AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England Test Series: ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯನ್ನು ತೆಂಡೂಲ್ಕರ್-ಕುಕ್ ಟ್ರೋಫಿ ಅಂತ ಕರೆಯಬೇಕು: ಪನೆಸಾರ್

ಬಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುವ ಟೆಸ್ಟ್​ ಸರಣಿ ಉಭಯ ದೇಶಗಳ ಲೆಜೆಂಡರಿ ಬ್ಯಾಟ್ಸ್​ಮನ್​ಗಳಾಗಿರುವ ಸಚಿನ್ ತೆಂಡೂಲ್ಕರ್ ಮತ್ತು ಅಲಸ್ಟೇರ್ ಕುಕ್ ಅವರ ಹೆಸರಿನಲ್ಲಿ ಆಡಿಸಬೇಕು ಅಂತ ಮಾಂಟಿ ಪನೆಸಾರ್ ತಮ್ಮ ಟ್ವೀಟ್​ನಲ್ಲಿ ಹೇಳಿದ್ದಾರೆ.

India vs England Test Series: ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯನ್ನು ತೆಂಡೂಲ್ಕರ್-ಕುಕ್ ಟ್ರೋಫಿ ಅಂತ ಕರೆಯಬೇಕು: ಪನೆಸಾರ್
ಅಲಸ್ಟೇರ್ ಕುಕ್ ಮತ್ತು ಸಚಿನ್ ತೆಂಡೂಲ್ಕರ್
ಅರುಣ್​ ಕುಮಾರ್​ ಬೆಳ್ಳಿ
|

Updated on:Feb 11, 2021 | 10:18 PM

Share

ಇಂಗ್ಲೆಂಡ್ 2012ರಲ್ಲಿ ಭಾರತ ಪ್ರವಾಸ ಬಂದಾಗ ಆಂಗ್ಲರು ಸರಣಿಯನ್ನು 2-1 ಅಂತರದಿಂದ ಗೆಲ್ಲುವಲ್ಲಿ ಸರಣಿಯಲ್ಲಿ 17 ವಿಕೆಟ್ ಪಡೆದ ಪನೆಸಾರ್ ನಿರ್ಣಾಯಕ ಪಾತ್ರ ವಹಿಸಿದ್ದರು. ತೆಂಡೂಲ್ಕರ್ ಅವರನ್ನು ವಿಶ್ವದ ಅತಿದೊಡ್ಡ ಲೆಜೆಂಡರಿ ಆಟಗಾರ ಅಂತ ಹೇಳುವ ಪನೆಸಾರ್, ಸಚಿನ್ ಮತ್ತು ಕುಕ್ ತಮ್ಮ ದೇಶಗಳ ಪರ ಅತಿ ಹೆಚ್ಚು ರನ್​ಗಳನ್ನು ಗಳಿಸಿದ್ದಾರಲ್ಲದೆ ಪರಸ್ಪರ ಎದುರಾಳಿಗಳಾಗಿ ಆಡಿದ್ದಾರೆ ಎಂದು ಹೇಳಿದ್ದಾರೆ. ಹಾಗಾಗಿ, ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್​ ಸರಣಿಯನ್ನು ತೆಂಡೂಲ್ಕರ್-ಕುಕ್ ಟ್ರೋಫಿ ಅಂತ ಕರೆಯಬೇಕು ಅಂದಿದ್ದಾರೆ.

‘ಇಂಗ್ಲೆಂಡ್ ಮತ್ತು ಇಂಡಿಯಾ ನಡುವೆ ಆಡಲಾಗುವ ಸರಣಿಯನ್ನು ತೆಂಡೂಲ್ಕರ್-ಕುಕ್ ಟ್ರೋಫಿ ಎಂದು ಕರೆಯಬೇಕು, ಯಾಕೆಂದರೆ ಅವರಿಬ್ಬರು ತಮ್ಮ ತಮ್ಮ ದೇಶಗಳ ಪರ ಅತಿಹೆಚ್ಚು ರನ್ ಗಳಿಸಿದ್ದಾರೆ. ಅವರು ಪರಸ್ಪರ ಎದುರಾಳಿಗಳಾಗಿ ಆಡಿದ್ದಾರೆ ಮತ್ತು ನಮಗೆಲ್ಲ ಗೊತ್ತಿರುವಂತೆ, ತೆಂಡೂಲ್ಕರ್ ಕ್ರೀಡೆಯ ಅತಿದೊಡ್ಡ ಲೆಜೆಂಡ್ ಆಗಿದ್ದರೂ ಅವರ ಹೆಸರಿನಲ್ಲಿ ಯಾವುದೇ ಸರಣಿ ನಡೆಯುತ್ತಿಲ್ಲ, ಎಂದು ಪನೆಸಾರ್ ಟ್ವೀಟ್ ಮಾಡಿದ್ದಾರೆ.

Monty Panesar

ಮಾಂಟಿ ಪನೆಸಾರ್

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 200 ಪಂದ್ಯಗಳನ್ನು ಆಡಿರುವ ಏಕಮಾತ್ರ ಅಟಗಾರನಾಗಿರುವ ಸಚಿನ್ ತೆಂಡೂಲ್ಕರ್ 51 ಶತಕಗಳ ಸಹಿತ 15,921 ರನ್ ಗಳಿಸಿ ವಿದಾಯ ಹೇಳಿದರು. ಈ ಫಾರ್ಮಾಟ್​ನಲ್ಲಿ ಅತಿಹೆಚ್ಚು ರನ್ ಗಳಿಸಿರುವ ಕೀರ್ತಿ ಸಹ ಭಾರತದ ಲಿಟ್ಲ್ ಮಾಸ್ಟರ್​ ಅವರದ್ದು. ಹಾಗೆಯೇ, ಇಂಗ್ಲೆಂಡ್​ ಪರ 161 ಟೆಸ್ಟ್​ಗಳನ್ನಾಡಿದ ಕುಕ್ 33 ಶತಕಗಳೊಂದಿಗೆ 12,472 ರನ್ ಗಳಿಸಿದ್ದಾರೆ.

ಇದನ್ನೂ ಓದಿ: India vs England Test Series: ಎರಡನೇ ಟೆಸ್ಟ್​ ಪಂದ್ಯವನ್ನೂ ಭಾರತ ಸೋತರೆ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯಲಿದ್ದಾರೆ: ಮಾಂಟಿ ಪನೆಸಾರ್

ಪನೆಸಾರ್ ಅವರ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಒಬ್ಬ ಕ್ರಿಕೆಟ್ ಪ್ರೇಮಿ, ‘ಅದ್ಸರಿ ಸರಣಿಗೆ ಭಜ್ಜಿ-ಪನೆಸಾರ್ ಟ್ರೋಫಿ ಅಂತ ಯಾಕೆ ಕರೆಯಬಾರದು,’ ಅಂತ ಛೇಡಿಸಿದ್ದಾರೆ.

ಅವರಿಗೆ ಉತ್ತರಿಸಿರುವ ಪನೆಸಾರ್, ‘ನಾನು ಟೆಸ್ಟ್​ ಕ್ರಿಕೆಟ್​ನಲ್ಲಿ 300 ವಿಕೆಟ್​ಗಳನ್ನು ಪಡೆದಿದ್ದರೆ ಹರ್ಭಜನ್-ಪನೆಸಾರ್ ಟ್ರೋಫಿ ಎಂದು ಕರೆಯಬಹುದಿತ್ತು,’ ಅಂತ ಟ್ವೀಟ್ ಮಾಡಿದ್ದಾರೆ.

Published On - 6:25 pm, Thu, 11 February 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?