AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋಂಕಿತ ಪೇದೆಯ ಡೆಡ್​ಬಾಡಿ ಪಡೆಯೋಕೆ ಯಾರೂ ಬರಲಿಲ್ಲ.. ಇಷ್ಟೇನಾ ನಮ್​ ಬಗ್ಗೆ ಕಾಳಜಿ’

ಬೆಂಗಳೂರು: ಕೊರೊನಾ ಮಹಾಮಾರಿಯ ಚಕ್ರವ್ಯೂಹದಲ್ಲಿ ಸಿಲುಕಿ ನಮ್ಮ ಖಾಕಿ ಪಡೆ ನಲುಗಿ ಹೋಗಿದೆ. ದಿನೇ ದಿನೆ ನಗರ ಪೊಲೀಸರಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾಕಷ್ಟು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅದೇಕೋ ಏನೋ.. ನಮ್​ ಕೊರೊನಾ ವಾರಿಯರ್ಸ್​ ನಮ್​ ವೀರ ಪೊಲೀಸರು ಎಂದು ನಮ್ಮ ಖಾಕಿ ಪಡೆಗೆ ಆಚೆ ಸಲ್ಲುತ್ತಿರುವ ಗೌರವ ಮತ್ತು ಮರ್ಯಾದೆ ಕೋವಿಡ್​ ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ. ಇಂಥದೊಂದು ಪ್ರಸಂಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕಂಡುಬಂದಿದೆ. ಮುದ್ದೆಗೆ ಸಾರಿಲ್ಲ, ಕುಡಿಯೋಕೆ ನೀರಿಲ್ಲ ಹೌದು, […]

‘ಸೋಂಕಿತ  ಪೇದೆಯ ಡೆಡ್​ಬಾಡಿ ಪಡೆಯೋಕೆ ಯಾರೂ ಬರಲಿಲ್ಲ.. ಇಷ್ಟೇನಾ ನಮ್​ ಬಗ್ಗೆ ಕಾಳಜಿ’
KUSHAL V
|

Updated on: Jun 22, 2020 | 5:50 PM

Share

ಬೆಂಗಳೂರು: ಕೊರೊನಾ ಮಹಾಮಾರಿಯ ಚಕ್ರವ್ಯೂಹದಲ್ಲಿ ಸಿಲುಕಿ ನಮ್ಮ ಖಾಕಿ ಪಡೆ ನಲುಗಿ ಹೋಗಿದೆ. ದಿನೇ ದಿನೆ ನಗರ ಪೊಲೀಸರಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾಕಷ್ಟು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ, ಅದೇಕೋ ಏನೋ.. ನಮ್​ ಕೊರೊನಾ ವಾರಿಯರ್ಸ್​ ನಮ್​ ವೀರ ಪೊಲೀಸರು ಎಂದು ನಮ್ಮ ಖಾಕಿ ಪಡೆಗೆ ಆಚೆ ಸಲ್ಲುತ್ತಿರುವ ಗೌರವ ಮತ್ತು ಮರ್ಯಾದೆ ಕೋವಿಡ್​ ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ. ಇಂಥದೊಂದು ಪ್ರಸಂಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕಂಡುಬಂದಿದೆ. ಮುದ್ದೆಗೆ ಸಾರಿಲ್ಲ, ಕುಡಿಯೋಕೆ ನೀರಿಲ್ಲ ಹೌದು, ನಗರದಲ್ಲಿ ಸೋಂಕಿತ ಪೊಲೀಸರನ್ನು ಚಿಕಿತ್ಸೆಗಾಗಿ ಇರಿಸಲಾಗಿರುವ ಆಸ್ಪತ್ರೆಯ ವಾರ್ಡ್​ನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಟ್ಟಿಲ್ಲ ಅಂತಾ ತಮ್ಮ ಅಳಲು ತೋಡಿಕೊಂಡಿದ್ದಾರೆ. ಉಪಾಹಾರ, ಊಟವನ್ನ ಕೂಡ ತಡವಾಗಿ ಕೊಡುತ್ತಾರೆ. ಉಣ್ಣಕ್ಕೆ ಮುದ್ದೆ ಕೊಡ್ತಾರೆ ಆದರೆ ಸಾರು ಕೊಡಲ್ಲ. ಕುಡಿಯುವುದಕ್ಕೂ ನೀರು ಸಿಗುತ್ತಿಲ್ಲ ಎಂದು ನೋವಿನ ಮಾತುಗಳನ್ನು ಆಡಿದ್ದಾರೆ.

‘ಆ ಸೋಂಕಿತ ಕಾನ್ಸ್​ಟೇಬಲ್​ನ ಬಾಡಿ ಪಡೆಯೋಕೆ ಯಾರೂ ಬರಲಿಲ್ಲ’ ಇತ್ತ ಬೇರೊಬ್ಬ ಪೊಲೀಸ್​ ಸಿಬ್ಬಂದಿ ಇತರೆ ಕೋವಿಡ್​ ಆಸ್ಪತ್ರೆಗಳಲ್ಲಿ ತಮ್ಮ ಸೋಂಕಿತ ಸಹೋದ್ಯೋಗಿಗಳಿಗೆ ಎದುರಿಸುತ್ತಿರುವ ಅಮಾನವೀಯ ಪರಿಸ್ಥಿತಿಯನ್ನು ಆಡಿಯೋ ಮೆಸೇಜ್​ ಮುಖಾಂತರ ಹಂಚಿಕೊಂಡಿದ್ದಾರೆ. ಕೊರೊನಾ ವಾರಿಯರ್ಸ್​ಗಳಾಗಿ ಸೇವೆ ಸಲ್ಲಿಸಿದ್ರೂ ಆಸ್ಪತ್ರೆಯಲ್ಲಿ ಬೆಡ್ ಸಿಗ್ತಿಲ್ಲ ಅಂತಾ ನೋವಿನ ಮಾತುಗಳನ್ನ ತೋಡಿಕೊಂಡಿದ್ದಾರೆ. ಜೊತೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಯ ದುರ್ವರ್ತನೆಯ ಬಗ್ಗೆಯೂ ಮಾತಾಡಿದ್ದಾರೆ.

ಇದಲ್ಲದೆ, ಕೋವಿಡ್​ನಿಂದ ಇತ್ತೀಚೆಗೆ ಮೃತಪಟ್ಟ ಹೆಡ್​ ಕಾನ್ಸ್​ಟೇಬಲ್​ರ ಮೃತದೇಹವನ್ನ ಪಡೆಯೋಕೆ ಅವರ ಕುಟುಂಬದವರೂ ಬಂದಿರಲಿಲ್ಲ. ನಾವೇ ಕೊನೆಗೆ ಅವರ ಅಂತ್ಯಕ್ರಿಯೆ ನೆರವೇರಿಸಬೇಕಿತ್ತು. ಕೊರೊನಾ ವಾರಿಯರ್ಸ್ ಗೇ ಇಂಥ ಪರಿಸ್ಥಿತಿ ಆದ್ರೆ ಇನ್ನೂ ಜನಸಾಮಾನ್ಯರ ಸ್ಥಿತಿ ಹೇಗೆ ಅನ್ನೋ ಪ್ರಶ್ನೆ ಕೂಡ ಎತ್ತಿದ್ದಾರೆ.

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?