡೆದರು.

Published On - 12:48 pm, Sun, 17 January 21

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್