AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್​ ಟ್ವಿಟ್ಟರ್​ ಖಾತೆ ರದ್ದುಗೊಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಇದೇ ಮಹಿಳೆ! ಪ್ರಕ್ರಿಯೆ ಹೇಗಿತ್ತು ಗೊತ್ತಾ?

ಟ್ರಂಪ್ ಟ್ವಿಟರ್​ ಖಾತೆ ರದ್ದಾದ ಬಗ್ಗೆ ಟ್ವೀಟ್​ ಮಾಡಿರುವ ವಿಜಯಾ, ಹಿಂಸಾಚಾರ ಹೆಚ್ಚುವ ಭೀತಿ ಎದುರಾದ್ದರಿಂದ @realDonaldTrump ಖಾತೆಯನ್ನು ಟ್ವಿಟ್ಟರ್​ ರದ್ದು ಮಾಡಿದೆ. ಎಂದಿದ್ದಾರೆ.

ಟ್ರಂಪ್​ ಟ್ವಿಟ್ಟರ್​ ಖಾತೆ ರದ್ದುಗೊಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಇದೇ ಮಹಿಳೆ! ಪ್ರಕ್ರಿಯೆ ಹೇಗಿತ್ತು ಗೊತ್ತಾ?
ವಿಜಯಾ ಗಡ್ಡೆ-ಡೊನಾಲ್ಡ್​ ಟ್ರಂಪ್​
ರಾಜೇಶ್ ದುಗ್ಗುಮನೆ
|

Updated on:Jan 11, 2021 | 1:14 PM

Share

ವಾಷಿಂಗ್ಟನ್​: ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರ ಟ್ವಿಟ್ಟರ್​ ಖಾತೆಯನ್ನು ರದ್ದು ಮಾಡಲಾಗಿದೆ. ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಭಾರತ ಮೂಲದ ಮಹಿಳೆ ಅನ್ನೋದು ವಿಶೇಷ.

ಅಹಿಂಸೆ, ಗಲಭೆ, ಅಶ್ಲೀಲ ಮತ್ತಿತ್ಯಾದಿ ಕೆಲ ಸೂಕ್ಷ್ಮ ವಿಚಾರಗಳನ್ನು ಪ್ರಚೋದಿಸುವ ಪೋಸ್ಟ್​ಗಳನ್ನು ಟ್ವಿಟ್ಟರ್​ ಸಹಿಸುವುದಿಲ್ಲ. ಹೀಗಾಗಿ, ಅಂಥ ಪೋಸ್ಟ್​ಗಳಿದ್ದರೆ ಅದನ್ನು ಟ್ವಿಟ್ಟರ್​ ಡಿಲೀಟ್​ ಮಾಡುತ್ತದೆ. ಅದು ಮಿತಿ ಮೀರಿದರೆ, ಟ್ವಿಟ್ಟರ್​ ಖಾತೆಯನ್ನೇ ರದ್ದು ಮಾಡುತ್ತದೆ. ಈಗ ಟ್ರಂಪ್​ ವಿಚಾರದಲ್ಲೂ ಇದೇ ನಿರ್ಧಾರ ತೆಗೆದುಕೊಂಡಿದೆ. ಅಮೆರಿಕದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಟ್ರಂಪ್​ ಟ್ವೀಟ್ ಪ್ರಚೋದನೆ ನೀಡಿತ್ತು. ಹೀಗಾಗಿ, ಅವರ ಅಧಿಕೃತ ಖಾತೆಯನ್ನೇ ಟ್ವಿಟ್ಟರ್​ ಡಿಲೀಟ್​ ಮಾಡಿದೆ.

ಈ ನಿರ್ಧಾರ ತೆಗೆದುಕೊಂಡಿದ್ದು ಭಾರತ ಮೂಲದ ಅಮೆರಿಕ ನಿವಾಸಿ ವಿಜಯಾ ಗಡ್ಡೆ. ಇವರು ಟ್ವಿಟರ್​ನ ಕಾನೂನು, ನೀತಿ ಮತ್ತು ಸುರಕ್ಷತೆ ವಿಭಾಗವನ್ನು ಮುನ್ನಡೆಸುತ್ತಿದ್ದಾರೆ. ವಿಜಯಾ ನೇತೃತ್ವದಲ್ಲಿ ಶನಿವಾರ ನಡೆದ ಸಭೆ ವೇಳೆ ಟ್ರಂಪ್​ ಖಾತೆಯನ್ನು ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ವಿಜಯಾ, ಹಿಂಸಾಚಾರ ಹೆಚ್ಚುವ ಭೀತಿ ಎದುರಾದ್ದರಿಂದ @realDonaldTrump ಖಾತೆಯನ್ನು ರದ್ದು ಮಾಡುವುದು ಟ್ವಿಟ್ಟರ್​ಗೆ ಅನಿವಾರ್ಯವಾಯಿತು ಎಂದಿದ್ದಾರೆ.

ಮೊದಲು ಎಚ್ಚರಿಕೆ ನೀಡಲಾಯಿತು. ಆನಂತರ ಅಹತ್ಯವಾಗಿ ಟ್ವಿಟ್ಟರ್ ಸಂಸ್ಥೆ ಸಭೆ ನಡೆಸಿ, ಸರ್ವಾನುಮತದಿಂದ ನಿರ್ಣಯ ತೆಗೆದುಕೊಂಡಿತು. ಅದಕ್ಕೆ ಅಗತ್ಯವಿರುವ ಕಾನೂನುಗಳನ್ನು ಸಭೆಗೆ ಮನದಟ್ಟುಪಡಿಸಲಾಯಿತು ಎಂದು ವಿಜಯಾ ವಿವರಿಸಿದ್ದಾರೆ. ​

ಯಾರಿದು ವಿಜಯಾ?  ವಿಜಯಾ ಹುಟ್ಟಿದ್ದು ಹೈದರಾಬಾದಿನಲ್ಲಿ. ಚಿಕ್ಕವರಿದ್ದಾಗಲೇ ಅವರು ಅಮೆರಿಕದ ಟೆಕ್ಸಾಸ್​ ನಗರಕ್ಕೆ ವಲಸೆ ಹೋಗಿದ್ದರು. ಮೆಕ್ಸಿಕೋದಲ್ಲಿ ಇವರ ತಂದೆ ರಾಸಾಯನಿಕ ಇಂಜಿನಿಯರ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ವಿಜಯಾ ಕಾನೂನು ಅಭ್ಯಾಸ ಪೂರ್ಣಗೊಳಿಸಿದ್ದಾರೆ. ಪ್ರತಿಷ್ಠಿತ ಕಾರ್ನೆಲ್ ವಿಶ್ವವಿದ್ಯಾಲಯ ಮತ್ತು ನ್ಯೂಯಾರ್ಕ್ ವಿಶ್ವವಿದ್ಯಾಲಯ ಕಾನೂನು ಶಾಲೆಯಲ್ಲಿ ಪದವಿ ಮುಗಿಸಿದ ಅವರು, 10 ವರ್ಷಗಳ ಕಾಲ ಟೆಕ್​ ಸ್ಟಾರ್ಟ್​ಅಪ್​ನಲ್ಲಿ ಕಾನೂನು ಸಲಹೆ ನೀಡುವ ಕೆಲಸ ಮಾಡಿದ್ದರು. 2011ರಲ್ಲಿ ವಿಜಯಾ ಟ್ವಿಟರ್​ಗೆ ಸೇರ್ಪಡೆ ಆಗಿದ್ದರು.

ಟ್ವಿಟ್ಟರ್ ನೀತಿಗಳನ್ನು ರೂಪಿಸುವಲ್ಲಿ, ಅಗತ್ಯವಿದ್ದಾಗ ಅದನ್ನು ಬದಲಾಯಿಸುವಲ್ಲಿ ​ವಿಜಯಾ ಅವರ ದೂರದೃಷ್ಟಿ ತುಂಬಾನೇ ಸಹಕಾರಿಯಾಗಿದೆ. ಇನ್ನು, ಅಮೆರಿಕದ ಸಾಕಷ್ಟು ಮಾಧ್ಯಮಗಳು ವಿಜಯಾ ಅವರ ಕಾರ್ಯವನ್ನು ಶ್ಲಾಘಿಸಿವೆ. ಇನ್​ಸ್ಟೈಲ್​ ಹೆಸರಿನ ಮ್ಯಾಗಜಿನ್​ 2020ರಲ್ಲಿ ವಿಶ್ವವನ್ನೇ ಬದಲಿಸಿದ 50 ಮಹಿಳೆಯರ ಪಟ್ಟಿ ಬಿಡುಗಡೆ ಮಾಡಿತ್ತು. ಇದರಲ್ಲಿ ವಿಜಯಾ  ಹೆಸರು ಕೂಡ ಇತ್ತು.

Published On - 1:14 pm, Mon, 11 January 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ