ರೋಹಿತ್ ಮತ್ತು ಇಶಾಂತ್ ಶರ್ಮ ಆಸ್ಟ್ರೇಲಿಯ ಪ್ರವಾಸಕ್ಕೆ ಲಭ್ಯರಿಲ್ಲ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಸ್ಟ್ರೇಲಿಯ ಪ್ರವಾಸಕ್ಕೆ ಟೆಸ್ಟ್, ಒಡಿಐ ಮತ್ತು ಟಿ20ಐ ಕ್ರಿಕೆಟ್​–ಮೂರು ಫಾರ್ಮಾಟ್​ಗಳಲ್ಲಾಡುವ ತಂಡದ ಸದಸ್ಯರ ಹೆಸರುಗಳನ್ನು ಇಂದು ಪ್ರಕಟಿಸಿತು. ಮೂರು ಟೀಮುಗಳಿಗೂ ವಿರಾಟ್ ಕೊಹ್ಲಿಯನ್ನು ನಾಯಕನಾಗಿ ಘೋಷಿಸಲಾಗಿದೆ. ಟೆಸ್ಟ್ ತಂಡದಲ್ಲಿ ಕರ್ನಾಟಕದ ಇಬ್ಬರನ್ನು–ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್​ವಾಲ್ ಆಯ್ಕೆ ಮಾಡಲಾಗಿದೆ. ಗಾಯಗೊಂಡಿರುವ ಆರಂಭ ಆಟಗಾರ ರೋಹಿತ್ ಶರ್ಮ ಮತ್ತು ಇಶಾಂತ್ ಶರ್ಮ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ, ಆವರ ಚೇತರಿಕೆಯ ಮೇಲೆ ನಿಗಾ ಇಡಲಾಗುವುದೆಂದು ಬಿಸಿಸಿಐ ತಿಳಿಸಿದೆ. ಟೆಸ್ಟ್​ಗಳಲ್ಲಾಡುವ ಟೀಮು ಇಂತಿದೆ: ವಿರಾಟ್ […]

ರೋಹಿತ್ ಮತ್ತು ಇಶಾಂತ್ ಶರ್ಮ ಆಸ್ಟ್ರೇಲಿಯ ಪ್ರವಾಸಕ್ಕೆ ಲಭ್ಯರಿಲ್ಲ
ಅರುಣ್​ ಕುಮಾರ್​ ಬೆಳ್ಳಿ

Updated on: Oct 26, 2020 | 10:21 PM

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಸ್ಟ್ರೇಲಿಯ ಪ್ರವಾಸಕ್ಕೆ ಟೆಸ್ಟ್, ಒಡಿಐ ಮತ್ತು ಟಿ20ಐ ಕ್ರಿಕೆಟ್​ಮೂರು ಫಾರ್ಮಾಟ್​ಗಳಲ್ಲಾಡುವ ತಂಡದ ಸದಸ್ಯರ ಹೆಸರುಗಳನ್ನು ಇಂದು ಪ್ರಕಟಿಸಿತು. ಮೂರು ಟೀಮುಗಳಿಗೂ ವಿರಾಟ್ ಕೊಹ್ಲಿಯನ್ನು ನಾಯಕನಾಗಿ ಘೋಷಿಸಲಾಗಿದೆ. ಟೆಸ್ಟ್ ತಂಡದಲ್ಲಿ ಕರ್ನಾಟಕದ ಇಬ್ಬರನ್ನುಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್​ವಾಲ್ ಆಯ್ಕೆ ಮಾಡಲಾಗಿದೆ. ಗಾಯಗೊಂಡಿರುವ ಆರಂಭ ಆಟಗಾರ ರೋಹಿತ್ ಶರ್ಮ ಮತ್ತು ಇಶಾಂತ್ ಶರ್ಮ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ, ಆವರ ಚೇತರಿಕೆಯ ಮೇಲೆ ನಿಗಾ ಇಡಲಾಗುವುದೆಂದು ಬಿಸಿಸಿಐ ತಿಳಿಸಿದೆ.

ಟೆಸ್ಟ್​ಗಳಲ್ಲಾಡುವ ಟೀಮು ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಮಾಯಾಂಕ್ ಅಗರ್​ವಾಲ್, ಪೃಥ್ವಿ ಶಾ, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ, ಅಜಿಂಕ್ಯಾ ರಹಾನೆ (ಉಪ-ನಾಯಕ), ಹನುಮ ವಿಹಾರಿ, ಶುಬ್​ಮನ್ ಗಿಲ್, ವೃದ್ಧಿಮನ್ ಸಹಾ (ವಿಕೆಟ್​ಕೀಪರ್), ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಮತ್ತು ಮೊಹಮ್ಮದ್ ಸಿರಾಜ್.

ಒಂದು ದಿನದ ಅಂತರರಾಷ್ಟ್ರೀಯ ಪಂದ್ಯಗಳಿಗೆ ಟೀಮು ಇಂತಿದೆ: ವಿರಾಟ್ ಕೊಹ್ಲಿ, ಶಿಖರ್ ಧವನ್, ಶುಬ್​ಮನ್ ಗಿಲ್, ಕೆಎಲ್ ರಾಹುಲ್ (ಉಪ-ನಾಯಕ ಮತ್ತು ವಿಕೆಟ್​ಕೀಪರ್), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಾಯಾಂಕ್ ಅಗರ್​ವಾಲ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ ಮತ್ತು ಶಾರ್ದುಲ್ ಠಾಕುರ್.

ಟಿ20ಐ ಪಂದ್ಯಗಳಿಗೆ ಭಾರತದ ತಂಡ: ವಿರಾಟ್ ಕೊಹ್ಲಿ, ಶಿಖರ್ ಧವನ್, ಮಾಯಾಂಕ್ ಅಗರರವಾಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹರ್ ಮತ್ತು ವರುಣ್ ಚಕ್ರವರ್ತಿ

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us