AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋಂಕಿತ ಪೇದೆಯ ಡೆಡ್​ಬಾಡಿ ಪಡೆಯೋಕೆ ಯಾರೂ ಬರಲಿಲ್ಲ.. ಇಷ್ಟೇನಾ ನಮ್​ ಬಗ್ಗೆ ಕಾಳಜಿ’

ಬೆಂಗಳೂರು: ಕೊರೊನಾ ಮಹಾಮಾರಿಯ ಚಕ್ರವ್ಯೂಹದಲ್ಲಿ ಸಿಲುಕಿ ನಮ್ಮ ಖಾಕಿ ಪಡೆ ನಲುಗಿ ಹೋಗಿದೆ. ದಿನೇ ದಿನೆ ನಗರ ಪೊಲೀಸರಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾಕಷ್ಟು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅದೇಕೋ ಏನೋ.. ನಮ್​ ಕೊರೊನಾ ವಾರಿಯರ್ಸ್​ ನಮ್​ ವೀರ ಪೊಲೀಸರು ಎಂದು ನಮ್ಮ ಖಾಕಿ ಪಡೆಗೆ ಆಚೆ ಸಲ್ಲುತ್ತಿರುವ ಗೌರವ ಮತ್ತು ಮರ್ಯಾದೆ ಕೋವಿಡ್​ ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ. ಇಂಥದೊಂದು ಪ್ರಸಂಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕಂಡುಬಂದಿದೆ. ಮುದ್ದೆಗೆ ಸಾರಿಲ್ಲ, ಕುಡಿಯೋಕೆ ನೀರಿಲ್ಲ ಹೌದು, […]

‘ಸೋಂಕಿತ  ಪೇದೆಯ ಡೆಡ್​ಬಾಡಿ ಪಡೆಯೋಕೆ ಯಾರೂ ಬರಲಿಲ್ಲ.. ಇಷ್ಟೇನಾ ನಮ್​ ಬಗ್ಗೆ ಕಾಳಜಿ’
KUSHAL V
|

Updated on: Jun 22, 2020 | 5:50 PM

Share

ಬೆಂಗಳೂರು: ಕೊರೊನಾ ಮಹಾಮಾರಿಯ ಚಕ್ರವ್ಯೂಹದಲ್ಲಿ ಸಿಲುಕಿ ನಮ್ಮ ಖಾಕಿ ಪಡೆ ನಲುಗಿ ಹೋಗಿದೆ. ದಿನೇ ದಿನೆ ನಗರ ಪೊಲೀಸರಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾಕಷ್ಟು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ, ಅದೇಕೋ ಏನೋ.. ನಮ್​ ಕೊರೊನಾ ವಾರಿಯರ್ಸ್​ ನಮ್​ ವೀರ ಪೊಲೀಸರು ಎಂದು ನಮ್ಮ ಖಾಕಿ ಪಡೆಗೆ ಆಚೆ ಸಲ್ಲುತ್ತಿರುವ ಗೌರವ ಮತ್ತು ಮರ್ಯಾದೆ ಕೋವಿಡ್​ ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ. ಇಂಥದೊಂದು ಪ್ರಸಂಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕಂಡುಬಂದಿದೆ. ಮುದ್ದೆಗೆ ಸಾರಿಲ್ಲ, ಕುಡಿಯೋಕೆ ನೀರಿಲ್ಲ ಹೌದು, ನಗರದಲ್ಲಿ ಸೋಂಕಿತ ಪೊಲೀಸರನ್ನು ಚಿಕಿತ್ಸೆಗಾಗಿ ಇರಿಸಲಾಗಿರುವ ಆಸ್ಪತ್ರೆಯ ವಾರ್ಡ್​ನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಟ್ಟಿಲ್ಲ ಅಂತಾ ತಮ್ಮ ಅಳಲು ತೋಡಿಕೊಂಡಿದ್ದಾರೆ. ಉಪಾಹಾರ, ಊಟವನ್ನ ಕೂಡ ತಡವಾಗಿ ಕೊಡುತ್ತಾರೆ. ಉಣ್ಣಕ್ಕೆ ಮುದ್ದೆ ಕೊಡ್ತಾರೆ ಆದರೆ ಸಾರು ಕೊಡಲ್ಲ. ಕುಡಿಯುವುದಕ್ಕೂ ನೀರು ಸಿಗುತ್ತಿಲ್ಲ ಎಂದು ನೋವಿನ ಮಾತುಗಳನ್ನು ಆಡಿದ್ದಾರೆ.

‘ಆ ಸೋಂಕಿತ ಕಾನ್ಸ್​ಟೇಬಲ್​ನ ಬಾಡಿ ಪಡೆಯೋಕೆ ಯಾರೂ ಬರಲಿಲ್ಲ’ ಇತ್ತ ಬೇರೊಬ್ಬ ಪೊಲೀಸ್​ ಸಿಬ್ಬಂದಿ ಇತರೆ ಕೋವಿಡ್​ ಆಸ್ಪತ್ರೆಗಳಲ್ಲಿ ತಮ್ಮ ಸೋಂಕಿತ ಸಹೋದ್ಯೋಗಿಗಳಿಗೆ ಎದುರಿಸುತ್ತಿರುವ ಅಮಾನವೀಯ ಪರಿಸ್ಥಿತಿಯನ್ನು ಆಡಿಯೋ ಮೆಸೇಜ್​ ಮುಖಾಂತರ ಹಂಚಿಕೊಂಡಿದ್ದಾರೆ. ಕೊರೊನಾ ವಾರಿಯರ್ಸ್​ಗಳಾಗಿ ಸೇವೆ ಸಲ್ಲಿಸಿದ್ರೂ ಆಸ್ಪತ್ರೆಯಲ್ಲಿ ಬೆಡ್ ಸಿಗ್ತಿಲ್ಲ ಅಂತಾ ನೋವಿನ ಮಾತುಗಳನ್ನ ತೋಡಿಕೊಂಡಿದ್ದಾರೆ. ಜೊತೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಯ ದುರ್ವರ್ತನೆಯ ಬಗ್ಗೆಯೂ ಮಾತಾಡಿದ್ದಾರೆ.

ಇದಲ್ಲದೆ, ಕೋವಿಡ್​ನಿಂದ ಇತ್ತೀಚೆಗೆ ಮೃತಪಟ್ಟ ಹೆಡ್​ ಕಾನ್ಸ್​ಟೇಬಲ್​ರ ಮೃತದೇಹವನ್ನ ಪಡೆಯೋಕೆ ಅವರ ಕುಟುಂಬದವರೂ ಬಂದಿರಲಿಲ್ಲ. ನಾವೇ ಕೊನೆಗೆ ಅವರ ಅಂತ್ಯಕ್ರಿಯೆ ನೆರವೇರಿಸಬೇಕಿತ್ತು. ಕೊರೊನಾ ವಾರಿಯರ್ಸ್ ಗೇ ಇಂಥ ಪರಿಸ್ಥಿತಿ ಆದ್ರೆ ಇನ್ನೂ ಜನಸಾಮಾನ್ಯರ ಸ್ಥಿತಿ ಹೇಗೆ ಅನ್ನೋ ಪ್ರಶ್ನೆ ಕೂಡ ಎತ್ತಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್