AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋದಲ್ಲಿ ಬಟಾಬಯಲು.. ಆಸ್ಟ್ರೇಲಿಯಾ ಆಟಗಾರ ಸ್ಮಿತ್​ ಇಷ್ಟು ಕೀಳುಮಟ್ಟಕ್ಕೆ ಇಳಿಯಬಾರದಿತ್ತು

ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದುಕೊಳ್ಳುತ್ತದೆಯಂತೆ. ಸ್ಮಿತ್​ ಕತೆಯೂ ಅದೇ ರೀತಿ ಆಗಿದೆ. ಸ್ಮಿತ್​ ಮಾಡಿದ ಕೀಳುಮಟ್ಟದ ಕೆಲಸ ಸ್ಟಂಪ್​ ಕ್ಯಾಮೆರಾದಲ್ಲಿ ಸೆರಯಾಗಿದೆ.

ವಿಡಿಯೋದಲ್ಲಿ ಬಟಾಬಯಲು.. ಆಸ್ಟ್ರೇಲಿಯಾ ಆಟಗಾರ ಸ್ಮಿತ್​ ಇಷ್ಟು ಕೀಳುಮಟ್ಟಕ್ಕೆ ಇಳಿಯಬಾರದಿತ್ತು
ಸ್ಮಿತ್​ ಮಾಡಿದ ಕೆಳಮಟ್ಟದ ಗಿಮಿಕ್
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 11, 2021 | 3:42 PM

Share

ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಬೌಲರ್​ಗಳ ಬೆವರಿಳಿಸಿದ್ದಾರೆ. ರಿಷಬ್​ ಪಂತ್​, ಚೇತೇಶ್ವರ ಪೂಜಾರ ಆಸ್ಟ್ರೇಲಿಯಾ ಬೌಲರ್​ಗಳನ್ನು ಬೆಂಡೆತ್ತಿದರೆ, ಹನುಮ ವಿಹಾರಿ ಹಾಗೂ ರವೀಂದ್ರಚಂದ್ರ ಅಶ್ವಿನ್​ ಕಾಂಗರೂ ಬೌಲರ್​ಗಳು ಬೆವರು ಹರಿಸುವಂತೆ ಮಾಡಿದ್ದರು. ಈ ಮಧ್ಯೆ ಆಸ್ಟ್ರೇಲಿಯಾ ಟೀಂ ಇಂಡಿಯಾವನ್ನು ಸೋಲಿಸಲು ತೀರಾನೆ ಕೆಳಮಟ್ಟಕ್ಕೆ ಇಳಿದಿದ್ದು ಬಯಲಾಗಿದೆ.

ಅದು ಎರಡನೇ ಸೆಷನ್​ ಸಮಯ. ಡ್ರಿಂಕ್​ ಬ್ರೇಕ್​ ಬಿಡಲಾಗಿತ್ತು. ಎಲ್ಲರೂ ತಂಪು ಪಾನೀಯ ಕುಡಿಯುವುದರಲ್ಲಿ ಬ್ಯುಸಿಯಾಗಿದ್ದರು. ಈ ವೇಳೆ ಕಳ್ಳ ಬೆಕ್ಕಿನಂತೆ ಸುಮ್ಮನೆ ಎಲ್ಲರ ಕಣ್ಣ ತಪ್ಪಿಸಿ ಸ್ಟಂಪ್​ ಬಳಿ ಬಂದ ಸ್ಟೀವ್​ ಸ್ಮಿತ್​, ರಿಷಬ್​ ಪಂತ್​ ಹಾಕಿದ್ದ ಬ್ಯಾಟಿಂಗ್​ ಗಾರ್ಡ್​ಅನ್ನು ಅಳಿಸಿ ಹಾಕಿದ್ದಾರೆ. ಕೆಲಸ ಮುಗಿದ ನಂತರ ಬಂದಷ್ಟೇ ಸೈಲೆಂಟ್​ ಆಗಿ ಸ್ಥಳದಿಂದ ಕಾಲ್ಕಿತ್ತಿತ್ತಿದ್ದಾರೆ. ನಂತರ ಬಂದ ರಿಷಬ್​ ಪಂತ್​ ಮತ್ತೆ, ಬ್ಯಾಟಿಂಗ್​ ಗಾರ್ಡ್​ ಹಾಕಿಕೊಂಡಿದ್ದಾರೆ.

ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಗೊತ್ತಾಗುವುದಿಲ್ಲ ಎಂದುಕೊಳ್ಳುತ್ತದೆಯಂತೆ. ಸ್ಮಿತ್​ ಕತೆಯೂ ಅದೇ ರೀತಿ ಆಗಿದೆ. ಸ್ಮಿತ್​ ಮಾಡಿದ ಕೀಳುಮಟ್ಟದ ಕೆಲಸ ಸ್ಟಂಪ್​ ಕ್ಯಾಮೆರಾದಲ್ಲಿ ಸೆರಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆಸ್ಟ್ರೇಲಿಯಾ ಕೀಳುಮಟ್ಟದ ಗಿಮಿಕ್​ಗೆ ವೀರೇದ್ರ ಸೆಹ್ವಾಗ್​ ಸಹ ಛೀಮಾರಿ ಹಾಕಿದ್ದಾರೆ. ಸ್ಮಿತ್​ ಮಾಡಿರುವ ಕೆಲಸದಿಂದ ಯಾವುದೇ ಪ್ರಯೋಜವಾಗಿಲ್ಲ ಎಂದು ಟೀಕೆ ಮಾಡಿದ್ದಾರೆ.

ಸ್ಟೀವ್​ ಸ್ಮಿತ್​ ಪರವಾಗಿ ನಿಂತಿದ್ದ ಕೊಹ್ಲಿ ನಮ್ಮ ಎದುರು ಆಡುವವರು ಎದುರಾಳಿ ಮಾತ್ರ ವೈರಿ ಅಲ್ಲ ಎನ್ನುವುದನ್ನು ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಸಾಬೀತು ಮಾಡಿದ್ದರು. ಬಾಲ್​ ಟ್ಯಾಂಪರಿಂಗ್​ ಪ್ರಕರಣದ ಜವಾಬ್ದಾರಿ ಹೊತ್ತು ಸ್ಟೀವ್​ ಸ್ಮಿತ್​ ಕ್ರಿಕೆಟ್​ನಿಂದ ಒಂದು ವರ್ಷ ಹೊರಗುಳಿದಿದ್ದರು. 2019ರ ವರ್ಲ್ಡ್​​ ಕಪ್​ಗೆ ಸ್ಮಿತ್​ ಮರಳಿದ್ದರು. ಸ್ಮಿತ್​ ಭಾರತದ ವಿರುದ್ಧ ಮೈದಾನಕ್ಕೆ ಇಳಿದಾಗ ಅಭಿಮಾನಿಗಳು ಮೋಸಗಾರ ಎಂದು ಕೂಗಿದ್ದರು. ಈ ವೇಳೆ ಕೊಹ್ಲಿ ಅಭಿಮಾನಿಗಳಿಗೆ ಸ್ಮಿತ್​ ಅವರನ್ನು ಹೊಗಳುವಂತೆ ಹುರಿದುಂಬಿಸಿದ್ದರು. ಇದಕ್ಕೆ ತದ್ವಿರುದ್ಧವಾಗಿ ಸ್ಮಿತ್​ ನಡೆದುಕೊಂಡಿದ್ದಾರೆ.

ತಂಡವನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಿದ ವಿಹಾರಿ- ಅಶ್ವಿನ್​; 3ನೇ ಟೆಸ್ಟ್​ ಡ್ರಾನಲ್ಲಿ ಅಂತ್ಯ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ