AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2020, 3rd ODI | ಕೊನೆಯ ಪಂದ್ಯವನ್ನು13 ರನ್​ಗಳಿಂದ ಗೆದ್ದ ಭಾರತ

ಆಸ್ಟ್ರೇಲಿಯವನ್ನು ಕೊನೆಯ ಒಂದು ದಿನದ ಅಂತರರಾಷ್ಟ್ರೀಯ ಪಂದ್ಯದಲ್ಲಿ 13 ರನ್​ಗಳಿಂದ ಸೋಲಿಸಿದ ಭಾರತ ವ್ಹೈಟ್​ವಾಶ್ ಆಗುವುದನ್ನು ತಪ್ಪಿಸಿಕೊಳ್ಳುವುದರ ಜೊತೆಗೆ ಮುಂಬರುವ ಟಿ20 ಪಂದ್ಯಗಳಿಗೆ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿತು.

India vs Australia 2020, 3rd ODI | ಕೊನೆಯ ಪಂದ್ಯವನ್ನು13 ರನ್​ಗಳಿಂದ ಗೆದ್ದ ಭಾರತ
ಫಿಂಚ್ ವಿಕೆಟ್ ಪಡೆದ ಸಂಭ್ರಮದಲ್ಲಿ ಭಾರತೀಯ ತಂಡ
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Dec 04, 2020 | 2:50 PM

Share

ಪಂದ್ಯದ ಕೊನೆಯ ಕ್ಷಣಗಳಲ್ಲಿ ಸ್ಥಿಮಿತತೆ ಕಾಯ್ದುಕೊಂಡ ಭಾರತೀಯ ಬೌಲರ್​ಗಳು ಅಸ್ಟ್ರೇಲಿಯಾವನ್ನು ಕೊನೆಯ ಒಂದು ದಿನ ಪಂದ್ಯದಲ್ಲಿ 13 ರನ್​ಗಳಿಂದ ಸೋಲುಣಿಸಲು ನೆರವಾದರು. ಗೆಲ್ಲಲು 303 ರನ್ ಗಳಿಸಬೇಕಿದ್ದ ಆಸ್ಟ್ರೇಲಿಯ 49.3 ಓವರ್​ಗಳಲ್ಲಿ 289 ರನ್​ಗಳಿಗೆ ತನ್ನೆಲ್ಲ ವಿಕೆಟ್​ಗಳನ್ನು ಕಳೆದುಕೊಂಡಿತು.

ಭಾರತದ ಪರ ವೇಗದ ಬೌಲರ್​ಗಳು ಅತ್ಯುತ್ತಮವಾಗಿ ದಾಳಿ ನಡೆಸಿದರು. 51 ರನ್​ಗಳಿಗೆ 3 ವಿಕೆಟ್ ಪಡೆದ ಶಾರ್ದುಲ್ ಠಾಕುರ್ ಅತ್ಯಂತ ಯಶಸ್ವೀ ಬೌಲರ್ ಎನಿಸಿದರೆ, ಜಸ್ಪ್ರೀತ್ ಬುಮ್ರಾ 43 ರನ್​ಗಳಿಗೆ 2 ಮತ್ತು ಇದೇ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿದ ನಟರಾಜನ್ 70 ರನ್ ನೀಡಿ ದುಬಾರಿಯೆನಿಸಿದರೂ 2 ವಿಕೆಟ್ ಪಡೆದರು.

ಅತಿಥೇಯರ ಪರ ಬ್ಯಾಟಿಂಗ್​ನಲ್ಲಿ ಮತ್ತೊಮ್ಮೆ ಮಿಂಚಿದ ನಾಯಕ ಆರನ್ ಫಿಂಚ್ 82 ಎಸೆತಗಳಲ್ಲಿ 75ರನ್ ಗಳಿಸಿದರು. ಎರಡನೆ ಪಂದ್ಯದಲ್ಲಿ ಆಕ್ರಮಣಕಾರಿ ಆಟವಾಡಿ ಅರ್ಧ ಶತಕ ಬಾರಿಸಿದ್ದ ಗ್ಲೆನ್ ಮಾಕ್ಸ್​ವೆಲ್ ಮತ್ತೊಮ್ಮೆ ಅದೇ ಧೋರಣೆ ಪ್ರದರ್ಶಿಸಿ ಕೇವಲ 38 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್​ಗಳಿದ್ದ 59 ರನ್ ಬಾರಿಸಿದರು

ಇದಕ್ಕೆ ಮುನ್ನ, ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ,  ವಿರಾಟ್​ ಕೊಹ್ಲಿಯವರ 63 ಮತ್ತು ಆಲ್​ರೌಂಡರ್​ಗಳಾಗಿರುವ ಹಾರ್ದಿಕ್ ಪಾಂಡ್ಯ (ಅಜೇಯ 92) ಮತ್ತು ರವೀಂದ್ರ ಜಡೇಜಾ (ಅಜೇಯ 66) ಅವರ ಜೊತೆಯಾಟದಲ್ಲಿ ಬಂದ 150 ರನ್​ಗಳ ನೆರವಿನಿಂದ ಅತಿಥೇಯರಿಗೆ ಗೆಲ್ಲಲು 303 ರನ್​ಗಳ ಸವಾಲೊಡ್ಡಿತು.

Published On - 2:41 pm, Fri, 4 December 20

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ