Sign In

By signing in or creating an account, you agree with Associated Broadcasting Company's Terms & Conditions and Privacy Policy.

Govt Stake Sale In Tata Communications: ಟಾಟಾ ಕಮ್ಯುನಿಕೇಷನ್ಸ್​ನಲ್ಲಿನ ಎಲ್ಲ ಷೇರನ್ನು ಮಾರಲಿದೆ ಕೇಂದ್ರ ಸರ್ಕಾರ

ಭಾರತ ಸರ್ಕಾರವು ಟಾಟಾ ಕಮ್ಯುನಿಕೇಷನ್ಸ್​ನಲ್ಲಿ ಇರುವ ಶೇಕಡಾ 26.12ರಷ್ಟು ಷೇರನ್ನು ಮಾರಾಟ ಮಾಡಿ, ಸಂಪೂರ್ಣವಾಗಿ ಹೊರಬರಲಿದೆ ಎಂದು ಕಂಪೆನಿಯ ರೆಗ್ಯುಲೇಟರಿ ಫೈಲಿಂಗ್​ನಲ್ಲಿ ತಿಳಿಸಲಾಗಿದೆ.

Govt Stake Sale In Tata Communications: ಟಾಟಾ ಕಮ್ಯುನಿಕೇಷನ್ಸ್​ನಲ್ಲಿನ ಎಲ್ಲ ಷೇರನ್ನು ಮಾರಲಿದೆ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
Follow us
Srinivas Mata
| Updated By: guruganesh bhat

Updated on: Mar 13, 2021 | 12:28 PM

ಟಾಟಾ ಕಮ್ಯುನಿಕೇಷನ್ಸ್ ಲಿಮಿಟೆಡ್​ನಲ್ಲಿ ಇರುವ ಶೇಕಡಾ 26.12ರಷ್ಟು ಷೇರನ್ನು ಭಾರತ ಸರ್ಕಾರ ಸಂಪೂರ್ಣವಾಗಿ ಮಾರಾಟ ಮಾಡಿ, ಹೊರನಡೆಯಲಿದೆ ಎಂದು ಶುಕ್ರವಾರದಂದು ರೆಗ್ಯುಲೇಟರಿ ಫೈಲಿಂಗ್​ನಲ್ಲಿ ಕಂಪೆನಿ ತಿಳಿಸಿದೆ. ಸರ್ಕಾರವು ಶೇ 16.12ರಷ್ಟು ಷೇರನ್ನು ಆಫರ್ ಫಾರ್ ಸೇಲ್ (ಒಎಫ್​ಎಸ್) ಮೂಲಕ ಸ್ಟಾಕ್ ಎಕ್ಸ್​ಚೇಂಜ್​ನಲ್ಲಿ ಮಾರಾಟ ಮಾಡಲಿದೆ. ಬಾಕಿ ಷೇರಿನ ಪ್ರಮಾಣವನ್ನು ಟಾಟಾ ಸನ್ಸ್​ನ ಖಾಸಗಿ ಹೂಡಿಕೆ ಸಂಸ್ಥೆ ಪನಟೋನ್ ಫಿನ್​ವೆಸ್ಟ್ ಲಿಮಿಟೆಡ್​ಗೆ ಮಾರಾಟ ಮಾಡಲಿದೆ.

ಪನಟೋನ್ ಫಿನ್​ವೆಸ್ಟ್ ಸದ್ಯಕ್ಕೆ ಟಾಟಾ ಕಮ್ಯುನಿಕೇಷನ್ಸ್​ನ ಶೇ 34.8ರಷ್ಟು ಪಾಲನ್ನು ಹೊಂದಿದೆ. ಇನ್ನು ಟಾಟಾ ಸನ್ಸ್ ಶೇಕಡಾ 14.1ರಷ್ಟು ಪಾಲು ಹೊಂದಿದೆ. ಅಂದಹಾಗೆ, ಸರ್ಕಾರದ ಬಳಿ ಟಾಟಾ ಕಮ್ಯುನಿಕೇಷನ್ಸ್​ನ 7,44,46,885 ಈಕ್ವಿಟಿ ಷೇರು ಇದೆ. ಶುಕ್ರವಾರದ ದಿನದ ಕೊನೆಗೆ ಷೇರು ಮಾರುಕಟ್ಟೆಯಲ್ಲಿ ವಹಿವಾಟು ಮುಗಿಸುವ ಹೊತ್ತಿಗೆ ಪ್ರತಿ ಷೇರಿಗೆ ರೂ. 1289.75 ಇತ್ತು. ಅದರ ಒಟ್ಟಾರೆ ಮೌಲ್ಯ ರೂ. 9601 ಕೋಟಿ ಆಗುತ್ತದೆ.

ಆರಂಭಿಕ ಹೆಜ್ಜೆಯಾಗಿ ಸರ್ಕಾರದಿಂದ ಟಾಟಾ ಕಮ್ಯುನಿಕೇಷನ್ಸ್ ಕಂಪೆನಿಯ 4,59,46,885 ಈಕ್ವಿಟಿ ಷೇರುಗಳನ್ನು, ಅಂದರೆ ಶೇಕಡಾ 16.12ರಷ್ಟು ಪಾಲನ್ನು ಸ್ಟಾಕ್ ಎಕ್ಸ್​ಚೇಂಜ್ ಮೂಲಕವಾಗಿ ಆಫರ್ ಫಾರ್ ಸೇಲ್ (ಒಎಫ್​ಎಸ್) ಮಾಡಲಾಗುತ್ತದೆ. ಆ ಪ್ರಕ್ರಿಯೆ ಮುಗಿದ ತಕ್ಷಣವೇ ಬಾಕಿ ಉಳಿಯುವ ಈಕ್ವಿಟಿ ಷೇರುಗಳನ್ನು ಪನಟೋನ್ ಕಂಪೆನಿಗೆ ಮಾರಾಟ ಮಾಡಲಿದೆ ಎಂದು ಫೈಲಿಂಗ್​ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!