AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2020, 3rd ODI | ಕೊನೆಯ ಪಂದ್ಯವನ್ನು13 ರನ್​ಗಳಿಂದ ಗೆದ್ದ ಭಾರತ

ಆಸ್ಟ್ರೇಲಿಯವನ್ನು ಕೊನೆಯ ಒಂದು ದಿನದ ಅಂತರರಾಷ್ಟ್ರೀಯ ಪಂದ್ಯದಲ್ಲಿ 13 ರನ್​ಗಳಿಂದ ಸೋಲಿಸಿದ ಭಾರತ ವ್ಹೈಟ್​ವಾಶ್ ಆಗುವುದನ್ನು ತಪ್ಪಿಸಿಕೊಳ್ಳುವುದರ ಜೊತೆಗೆ ಮುಂಬರುವ ಟಿ20 ಪಂದ್ಯಗಳಿಗೆ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿತು.

India vs Australia 2020, 3rd ODI | ಕೊನೆಯ ಪಂದ್ಯವನ್ನು13 ರನ್​ಗಳಿಂದ ಗೆದ್ದ ಭಾರತ
ಫಿಂಚ್ ವಿಕೆಟ್ ಪಡೆದ ಸಂಭ್ರಮದಲ್ಲಿ ಭಾರತೀಯ ತಂಡ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on:Dec 04, 2020 | 2:50 PM

Share

ಪಂದ್ಯದ ಕೊನೆಯ ಕ್ಷಣಗಳಲ್ಲಿ ಸ್ಥಿಮಿತತೆ ಕಾಯ್ದುಕೊಂಡ ಭಾರತೀಯ ಬೌಲರ್​ಗಳು ಅಸ್ಟ್ರೇಲಿಯಾವನ್ನು ಕೊನೆಯ ಒಂದು ದಿನ ಪಂದ್ಯದಲ್ಲಿ 13 ರನ್​ಗಳಿಂದ ಸೋಲುಣಿಸಲು ನೆರವಾದರು. ಗೆಲ್ಲಲು 303 ರನ್ ಗಳಿಸಬೇಕಿದ್ದ ಆಸ್ಟ್ರೇಲಿಯ 49.3 ಓವರ್​ಗಳಲ್ಲಿ 289 ರನ್​ಗಳಿಗೆ ತನ್ನೆಲ್ಲ ವಿಕೆಟ್​ಗಳನ್ನು ಕಳೆದುಕೊಂಡಿತು.

ಭಾರತದ ಪರ ವೇಗದ ಬೌಲರ್​ಗಳು ಅತ್ಯುತ್ತಮವಾಗಿ ದಾಳಿ ನಡೆಸಿದರು. 51 ರನ್​ಗಳಿಗೆ 3 ವಿಕೆಟ್ ಪಡೆದ ಶಾರ್ದುಲ್ ಠಾಕುರ್ ಅತ್ಯಂತ ಯಶಸ್ವೀ ಬೌಲರ್ ಎನಿಸಿದರೆ, ಜಸ್ಪ್ರೀತ್ ಬುಮ್ರಾ 43 ರನ್​ಗಳಿಗೆ 2 ಮತ್ತು ಇದೇ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿದ ನಟರಾಜನ್ 70 ರನ್ ನೀಡಿ ದುಬಾರಿಯೆನಿಸಿದರೂ 2 ವಿಕೆಟ್ ಪಡೆದರು.

ಅತಿಥೇಯರ ಪರ ಬ್ಯಾಟಿಂಗ್​ನಲ್ಲಿ ಮತ್ತೊಮ್ಮೆ ಮಿಂಚಿದ ನಾಯಕ ಆರನ್ ಫಿಂಚ್ 82 ಎಸೆತಗಳಲ್ಲಿ 75ರನ್ ಗಳಿಸಿದರು. ಎರಡನೆ ಪಂದ್ಯದಲ್ಲಿ ಆಕ್ರಮಣಕಾರಿ ಆಟವಾಡಿ ಅರ್ಧ ಶತಕ ಬಾರಿಸಿದ್ದ ಗ್ಲೆನ್ ಮಾಕ್ಸ್​ವೆಲ್ ಮತ್ತೊಮ್ಮೆ ಅದೇ ಧೋರಣೆ ಪ್ರದರ್ಶಿಸಿ ಕೇವಲ 38 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್​ಗಳಿದ್ದ 59 ರನ್ ಬಾರಿಸಿದರು

ಇದಕ್ಕೆ ಮುನ್ನ, ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ,  ವಿರಾಟ್​ ಕೊಹ್ಲಿಯವರ 63 ಮತ್ತು ಆಲ್​ರೌಂಡರ್​ಗಳಾಗಿರುವ ಹಾರ್ದಿಕ್ ಪಾಂಡ್ಯ (ಅಜೇಯ 92) ಮತ್ತು ರವೀಂದ್ರ ಜಡೇಜಾ (ಅಜೇಯ 66) ಅವರ ಜೊತೆಯಾಟದಲ್ಲಿ ಬಂದ 150 ರನ್​ಗಳ ನೆರವಿನಿಂದ ಅತಿಥೇಯರಿಗೆ ಗೆಲ್ಲಲು 303 ರನ್​ಗಳ ಸವಾಲೊಡ್ಡಿತು.

Published On - 2:41 pm, Fri, 4 December 20

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್