Govt Stake Sale In Tata Communications: ಟಾಟಾ ಕಮ್ಯುನಿಕೇಷನ್ಸ್​ನಲ್ಲಿನ ಎಲ್ಲ ಷೇರನ್ನು ಮಾರಲಿದೆ ಕೇಂದ್ರ ಸರ್ಕಾರ

ಭಾರತ ಸರ್ಕಾರವು ಟಾಟಾ ಕಮ್ಯುನಿಕೇಷನ್ಸ್​ನಲ್ಲಿ ಇರುವ ಶೇಕಡಾ 26.12ರಷ್ಟು ಷೇರನ್ನು ಮಾರಾಟ ಮಾಡಿ, ಸಂಪೂರ್ಣವಾಗಿ ಹೊರಬರಲಿದೆ ಎಂದು ಕಂಪೆನಿಯ ರೆಗ್ಯುಲೇಟರಿ ಫೈಲಿಂಗ್​ನಲ್ಲಿ ತಿಳಿಸಲಾಗಿದೆ.

Govt Stake Sale In Tata Communications: ಟಾಟಾ ಕಮ್ಯುನಿಕೇಷನ್ಸ್​ನಲ್ಲಿನ ಎಲ್ಲ ಷೇರನ್ನು ಮಾರಲಿದೆ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
Follow us
| Updated By: guruganesh bhat

Updated on: Mar 13, 2021 | 12:28 PM

ಟಾಟಾ ಕಮ್ಯುನಿಕೇಷನ್ಸ್ ಲಿಮಿಟೆಡ್​ನಲ್ಲಿ ಇರುವ ಶೇಕಡಾ 26.12ರಷ್ಟು ಷೇರನ್ನು ಭಾರತ ಸರ್ಕಾರ ಸಂಪೂರ್ಣವಾಗಿ ಮಾರಾಟ ಮಾಡಿ, ಹೊರನಡೆಯಲಿದೆ ಎಂದು ಶುಕ್ರವಾರದಂದು ರೆಗ್ಯುಲೇಟರಿ ಫೈಲಿಂಗ್​ನಲ್ಲಿ ಕಂಪೆನಿ ತಿಳಿಸಿದೆ. ಸರ್ಕಾರವು ಶೇ 16.12ರಷ್ಟು ಷೇರನ್ನು ಆಫರ್ ಫಾರ್ ಸೇಲ್ (ಒಎಫ್​ಎಸ್) ಮೂಲಕ ಸ್ಟಾಕ್ ಎಕ್ಸ್​ಚೇಂಜ್​ನಲ್ಲಿ ಮಾರಾಟ ಮಾಡಲಿದೆ. ಬಾಕಿ ಷೇರಿನ ಪ್ರಮಾಣವನ್ನು ಟಾಟಾ ಸನ್ಸ್​ನ ಖಾಸಗಿ ಹೂಡಿಕೆ ಸಂಸ್ಥೆ ಪನಟೋನ್ ಫಿನ್​ವೆಸ್ಟ್ ಲಿಮಿಟೆಡ್​ಗೆ ಮಾರಾಟ ಮಾಡಲಿದೆ.

ಪನಟೋನ್ ಫಿನ್​ವೆಸ್ಟ್ ಸದ್ಯಕ್ಕೆ ಟಾಟಾ ಕಮ್ಯುನಿಕೇಷನ್ಸ್​ನ ಶೇ 34.8ರಷ್ಟು ಪಾಲನ್ನು ಹೊಂದಿದೆ. ಇನ್ನು ಟಾಟಾ ಸನ್ಸ್ ಶೇಕಡಾ 14.1ರಷ್ಟು ಪಾಲು ಹೊಂದಿದೆ. ಅಂದಹಾಗೆ, ಸರ್ಕಾರದ ಬಳಿ ಟಾಟಾ ಕಮ್ಯುನಿಕೇಷನ್ಸ್​ನ 7,44,46,885 ಈಕ್ವಿಟಿ ಷೇರು ಇದೆ. ಶುಕ್ರವಾರದ ದಿನದ ಕೊನೆಗೆ ಷೇರು ಮಾರುಕಟ್ಟೆಯಲ್ಲಿ ವಹಿವಾಟು ಮುಗಿಸುವ ಹೊತ್ತಿಗೆ ಪ್ರತಿ ಷೇರಿಗೆ ರೂ. 1289.75 ಇತ್ತು. ಅದರ ಒಟ್ಟಾರೆ ಮೌಲ್ಯ ರೂ. 9601 ಕೋಟಿ ಆಗುತ್ತದೆ.

ಆರಂಭಿಕ ಹೆಜ್ಜೆಯಾಗಿ ಸರ್ಕಾರದಿಂದ ಟಾಟಾ ಕಮ್ಯುನಿಕೇಷನ್ಸ್ ಕಂಪೆನಿಯ 4,59,46,885 ಈಕ್ವಿಟಿ ಷೇರುಗಳನ್ನು, ಅಂದರೆ ಶೇಕಡಾ 16.12ರಷ್ಟು ಪಾಲನ್ನು ಸ್ಟಾಕ್ ಎಕ್ಸ್​ಚೇಂಜ್ ಮೂಲಕವಾಗಿ ಆಫರ್ ಫಾರ್ ಸೇಲ್ (ಒಎಫ್​ಎಸ್) ಮಾಡಲಾಗುತ್ತದೆ. ಆ ಪ್ರಕ್ರಿಯೆ ಮುಗಿದ ತಕ್ಷಣವೇ ಬಾಕಿ ಉಳಿಯುವ ಈಕ್ವಿಟಿ ಷೇರುಗಳನ್ನು ಪನಟೋನ್ ಕಂಪೆನಿಗೆ ಮಾರಾಟ ಮಾಡಲಿದೆ ಎಂದು ಫೈಲಿಂಗ್​ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ