AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋದಲ್ಲಿ ಬಟಾಬಯಲು.. ಆಸ್ಟ್ರೇಲಿಯಾ ಆಟಗಾರ ಸ್ಮಿತ್​ ಇಷ್ಟು ಕೀಳುಮಟ್ಟಕ್ಕೆ ಇಳಿಯಬಾರದಿತ್ತು

ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದುಕೊಳ್ಳುತ್ತದೆಯಂತೆ. ಸ್ಮಿತ್​ ಕತೆಯೂ ಅದೇ ರೀತಿ ಆಗಿದೆ. ಸ್ಮಿತ್​ ಮಾಡಿದ ಕೀಳುಮಟ್ಟದ ಕೆಲಸ ಸ್ಟಂಪ್​ ಕ್ಯಾಮೆರಾದಲ್ಲಿ ಸೆರಯಾಗಿದೆ.

ವಿಡಿಯೋದಲ್ಲಿ ಬಟಾಬಯಲು.. ಆಸ್ಟ್ರೇಲಿಯಾ ಆಟಗಾರ ಸ್ಮಿತ್​ ಇಷ್ಟು ಕೀಳುಮಟ್ಟಕ್ಕೆ ಇಳಿಯಬಾರದಿತ್ತು
ಸ್ಮಿತ್​ ಮಾಡಿದ ಕೆಳಮಟ್ಟದ ಗಿಮಿಕ್
ರಾಜೇಶ್ ದುಗ್ಗುಮನೆ
| Edited By: |

Updated on: Jan 11, 2021 | 3:42 PM

Share

ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಬೌಲರ್​ಗಳ ಬೆವರಿಳಿಸಿದ್ದಾರೆ. ರಿಷಬ್​ ಪಂತ್​, ಚೇತೇಶ್ವರ ಪೂಜಾರ ಆಸ್ಟ್ರೇಲಿಯಾ ಬೌಲರ್​ಗಳನ್ನು ಬೆಂಡೆತ್ತಿದರೆ, ಹನುಮ ವಿಹಾರಿ ಹಾಗೂ ರವೀಂದ್ರಚಂದ್ರ ಅಶ್ವಿನ್​ ಕಾಂಗರೂ ಬೌಲರ್​ಗಳು ಬೆವರು ಹರಿಸುವಂತೆ ಮಾಡಿದ್ದರು. ಈ ಮಧ್ಯೆ ಆಸ್ಟ್ರೇಲಿಯಾ ಟೀಂ ಇಂಡಿಯಾವನ್ನು ಸೋಲಿಸಲು ತೀರಾನೆ ಕೆಳಮಟ್ಟಕ್ಕೆ ಇಳಿದಿದ್ದು ಬಯಲಾಗಿದೆ.

ಅದು ಎರಡನೇ ಸೆಷನ್​ ಸಮಯ. ಡ್ರಿಂಕ್​ ಬ್ರೇಕ್​ ಬಿಡಲಾಗಿತ್ತು. ಎಲ್ಲರೂ ತಂಪು ಪಾನೀಯ ಕುಡಿಯುವುದರಲ್ಲಿ ಬ್ಯುಸಿಯಾಗಿದ್ದರು. ಈ ವೇಳೆ ಕಳ್ಳ ಬೆಕ್ಕಿನಂತೆ ಸುಮ್ಮನೆ ಎಲ್ಲರ ಕಣ್ಣ ತಪ್ಪಿಸಿ ಸ್ಟಂಪ್​ ಬಳಿ ಬಂದ ಸ್ಟೀವ್​ ಸ್ಮಿತ್​, ರಿಷಬ್​ ಪಂತ್​ ಹಾಕಿದ್ದ ಬ್ಯಾಟಿಂಗ್​ ಗಾರ್ಡ್​ಅನ್ನು ಅಳಿಸಿ ಹಾಕಿದ್ದಾರೆ. ಕೆಲಸ ಮುಗಿದ ನಂತರ ಬಂದಷ್ಟೇ ಸೈಲೆಂಟ್​ ಆಗಿ ಸ್ಥಳದಿಂದ ಕಾಲ್ಕಿತ್ತಿತ್ತಿದ್ದಾರೆ. ನಂತರ ಬಂದ ರಿಷಬ್​ ಪಂತ್​ ಮತ್ತೆ, ಬ್ಯಾಟಿಂಗ್​ ಗಾರ್ಡ್​ ಹಾಕಿಕೊಂಡಿದ್ದಾರೆ.

ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಗೊತ್ತಾಗುವುದಿಲ್ಲ ಎಂದುಕೊಳ್ಳುತ್ತದೆಯಂತೆ. ಸ್ಮಿತ್​ ಕತೆಯೂ ಅದೇ ರೀತಿ ಆಗಿದೆ. ಸ್ಮಿತ್​ ಮಾಡಿದ ಕೀಳುಮಟ್ಟದ ಕೆಲಸ ಸ್ಟಂಪ್​ ಕ್ಯಾಮೆರಾದಲ್ಲಿ ಸೆರಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆಸ್ಟ್ರೇಲಿಯಾ ಕೀಳುಮಟ್ಟದ ಗಿಮಿಕ್​ಗೆ ವೀರೇದ್ರ ಸೆಹ್ವಾಗ್​ ಸಹ ಛೀಮಾರಿ ಹಾಕಿದ್ದಾರೆ. ಸ್ಮಿತ್​ ಮಾಡಿರುವ ಕೆಲಸದಿಂದ ಯಾವುದೇ ಪ್ರಯೋಜವಾಗಿಲ್ಲ ಎಂದು ಟೀಕೆ ಮಾಡಿದ್ದಾರೆ.

ಸ್ಟೀವ್​ ಸ್ಮಿತ್​ ಪರವಾಗಿ ನಿಂತಿದ್ದ ಕೊಹ್ಲಿ ನಮ್ಮ ಎದುರು ಆಡುವವರು ಎದುರಾಳಿ ಮಾತ್ರ ವೈರಿ ಅಲ್ಲ ಎನ್ನುವುದನ್ನು ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಸಾಬೀತು ಮಾಡಿದ್ದರು. ಬಾಲ್​ ಟ್ಯಾಂಪರಿಂಗ್​ ಪ್ರಕರಣದ ಜವಾಬ್ದಾರಿ ಹೊತ್ತು ಸ್ಟೀವ್​ ಸ್ಮಿತ್​ ಕ್ರಿಕೆಟ್​ನಿಂದ ಒಂದು ವರ್ಷ ಹೊರಗುಳಿದಿದ್ದರು. 2019ರ ವರ್ಲ್ಡ್​​ ಕಪ್​ಗೆ ಸ್ಮಿತ್​ ಮರಳಿದ್ದರು. ಸ್ಮಿತ್​ ಭಾರತದ ವಿರುದ್ಧ ಮೈದಾನಕ್ಕೆ ಇಳಿದಾಗ ಅಭಿಮಾನಿಗಳು ಮೋಸಗಾರ ಎಂದು ಕೂಗಿದ್ದರು. ಈ ವೇಳೆ ಕೊಹ್ಲಿ ಅಭಿಮಾನಿಗಳಿಗೆ ಸ್ಮಿತ್​ ಅವರನ್ನು ಹೊಗಳುವಂತೆ ಹುರಿದುಂಬಿಸಿದ್ದರು. ಇದಕ್ಕೆ ತದ್ವಿರುದ್ಧವಾಗಿ ಸ್ಮಿತ್​ ನಡೆದುಕೊಂಡಿದ್ದಾರೆ.

ತಂಡವನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಿದ ವಿಹಾರಿ- ಅಶ್ವಿನ್​; 3ನೇ ಟೆಸ್ಟ್​ ಡ್ರಾನಲ್ಲಿ ಅಂತ್ಯ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌