AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pulitzer Prize 2022 : ಡ್ಯಾನಿಷ್ ಸಿದ್ದಿಕಿಗೆ ಎರಡನೇ ಬಾರಿ ಪುಲಿಟ್ಝರ್ ಪ್ರಶಸ್ತಿ

Danish Siddiqui ಭಾರತೀಯ ಛಾಯಾಗ್ರಹಕರಾದ ಡ್ಯಾನಿಷ್ ಸಿದ್ದಿಕಿ ಸೇರಿದಂತೆ ಅದನ್ ಅಬೀದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ‘ಫೀಚರ್ ಫೋಟೋಗ್ರಫಿ’ ವಿಭಾಗದಲ್ಲಿ 2022ನೇ ಸಾಲಿನ ಪುಲಿಟ್ಝರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

Pulitzer Prize 2022 : ಡ್ಯಾನಿಷ್ ಸಿದ್ದಿಕಿಗೆ ಎರಡನೇ ಬಾರಿ ಪುಲಿಟ್ಝರ್ ಪ್ರಶಸ್ತಿ
ಎರಡನೇ ಬಾರಿ ಪುಲಿಟ್ಝರ್ ಪ್ರಶಸ್ತಿ ಪಡೆದ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ
TV9 Web
| Edited By: |

Updated on:May 10, 2022 | 12:08 PM

Share

Pulitzer Prize 2022 :  ಪ್ರಸಕ್ತ ಸಾಲಿನ ಪ್ರತಿಷ್ಠಿತ ಪುಲಿಟ್ಝರ್ ಪ್ರಶಸ್ತಿ ಘೋಷಿಸಲಾಗಿದೆ. ಅಫ್ಗಾನಿಸ್ತಾನ ಯುದ್ಧದ ಸಂದರ್ಭದಲ್ಲಿ ಹತ್ಯೆಗೀಡಾಗಿದ್ದ ರಾಯಟರ್ಸ್ ಸುದ್ದಿ ಸಂಸ್ಥೆಯ ಭಾರತೀಯ ಛಾಯಾಗ್ರಾಹಕ ಡ್ಯಾನಿಷ್ ಸಿದ್ದಿಕಿ ಸೇರಿದಂತೆ ಅವರ ಸಹೋದ್ಯೋಗಿ ಛಾಯಾಗ್ರಹಕರಾದ ಅದನ್ ಅಬೀದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ‘ಫೀಚರ್ ಫೋಟೋಗ್ರಫಿ’ ವಿಭಾಗದಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅದನ್ ಅಬೀದಿ, ಸನ್ನಾ ಇರ್ಷಾದ್ ಮಟ್ಟು, ಅಮಿತ್ ದೇವ ಅವರುಗಳು ಕೊವಿಡ್ ಸಂದರ್ಭದ ಭಾರತವನ್ನು ತಮ್ಮ ಕ್ಯಾಮೆರಾಗಳಲ್ಲಿ ಹಿಡಿದಿಟ್ಟ ರೀತಿ ಅತ್ಯಂತ ಮಾರ್ಮಿಕವಾಗಿದ್ದು ಅನ್ಯೋನ್ಯ ಭಾವ ಮತ್ತು ವಿನಾಶದ ಭೀತಿಯನ್ನು ಹಿಡಿದಿಟ್ಟ ಬಗೆ ಯಾರನ್ನೂ ಪ್ರಭಾವಿಸದೆ ಇರಲಾರವು. ಈ ಛಾಯಾಚಿತ್ರಗಳ ಒಳನೋಟ, ಆಳಅರ್ಥಗಳು ಗಂಭೀರಭಾವವನ್ನು ಹುಟ್ಟುಹಾಕುತ್ತವೆ ಎಂದು ಪುಲಿಟ್ಝರ್ ಪ್ರಶಸ್ತಿ ಆಯ್ಕೆ ಸಮಿತಿ ತಿಳಿಸಿದೆ.

2021ರ ಜುಲೈನಲ್ಲಿ ಅಫ್ಗಾನಿಸ್ತಾನ್ ಮತ್ತು ತಾಲಿಬಾನಿಗಳ ನಡುವೆ ನಡೆಯುತ್ತಿದ್ದ ಯುದ್ಧದ ಸಂದರ್ಭದಲ್ಲಿ ಡ್ಯಾನಿಷ್ ಸಿದ್ದಿಕಿ ಆ ಪ್ರದೇಶಗಳಿಗೆ ತೆರಳಿದ್ದರು. ಮುಂಬೈ ಮೂಲದ ಸಿದ್ದಿಕಿ ಕಂದಾಹಾರ್ ನಲ್ಲಿ ನಡೆದ ತೀವ್ರ ಸಂಘರ್ಷದ ಮಧ್ಯೆ ವರದಿ ಮಾಡುವಾಗ ಹತ್ಯೆಗೀಡಾದ್ದನ್ನು ಇಲ್ಲಿ ಸ್ಮರಿಸಬಹುದು. ಇವರಿಗೆ 2018ರಲ್ಲಿಯೂ ಫೀಚರ್ ಫೋಟೋಗ್ರಫಿ ವಿಭಾಗದಲ್ಲಿ ಪುಲಿಟ್ಝರ್ ಪ್ರಶಸ್ತಿ ಮೊದಲ ಬಾರಿಗೆ ದೊರೆತಿತ್ತು.

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪದವಿ ಪಡೆದ ಇವರು 2007ರಲ್ಲಿ ಎಜೆಕೆ ಸಮೂಹ ಸಂವಹನ ಸಂಶೋಧನಾ ಕೇಂದ್ರದಿಂದ ಸಮೂಹ ಸಂವಹನದಲ್ಲಿಯೂ ಪದವಿ ಪಡೆದಿದ್ದರು. ಎಲೆಕ್ಟ್ರಾನಿಕ್ ಮೀಡಿಯಾ ಮೂಲಕ ವರದಿಗಾರರಾಗಿ ವೃತ್ತಿಜೀವನ ಪ್ರಾರಂಭಿಸಿದ ಇವರು 2010ರಲ್ಲಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ಫೋಟೋ ಜರ್ನಲಿಸ್ಟ್ ಆಗಿ ಸೇರ್ಪಡೆಗೊಂಡದ್ದನ್ನು ಇಲ್ಲಿ ನೆನೆಯಬಹುದು.

ಇದನ್ನೂ ಓದಿ : Danish Siddiqui ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಸ್ಮಶಾನದಲ್ಲಿ ಡ್ಯಾನಿಶ್ ಸಿದ್ಧಿಕಿ ಅಂತ್ಯ ಸಂಸ್ಕಾರ

ಉಕ್ರೇನ್-ರಷ್ಯಾ ಯುದ್ದ ಸಂದರ್ಭವನ್ನು ಅತ್ಯಂತ ವಸ್ತುನಿಷ್ಠವಾಗಿ ವರದಿ ಮಾಡುವಲ್ಲಿ ಉಕ್ರೇನ್ ಪತ್ರಕರ್ತರು ಅತ್ಯಂತ ತಾಳ್ಮೆ, ಧೈರ್ಯವನ್ನು ಮೈಗೂಡಿಸಿಕೊಂಡು ವೃತ್ತಿಪರವಾಗಿ ಕಾರ್ಯನಿರ್ವಹಿಸಿರುವ ಹಿನ್ನಲೆಯಲ್ಲಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಉಕ್ರೇನ್ ಪತ್ರಕರ್ತರಿಗೆ ವಿಶೇಷ ಪ್ರಶಸ್ತಿ ನೀಡಲಾಗುವುದು ಎಂದು ಸಮಿತಿಯ ಮರ್ಜೋರ್ ಮಿಲ್ಲರ್ ತಿಳಿಸಿದ್ದಾರೆ. ಸಾರ್ವಜನಿಕ ಸೇವಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಾಷಿಂಗ್ಟನ್ ಪೋಸ್ಟ್​ಗೆ ಪುಲಿಟ್ಝರ್ ಪ್ರಶಸ್ತಿ ಲಭಿಸಿದೆ.

ಸುದ್ದಿ ವಿಭಾಗದಲ್ಲಿ ನ್ಯೂಯಾರ್ಕ್ ಟೈಮ್ಸ್​ ಮೂರು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಮಧ್ಯೆಪ್ರಾಚ್ಯದಲ್ಲಿ ಅಮೆರಿಕ ನಡೆಸಿದ ದಾಳಿ ಸಂದರ್ಭದಲ್ಲಿ ಸಂಭವಿಸಿದ ಸಾವುನೋವು ಕುರಿತಾದ ವರದಿಗಾಗಿ ನ್ಯೂಯಾರ್ಕ್​ ಟೈಮ್ಸ್​ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗಿದೆ.

ಇದನ್ನೂ ಓದಿ : Danish Siddiqui: ಪತ್ರಕರ್ತ ಡ್ಯಾನಿಶ್ ಸಿದ್ಧಿಕಿಯನ್ನು ಬೇಕೆಂದೇ ಕ್ರೂರವಾಗಿ ಕೊಂದಿದ್ದರು ತಾಲಿಬಾನ್ ಉಗ್ರರು; ಶಾಕಿಂಗ್ ಮಾಹಿತಿ ಬಯಲು

Published On - 11:57 am, Tue, 10 May 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್