AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series 27ನೇ ಶತಕ ಬಾರಿಸಿದ ಸ್ಟೀವ್​ ಸ್ಮಿತ್.. ಕೊಹ್ಲಿ ದಾಖಲೆಗೆ ಸಮ..!

136 ಇನ್ನಿಂಗ್ಸ್ ಆಡಿರುವ ಸ್ಟೀವ್ ಸ್ಮಿತ್ 27 ಟೆಸ್ಟ್ ಶತಕಗಳನ್ನು ಗಳಿಸಿದ ಎರಡನೇ ವೇಗದ ಆಟಗಾರ ಎನಿಸಿಕೊಂಡಿದ್ದಾರೆ. ಡಾನ್ ಬ್ರಾಡ್ಮನ್ (70 ಇನ್ನಿಂಗ್ಸ್​) ಈ ಸಾಧನೆ ಮಾಡಿದ ಆಟಗಾರರಲ್ಲಿ ಮೊದಲನೇ ಸ್ಥಾನದಲ್ಲಿದ್ದರೆ, ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ತಲಾ 141 ಇನ್ನಿಂಗ್ಸ್​ ಆಡುವ ಮೂಲಕ ಈ ಸಾಧನೆ ಮಾಡಿದ್ದಾರೆ.

India vs Australia Test Series 27ನೇ ಶತಕ ಬಾರಿಸಿದ ಸ್ಟೀವ್​ ಸ್ಮಿತ್.. ಕೊಹ್ಲಿ ದಾಖಲೆಗೆ ಸಮ..!
ಶತಕದ ಸಂಭ್ರಮದಲ್ಲಿ ಸ್ಟಿವ್​ ಸ್ಮಿತ್​
ಪೃಥ್ವಿಶಂಕರ
| Edited By: |

Updated on: Jan 08, 2021 | 3:10 PM

Share

ಸಿಡ್ನಿ: ಭಾರತ- ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ​ಪಂದ್ಯದಲ್ಲಿ ಆಸಿಸ್​ ಆಟಗಾರರ ಸ್ಟೀವ್​ ಸ್ಮಿತ್ ತಮ್ಮ ಟೆಸ್ಟ್​ ಕ್ರಿಕೆಟ್​ನ 27ನೇ ಶತಕ ಬಾರಿಸಿ ಮಿಂಚಿದರು. ಈ ಶತಕದ ಮೂಲಕ ಟೀಂ ಇಂಡಿಯಾ ಆಟಗಾರ ವಿರಾಟ್​ ಕೊಹ್ಲಿ ಹೆಸರಿನಲ್ಲಿದ್ದ ಟೆಸ್ಟ್​ ಶತಕದ ದಾಖಲೆಯನ್ನು ಸ್ಟೀವ್​ ಸ್ಮಿತ್ ಸರಿಗಟ್ಟಿದ್ದಾರೆ.

ತಮ್ಮ ಕೊನೆಯ 4 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 10 ರನ್ ಗಳಿಸಿದ್ದ 31 ವರ್ಷದ ಸ್ಟೀವ್​ ಸ್ಮಿತ್,  ಇಂದು ಅದ್ಭುತವಾಗಿ ಆಡಿದರು. ನವದೀಪ್ ಸೈನಿ ಎಸೆತದಲ್ಲಿ ಮೂರು ರನ್ ಗಳಿಸಿ, ಶತಕ ಬಾರಿಸಿದರು. ತನ್ಮೂಲಕ ಈ ಸಾಧನೆ ಮಾಡಿದ್ದಾರೆ. 2019 ರಂದು ಮ್ಯಾಂಚೆಸ್ಟರ್‌ನಲ್ಲಿ ಇಂಗ್ಲೆಂಡ್ ವಿರುದ್ಧ 211 ರನ್ ಗಳಿಸಿದ್ದ ಸ್ಟೀವ್ ಸ್ಮಿತ್, ಆದಾದ ಬಳಿಕ ಗಳಿಸಿದ ಮೊದಲ ಶತಕ ಇದಾಗಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (ಎಸ್‌ಸಿಜಿ) ಭಾರತದ ವಿರುದ್ಧ, ಸ್ಟೀತ್ ಗಳಿಸಿದ 4 ನೇ ಶತಕ ಇದು.

ಸಕ್ರಿಯ ಕ್ರಿಕೆಟಿಗರಲ್ಲಿ ಸ್ಟೀತ್ ಮತ್ತು ಕೊಹ್ಲಿ ಹೆಚ್ಚು ಟೆಸ್ಟ್ ಶತಕ ಬಾರಿಸಿರುವ ಆಟಗಾರರಾಗಿದ್ದಾರೆ. ಇಷ್ಟೇ ಅಲ್ಲದೆ, 136 ಇನ್ನಿಂಗ್ಸ್ ಆಡಿರುವ ಸ್ಟೀವ್ ಸ್ಮಿತ್ 27 ಟೆಸ್ಟ್ ಶತಕಗಳನ್ನು ಗಳಿಸಿದ ಎರಡನೇ ವೇಗದ ಆಟಗಾರ ಎನಿಸಿಕೊಂಡಿದ್ದಾರೆ. ಡಾನ್ ಬ್ರಾಡ್ಮನ್ (70 ಇನ್ನಿಂಗ್ಸ್​) ಈ ಸಾಧನೆ ಮಾಡಿದ ಆಟಗಾರರಲ್ಲಿ ಮೊದಲನೇ ಸ್ಥಾನದಲ್ಲಿದ್ದರೆ, ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ತಲಾ 141 ಇನ್ನಿಂಗ್ಸ್​ ಆಡುವ ಮೂಲಕ ಈ ಸಾಧನೆ ಮಾಡಿದ್ದಾರೆ. ಸುನಿಲ್ ಗವಾಸ್ಕರ್ 154 ಇನ್ನಿಂಗ್ಸ್ ಆಡುವುದರೊಂದಿಗೆ 4 ನೇ ಸ್ಥಾನದಲ್ಲಿದ್ದಾರೆ.

India vs Australia Test Series ಸ್ಮಿತ್ ಸೆಂಚುರಿ.. ಜಡೇಜಾಗೆ 4 ವಿಕೆಟ್​: ಆಸ್ಟ್ರೇಲಿಯಾ ಆಲೌಟ್​

c

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು