AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2020, 2nd T20, LIVE Scores : ಟಿ20 ಸರಣಿ ಭಾರತದ ಪಾಲು

ಏಕದಿನ ಸರಣಿಯ ಸೋಲಿನ ಸೇಡನ್ನು ಭಾರತ ತೀರಿಸಿಕೊಂಡಿದೆ. ಆಸಿಸ್​ ತಂಡ ನೀಡಿದ್ದ ಸವಾಲಿನ ಮೊತ್ತವನ್ನು ಭಾರತೀಯ ಬ್ಯಾಟ್​ಮನ್ಸ್​ ಅತ್ಯಂತ ಯಶಸ್ವಿಯಾಗಿ ಬೆನ್ನಟ್ಟಿ ಗೆಲುವು ಸಾಧಿಸಿದ್ದಾರೆ.

India vs Australia 2020, 2nd T20, LIVE Scores : ಟಿ20 ಸರಣಿ ಭಾರತದ ಪಾಲು
ಕಠಿಣ ಸಂದರ್ಭದಲ್ಲಿ ತಂಡದ ಗೆಲುವಿಗೆ ನೆರವಾದ ಹಾರ್ದಿಕ್​ ಪಾಂಡ್ಯ
Skanda
|

Updated on:Dec 06, 2020 | 6:34 PM

Share

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಜಯಭೇರಿ ಬಾರಿಸಿರುವ ಭಾರತ ತಂಡ ಇಂದು ಎರಡನೇ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಆಡಿದ ಆಸಿಸ್​ ತಂಡ ಬ್ಯಾಟ್ಸ್​ಮನ್​ಗಳ ಅಬ್ಬರದ ಆಟದೊಂದಿಗೆ 194/5 ರನ್​ ಗಳಿಸಿತು. ಬೃಹತ್​ ಮೊತ್ತದ ಬೆನ್ನತ್ತಿದ ಭಾರತ ತಂಡ ಕೊನೆಯ ಎರಡು ಎಸೆತ ಬಾಕಿ ಇರುವಾಗಲೇ ಭರ್ಜರಿ ಗೆಲುವು ಪಡೆದಿದೆ.

ಭಾರತಕ್ಕೆ ಅಷ್ಟೇನು ಉತ್ತಮ ಆರಂಭ ಸಿಗಲಿಲ್ಲವಾದರೂ ಮೂರನೇ ಓವರ್​ನಲ್ಲಿ ಆಸಿಸ್​ನ ಆಂಡ್ರ್ಯೂ ಟೈ ಎಸೆದ ನೋ ಬಾಲ್​ ವರದಾನವಾಯಿತು. ಅಲ್ಲಿ ಸಿಕ್ಕ ಫ್ರೀ ಹಿಟ್​ಗೆ ಕೆ.ಎಲ್​.ರಾಹುಲ್​ ಭರ್ಜರಿ ಸಿಕ್ಸ್​ ಸಿಡಿಸಿದ ನಂತರ ಭಾರತದ ವೇಗ ಕೊಂಚ ಹೆಚ್ಚಿತು. ಪಂದ್ಯದಲ್ಲಿ ನಡುವಿನಲ್ಲಿ ಭರವಸೆ ಹೆಚ್ಚಿತ್ತಾದರೂ ಕೊನೆಗೆ ಒತ್ತಡದ ಸಂದರ್ಭ ಎದುರಾಗಿತ್ತು ಕೊನೆಯ ಓವರ್​ನಲ್ಲಿ 14 ರನ್​ ಅವಶ್ಯಕತೆ ಇದ್ದಾಗ ಶ್ರೇಯಸ್​ ಅಯ್ಯರ್​ ಮತ್ತು ಪಾಂಡ್ಯ ಜೊತೆಯಾಟದಲ್ಲಿದ್ದರು. ಇನ್ನೇನು ಗೆಲುವು ಕೈ ತಪ್ಪಿತು ಎನ್ನುವಾಗಲೇ ಪಾಂಡ್ಯ 2 ಸಿಕ್ಸರ್​ ಸಿಡಿಸಿ ಕೊನೆಯ 2 ಎಸೆತ ಬಾಕಿ ಇರುವಾಗಲೇ ಗೆಲುವಿನ ಗುರಿ ಮುಟ್ಟಿಸಿದರು.

ಭಾರತ ತಂಡ: ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್​ ಠಾಕೂರ್, ದೀಪಕ್ ಚಹರ್, ಟಿ. ನಟರಾಜನ್, ಯಜುವೇಂದ್ರ ಚಹಾಲ್.

ಆಸ್ಟ್ರೇಲಿಯಾ ತಂಡ: ಡಿ ಆರ್ಕಿ ಶಾರ್ಟ್​, ಮಾರ್ಕಸ್ ಸ್ಟೊಯ್ನಿಸ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್​ವೆಲ್, ಮೊಯಿಸೆಸ್​ ಹೆನ್ರಿಕ್ವೆಸ್​, ಮ್ಯಾಥ್ಯೂ ವೇಡ್ (ನಾಯಕ, ವಿಕೆಟ್​ ಕೀಪರ್​), ಡೇನಿಯಲ್​ ಸ್ಯಾಮ್ಸ್​, ಸೀನ್​ ಅಬೊಟ್​, ಮಿಚೆಲ್​ ಸ್ವೆಪ್ಸನ್​, ಆ್ಯಡಮ್​ ಝಂಪಾ, ಆಂಡ್ರ್ಯೂ ಟೈ

Published On - 5:17 pm, Sun, 6 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್