AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!
ಟಿಮ್​ ಪೈನ್
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Dec 29, 2020 | 2:44 PM

Share

ಮೆಲ್ಬೋರ್ನ್:​ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ 8 ವಿಕೆಟ್​ಗಳ ಗೆಲುವು ದಾಖಲಿಸಿದೆ. ಬೌಲರ್​ ಹಾಗೂ ಬ್ಯಾಟ್ಸ್​​ಮನ್​ಗಳ ಅದ್ಭುತ ಸಾಂಘಿಕ ಪ್ರದರ್ಶನದಿಂದ ಟೀಂ ಇಂಡಿಯಾ ಗೆಲುವು ದಾಖಲಿಸಿದೆ. ಈ ಮಧ್ಯೆ ಭಾರತ ಗೆಲ್ಲಲು ಆಸ್ಟ್ರೇಲಿಯಾದ ಕಳಪೆ ಆಟ ಹಾಗೂ ಟೀಂ ಇಂಡಿಯಾ ಬೌಲರ್​ಗಳ ಚಮತ್ಕಾರವೇ ಕಾರಣ ಎಂದು ನಾಯಕ ಟಿಮ್ ಪೈನ್ ಮ್ಯಾಚ್​ ಕುರಿತು ಷರಾ ಬರೆದಿದ್ದಾರೆ.

ಇನ್ನೂ ಎರಡು ಪಂದ್ಯಗಳಿವೆ.. ’ಮ್ಯಾಚ್​ ಪೂರ್ಣಗೊಂಡ ನಂತರದಲ್ಲಿ ಮಾತನಾಡಿದ ಟಿಮ್ ಪೈನ್, ನಿಜಕ್ಕೂ ನಾವು ನಿರಾಶೆಗೊಂಡಿದ್ದೇವೆ. ನಮ್ಮ ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್​ ಹಾಗೂ ಫೀಲ್ಡಿಂಗ್​ ಎರಡರಲ್ಲೂ ನಾವು ಎಡವಿದ್ದೇವೆ. ಹೀಗಾದಾಗ ಗೆಲ್ಲುವುದು ಕಷ್ಟ ಎಂದಿದ್ದಾರೆ.

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

ಮುಂದಿನ ಟೆಸ್ಟ್​ಗೆ ರೋಹಿತ್​: ರೋಹಿತ್​ ಈಗಾಗಲೇ ಆಸ್ಟ್ರೇಲಿಯಾಗೆ ತೆರಳಿ ಕ್ವಾರಂಟೈನ್​ ಆಗಿದ್ದಾರೆ. ಈಗ ಕ್ವಾರಂಟೈನ್​ ಅವಧಿ ಪೂರ್ಣಗೊಂಡಿದ್ದು, ಮೂರನೇ ಟೆಸ್ಟ್​​ಗೆ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಭಾರತದ ಬೌಲರ್​ಗಳು ಮಿಂಚುತ್ತಿದ್ದಾರೆ. ಹೀಗಾಗಿ, ಬ್ಯಾಟಿಂಗ್​ಗೆ ಬಲ ನೀಡಲು ರೋಹಿತ್​ ಸೇರ್ಪಡೆ ಸಹಕಾರಿಯಾಗಲಿದೆ. ರೋಹಿತ್​ ತಂಡ ಸೇರಿದರೆ ಮಯಾಂಕ್​ ಅಗರ್​ವಾಲ್​ ಅಥವಾ ಚೇತೇಶ್ವರ್​​ ಪೂಜಾರ ತಂಡದಿಂದ ಹೊರಗುಳಿಯಬೇಕಾಗುತ್ತದೆ.

India vs Australia 2020 ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ ನಗುವಿನ ಕೇಕೆ: ಇಲ್ಲಿವೆ ಚಿತ್ರಗಳು

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!