AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Govt Stake Sale In Tata Communications: ಟಾಟಾ ಕಮ್ಯುನಿಕೇಷನ್ಸ್​ನಲ್ಲಿನ ಎಲ್ಲ ಷೇರನ್ನು ಮಾರಲಿದೆ ಕೇಂದ್ರ ಸರ್ಕಾರ

ಭಾರತ ಸರ್ಕಾರವು ಟಾಟಾ ಕಮ್ಯುನಿಕೇಷನ್ಸ್​ನಲ್ಲಿ ಇರುವ ಶೇಕಡಾ 26.12ರಷ್ಟು ಷೇರನ್ನು ಮಾರಾಟ ಮಾಡಿ, ಸಂಪೂರ್ಣವಾಗಿ ಹೊರಬರಲಿದೆ ಎಂದು ಕಂಪೆನಿಯ ರೆಗ್ಯುಲೇಟರಿ ಫೈಲಿಂಗ್​ನಲ್ಲಿ ತಿಳಿಸಲಾಗಿದೆ.

Govt Stake Sale In Tata Communications: ಟಾಟಾ ಕಮ್ಯುನಿಕೇಷನ್ಸ್​ನಲ್ಲಿನ ಎಲ್ಲ ಷೇರನ್ನು ಮಾರಲಿದೆ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
Srinivas Mata
| Edited By: |

Updated on: Mar 13, 2021 | 12:28 PM

Share

ಟಾಟಾ ಕಮ್ಯುನಿಕೇಷನ್ಸ್ ಲಿಮಿಟೆಡ್​ನಲ್ಲಿ ಇರುವ ಶೇಕಡಾ 26.12ರಷ್ಟು ಷೇರನ್ನು ಭಾರತ ಸರ್ಕಾರ ಸಂಪೂರ್ಣವಾಗಿ ಮಾರಾಟ ಮಾಡಿ, ಹೊರನಡೆಯಲಿದೆ ಎಂದು ಶುಕ್ರವಾರದಂದು ರೆಗ್ಯುಲೇಟರಿ ಫೈಲಿಂಗ್​ನಲ್ಲಿ ಕಂಪೆನಿ ತಿಳಿಸಿದೆ. ಸರ್ಕಾರವು ಶೇ 16.12ರಷ್ಟು ಷೇರನ್ನು ಆಫರ್ ಫಾರ್ ಸೇಲ್ (ಒಎಫ್​ಎಸ್) ಮೂಲಕ ಸ್ಟಾಕ್ ಎಕ್ಸ್​ಚೇಂಜ್​ನಲ್ಲಿ ಮಾರಾಟ ಮಾಡಲಿದೆ. ಬಾಕಿ ಷೇರಿನ ಪ್ರಮಾಣವನ್ನು ಟಾಟಾ ಸನ್ಸ್​ನ ಖಾಸಗಿ ಹೂಡಿಕೆ ಸಂಸ್ಥೆ ಪನಟೋನ್ ಫಿನ್​ವೆಸ್ಟ್ ಲಿಮಿಟೆಡ್​ಗೆ ಮಾರಾಟ ಮಾಡಲಿದೆ.

ಪನಟೋನ್ ಫಿನ್​ವೆಸ್ಟ್ ಸದ್ಯಕ್ಕೆ ಟಾಟಾ ಕಮ್ಯುನಿಕೇಷನ್ಸ್​ನ ಶೇ 34.8ರಷ್ಟು ಪಾಲನ್ನು ಹೊಂದಿದೆ. ಇನ್ನು ಟಾಟಾ ಸನ್ಸ್ ಶೇಕಡಾ 14.1ರಷ್ಟು ಪಾಲು ಹೊಂದಿದೆ. ಅಂದಹಾಗೆ, ಸರ್ಕಾರದ ಬಳಿ ಟಾಟಾ ಕಮ್ಯುನಿಕೇಷನ್ಸ್​ನ 7,44,46,885 ಈಕ್ವಿಟಿ ಷೇರು ಇದೆ. ಶುಕ್ರವಾರದ ದಿನದ ಕೊನೆಗೆ ಷೇರು ಮಾರುಕಟ್ಟೆಯಲ್ಲಿ ವಹಿವಾಟು ಮುಗಿಸುವ ಹೊತ್ತಿಗೆ ಪ್ರತಿ ಷೇರಿಗೆ ರೂ. 1289.75 ಇತ್ತು. ಅದರ ಒಟ್ಟಾರೆ ಮೌಲ್ಯ ರೂ. 9601 ಕೋಟಿ ಆಗುತ್ತದೆ.

ಆರಂಭಿಕ ಹೆಜ್ಜೆಯಾಗಿ ಸರ್ಕಾರದಿಂದ ಟಾಟಾ ಕಮ್ಯುನಿಕೇಷನ್ಸ್ ಕಂಪೆನಿಯ 4,59,46,885 ಈಕ್ವಿಟಿ ಷೇರುಗಳನ್ನು, ಅಂದರೆ ಶೇಕಡಾ 16.12ರಷ್ಟು ಪಾಲನ್ನು ಸ್ಟಾಕ್ ಎಕ್ಸ್​ಚೇಂಜ್ ಮೂಲಕವಾಗಿ ಆಫರ್ ಫಾರ್ ಸೇಲ್ (ಒಎಫ್​ಎಸ್) ಮಾಡಲಾಗುತ್ತದೆ. ಆ ಪ್ರಕ್ರಿಯೆ ಮುಗಿದ ತಕ್ಷಣವೇ ಬಾಕಿ ಉಳಿಯುವ ಈಕ್ವಿಟಿ ಷೇರುಗಳನ್ನು ಪನಟೋನ್ ಕಂಪೆನಿಗೆ ಮಾರಾಟ ಮಾಡಲಿದೆ ಎಂದು ಫೈಲಿಂಗ್​ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ