AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋದಲ್ಲಿ ಬಟಾಬಯಲು.. ಆಸ್ಟ್ರೇಲಿಯಾ ಆಟಗಾರ ಸ್ಮಿತ್​ ಇಷ್ಟು ಕೀಳುಮಟ್ಟಕ್ಕೆ ಇಳಿಯಬಾರದಿತ್ತು

ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದುಕೊಳ್ಳುತ್ತದೆಯಂತೆ. ಸ್ಮಿತ್​ ಕತೆಯೂ ಅದೇ ರೀತಿ ಆಗಿದೆ. ಸ್ಮಿತ್​ ಮಾಡಿದ ಕೀಳುಮಟ್ಟದ ಕೆಲಸ ಸ್ಟಂಪ್​ ಕ್ಯಾಮೆರಾದಲ್ಲಿ ಸೆರಯಾಗಿದೆ.

ವಿಡಿಯೋದಲ್ಲಿ ಬಟಾಬಯಲು.. ಆಸ್ಟ್ರೇಲಿಯಾ ಆಟಗಾರ ಸ್ಮಿತ್​ ಇಷ್ಟು ಕೀಳುಮಟ್ಟಕ್ಕೆ ಇಳಿಯಬಾರದಿತ್ತು
ಸ್ಮಿತ್​ ಮಾಡಿದ ಕೆಳಮಟ್ಟದ ಗಿಮಿಕ್
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Jan 11, 2021 | 3:42 PM

Share

ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಬೌಲರ್​ಗಳ ಬೆವರಿಳಿಸಿದ್ದಾರೆ. ರಿಷಬ್​ ಪಂತ್​, ಚೇತೇಶ್ವರ ಪೂಜಾರ ಆಸ್ಟ್ರೇಲಿಯಾ ಬೌಲರ್​ಗಳನ್ನು ಬೆಂಡೆತ್ತಿದರೆ, ಹನುಮ ವಿಹಾರಿ ಹಾಗೂ ರವೀಂದ್ರಚಂದ್ರ ಅಶ್ವಿನ್​ ಕಾಂಗರೂ ಬೌಲರ್​ಗಳು ಬೆವರು ಹರಿಸುವಂತೆ ಮಾಡಿದ್ದರು. ಈ ಮಧ್ಯೆ ಆಸ್ಟ್ರೇಲಿಯಾ ಟೀಂ ಇಂಡಿಯಾವನ್ನು ಸೋಲಿಸಲು ತೀರಾನೆ ಕೆಳಮಟ್ಟಕ್ಕೆ ಇಳಿದಿದ್ದು ಬಯಲಾಗಿದೆ.

ಅದು ಎರಡನೇ ಸೆಷನ್​ ಸಮಯ. ಡ್ರಿಂಕ್​ ಬ್ರೇಕ್​ ಬಿಡಲಾಗಿತ್ತು. ಎಲ್ಲರೂ ತಂಪು ಪಾನೀಯ ಕುಡಿಯುವುದರಲ್ಲಿ ಬ್ಯುಸಿಯಾಗಿದ್ದರು. ಈ ವೇಳೆ ಕಳ್ಳ ಬೆಕ್ಕಿನಂತೆ ಸುಮ್ಮನೆ ಎಲ್ಲರ ಕಣ್ಣ ತಪ್ಪಿಸಿ ಸ್ಟಂಪ್​ ಬಳಿ ಬಂದ ಸ್ಟೀವ್​ ಸ್ಮಿತ್​, ರಿಷಬ್​ ಪಂತ್​ ಹಾಕಿದ್ದ ಬ್ಯಾಟಿಂಗ್​ ಗಾರ್ಡ್​ಅನ್ನು ಅಳಿಸಿ ಹಾಕಿದ್ದಾರೆ. ಕೆಲಸ ಮುಗಿದ ನಂತರ ಬಂದಷ್ಟೇ ಸೈಲೆಂಟ್​ ಆಗಿ ಸ್ಥಳದಿಂದ ಕಾಲ್ಕಿತ್ತಿತ್ತಿದ್ದಾರೆ. ನಂತರ ಬಂದ ರಿಷಬ್​ ಪಂತ್​ ಮತ್ತೆ, ಬ್ಯಾಟಿಂಗ್​ ಗಾರ್ಡ್​ ಹಾಕಿಕೊಂಡಿದ್ದಾರೆ.

ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಗೊತ್ತಾಗುವುದಿಲ್ಲ ಎಂದುಕೊಳ್ಳುತ್ತದೆಯಂತೆ. ಸ್ಮಿತ್​ ಕತೆಯೂ ಅದೇ ರೀತಿ ಆಗಿದೆ. ಸ್ಮಿತ್​ ಮಾಡಿದ ಕೀಳುಮಟ್ಟದ ಕೆಲಸ ಸ್ಟಂಪ್​ ಕ್ಯಾಮೆರಾದಲ್ಲಿ ಸೆರಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆಸ್ಟ್ರೇಲಿಯಾ ಕೀಳುಮಟ್ಟದ ಗಿಮಿಕ್​ಗೆ ವೀರೇದ್ರ ಸೆಹ್ವಾಗ್​ ಸಹ ಛೀಮಾರಿ ಹಾಕಿದ್ದಾರೆ. ಸ್ಮಿತ್​ ಮಾಡಿರುವ ಕೆಲಸದಿಂದ ಯಾವುದೇ ಪ್ರಯೋಜವಾಗಿಲ್ಲ ಎಂದು ಟೀಕೆ ಮಾಡಿದ್ದಾರೆ.

ಸ್ಟೀವ್​ ಸ್ಮಿತ್​ ಪರವಾಗಿ ನಿಂತಿದ್ದ ಕೊಹ್ಲಿ ನಮ್ಮ ಎದುರು ಆಡುವವರು ಎದುರಾಳಿ ಮಾತ್ರ ವೈರಿ ಅಲ್ಲ ಎನ್ನುವುದನ್ನು ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಸಾಬೀತು ಮಾಡಿದ್ದರು. ಬಾಲ್​ ಟ್ಯಾಂಪರಿಂಗ್​ ಪ್ರಕರಣದ ಜವಾಬ್ದಾರಿ ಹೊತ್ತು ಸ್ಟೀವ್​ ಸ್ಮಿತ್​ ಕ್ರಿಕೆಟ್​ನಿಂದ ಒಂದು ವರ್ಷ ಹೊರಗುಳಿದಿದ್ದರು. 2019ರ ವರ್ಲ್ಡ್​​ ಕಪ್​ಗೆ ಸ್ಮಿತ್​ ಮರಳಿದ್ದರು. ಸ್ಮಿತ್​ ಭಾರತದ ವಿರುದ್ಧ ಮೈದಾನಕ್ಕೆ ಇಳಿದಾಗ ಅಭಿಮಾನಿಗಳು ಮೋಸಗಾರ ಎಂದು ಕೂಗಿದ್ದರು. ಈ ವೇಳೆ ಕೊಹ್ಲಿ ಅಭಿಮಾನಿಗಳಿಗೆ ಸ್ಮಿತ್​ ಅವರನ್ನು ಹೊಗಳುವಂತೆ ಹುರಿದುಂಬಿಸಿದ್ದರು. ಇದಕ್ಕೆ ತದ್ವಿರುದ್ಧವಾಗಿ ಸ್ಮಿತ್​ ನಡೆದುಕೊಂಡಿದ್ದಾರೆ.

ತಂಡವನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಿದ ವಿಹಾರಿ- ಅಶ್ವಿನ್​; 3ನೇ ಟೆಸ್ಟ್​ ಡ್ರಾನಲ್ಲಿ ಅಂತ್ಯ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ