AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟಿಂಗ್​ನಲ್ಲಿ.. ಸಂಪುಟ ವಿಸ್ತರಣೆಗಿಂತಲೂ ನಾಯಕತ್ವ ಬದಲಾವಣೆಗೆ ಹೆಚ್ಚು ಒತ್ತು ಕೊಟ್ರಾ ಅಮಿತ್ ಶಾ?

ಬಿಜೆಪಿ ರಾಷ್ಟ್ರ ನಾಯಕರಾದ ಅಮಿತ್ ಶಾ, ನಡ್ಡಾ ಹಾಗೂ ಅರುಣ್ ಕುಮಾರ್ ಜೊತೆ ಇಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಚರ್ಚೆ ನಡೆಸಿದ ವೇಳೆ ಸಂಪುಟ ವಿಸ್ತರಣೆಗಿಂತಲೂ ನಾಯಕತ್ವ ಬದಲಾವಣೆಯ ಬಗ್ಗೆ ಅಮಿತ್​ ಶಾ ಹೆಚ್ಚು ಒತ್ತು ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೀಟಿಂಗ್​ನಲ್ಲಿ.. ಸಂಪುಟ ವಿಸ್ತರಣೆಗಿಂತಲೂ ನಾಯಕತ್ವ ಬದಲಾವಣೆಗೆ ಹೆಚ್ಚು ಒತ್ತು ಕೊಟ್ರಾ ಅಮಿತ್ ಶಾ?
ಬಿ.ಎಸ್​ ಯಡಿಯೂರಪ್ಪ (ಎಡ); ಅಮಿತ್ ಶಾ(ಬಲ)
KUSHAL V
| Edited By: |

Updated on:Jan 11, 2021 | 11:14 AM

Share

ದೆಹಲಿ: ಬಿಜೆಪಿ ರಾಷ್ಟ್ರ ನಾಯಕರಾದ ಅಮಿತ್ ಶಾ, ನಡ್ಡಾ ಹಾಗೂ ಅರುಣ್ ಕುಮಾರ್ ಜೊತೆ ಇಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಚರ್ಚೆ ನಡೆಸಿದ ವೇಳೆ ಸಂಪುಟ ವಿಸ್ತರಣೆಗಿಂತಲೂ ನಾಯಕತ್ವ ಬದಲಾವಣೆಯ ಬಗ್ಗೆ ಅಮಿತ್​ ಶಾ ಹೆಚ್ಚು ಒತ್ತು ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಚಿವ ಸಂಪುಟ ವಿಸ್ತರಣೆಗಿಂತಲೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಜೊತೆಗೆ, ಯಡಿಯೂರಪ್ಪ ಒಂದು ವೇಳೆ ಸಿಎಂ ಸ್ಥಾನ ತ್ಯಜಿಸಿದರೆ ಪರ್ಯಾಯ ವ್ಯವಸ್ಥೆಯ ಬಗ್ಗೆ ಚರ್ಚೆ ಸಹ ನಡೆದಿರುವ ಮಾಹಿತಿ ದೊರೆತಿದೆ.

ಮೀಟಿಂಗ್​ ವೇಳೆ, ಸಿಎಂ ಸ್ಥಾನದ ಬದಲಾಗಿ ಯಡಿಯೂರಪ್ಪಗೆ ದಕ್ಷಿಣ ಭಾರತದಲ್ಲೇ ಉನ್ನತ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ಈ ಬಗ್ಗೆ, BSY ತಮ್ಮ ನಿರ್ಧಾರ ತಿಳಿಸುವಂತೆ ವರಿಷ್ಠರು ಸೂಚಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇದಲ್ಲದೆ, ಸಂಸದ ಬಿ.ವೈ.ರಾಘವೇಂದ್ರಗೆ ಕೇಂದ್ರದಲ್ಲಿ ರಾಜ್ಯ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ಮುಂದೆ ಪ್ರಸ್ತಾಪಿಸಿರುವ ಬಗ್ಗೆ ಮಾಹಿತಿ ಸಹ ಸಿಕ್ಕಿದೆ.ರಾಘವೇಂದ್ರ ಮೂಲಕ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಕರ್ನಾಟಕದ ಕೇಂದ್ರ ಸಚಿವ ಕೋಟಾವನ್ನು ಭರ್ತಿ ಮಾಡುವ ಲೆಕ್ಕಾಚಾರ ನಡೆದಿದೆ ಎಂದು ಹೇಳಲಾಗಿದೆ. ಮುಂದಿನ ವಾರ ಕೇಂದ್ರ ಸಚಿವ ಸಂಪುಟ ವಿಸ್ತರಣೆಯ ಸಾಧ್ಯತೆ ಇರುವ ಬಗ್ಗೆಯೂ ಮಾಹಿತಿ ದೊರೆತಿದೆ.

ಮೀಟಿಂಗ್ ಸಂತೋಷ ತಂದಿದೆ.. ಸಚಿವ ಸಂಪುಟದ ಬಗ್ಗೆ ಆದಷ್ಟು ಬೇಗ ಗುಡ್ ನ್ಯೂಸ್ ಸಿಗಲಿದೆ -ಸಿಎಂ BSY

Published On - 5:21 pm, Sun, 10 January 21

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ