AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈದಿಗಳನ್ನೂ ಕಾಡಿದೆ ಕ್ರೂರಿ ಕೊರೊನಾ.. ಪರಪ್ಪನ ಅಗ್ರಹಾರಕ್ಕೂ ಎಂಟ್ರಿ ಕೊಟ್ಟಿದೆ

ಬೆಂಗಳೂರು: ಎದುರಿಗೆ ಸಿಕ್ಕವರನ್ನೆಲ್ಲಾ ಬಗ್ಗು ಬಡಿಯುತ್ತಿರುವ ಕ್ರೂರಿ ಕೊರೊನಾ ಈಗ ಪರಪ್ಪನ ಅಗ್ರಹಾರ ಜೈಲಿನೊಳಗೂ ನುಗ್ಗಿದೆ. ಕಾರಾಗೃಹದಲ್ಲಿ ಇದೀಗ 26 ಜನರಿಗೆ ಸೋಂಕು ದೃಢವಾಗಿದೆ. ಅದರಲ್ಲಿ 20 ವಿಚಾರಣಾಧೀನ ಕೈದಿಗಳಿದ್ದರೆ ಉಳಿದ ಆರು ಜನ ಕಾರಾಗೃಹದ ಸಿಬ್ಬಂದಿ. ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೈದಿಗಳಿದ್ದಾರೆ. ಜೊತೆಗೆ ಇತ್ತೀಚೆಗೆ ಕಾರಾಗೃಹಕ್ಕೆ ಹೊಸದಾಗಿ 450 ಕೈದಿಗಳನ್ನು ದಾಖಲಿಸಲಾಗಿತ್ತು. ಇದೀಗ ಆ 450 ಜನರ ಪೈಕಿ ಕೆಲವರು ಜೈಲಿಗೆ ಬಂದು 21 ದಿನ ಕಳೆದಿದ್ದರಿಂದ 3 […]

ಕೈದಿಗಳನ್ನೂ ಕಾಡಿದೆ ಕ್ರೂರಿ ಕೊರೊನಾ.. ಪರಪ್ಪನ ಅಗ್ರಹಾರಕ್ಕೂ ಎಂಟ್ರಿ ಕೊಟ್ಟಿದೆ
ಪರಪ್ಪನ ಅಗ್ರಹಾರ ಜೈಲು
KUSHAL V
| Edited By: |

Updated on:Jul 02, 2020 | 1:41 PM

Share

ಬೆಂಗಳೂರು: ಎದುರಿಗೆ ಸಿಕ್ಕವರನ್ನೆಲ್ಲಾ ಬಗ್ಗು ಬಡಿಯುತ್ತಿರುವ ಕ್ರೂರಿ ಕೊರೊನಾ ಈಗ ಪರಪ್ಪನ ಅಗ್ರಹಾರ ಜೈಲಿನೊಳಗೂ ನುಗ್ಗಿದೆ. ಕಾರಾಗೃಹದಲ್ಲಿ ಇದೀಗ 26 ಜನರಿಗೆ ಸೋಂಕು ದೃಢವಾಗಿದೆ. ಅದರಲ್ಲಿ 20 ವಿಚಾರಣಾಧೀನ ಕೈದಿಗಳಿದ್ದರೆ ಉಳಿದ ಆರು ಜನ ಕಾರಾಗೃಹದ ಸಿಬ್ಬಂದಿ.

ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೈದಿಗಳಿದ್ದಾರೆ. ಜೊತೆಗೆ ಇತ್ತೀಚೆಗೆ ಕಾರಾಗೃಹಕ್ಕೆ ಹೊಸದಾಗಿ 450 ಕೈದಿಗಳನ್ನು ದಾಖಲಿಸಲಾಗಿತ್ತು. ಇದೀಗ ಆ 450 ಜನರ ಪೈಕಿ ಕೆಲವರು ಜೈಲಿಗೆ ಬಂದು 21 ದಿನ ಕಳೆದಿದ್ದರಿಂದ 3 ದಿನಗಳ ಹಿಂದೆ ಸಿಬ್ಬಂದಿ ಸೇರಿ 150 ಜನರ ಗಂಟಲು ದ್ರವ ಸಂಗ್ರಹಿಸಿ ಟೆಸ್ಟ್​ಗೆ ಕಳಿಸಲಾಗಿತ್ತು. ನಿನ್ನೆ ಬಂದ ವರದಿಯಲ್ಲಿ 20 ಕೈದಿಗಳು ಮತ್ತು 6 ಜನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಬಂದಿದೆ.

ಕಾರಾಗೃಹದಲ್ಲಿ ಶುರುವಾಯ್ತು ಆತಂಕ..! ಇದೀಗ ಕೊರೊನಾ ದೃಢವಾಗಿರುವ ಕೈದಿಗಳನ್ನ ಥಣಿಸಂದ್ರ ಬಳಿ ಇರುವ ಹಜ್ ಭವನದಲ್ಲಿ ಇರಿಸಲಾಗಿದೆ. ಜೊತೆಗೆ ಕಾರಾಗೃಹದ ಇತರೆ ಕೈದಿ ಹಾಗೂ ಸಿಬ್ಬಂದಿ ಈ ಸೋಂಕಿತರ ಸಂಪರ್ಕಕ್ಕೆ ಬಂದಿರಬಹುದು ಎನ್ನಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರ ಕಾರಾಗೃಹದ ಸಿಬ್ಬಂದಿ ಮತ್ತು ಕೈದಿಗಳಲ್ಲಿ ಮನಸ್ಸಿನಲ್ಲಿ ಆತಂಕ ಮನೆಮಾಡಿದೆ.

Published On - 1:40 pm, Thu, 2 July 20

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ