AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಪಂಜಾಬ್ ಕಿಂಗ್ಸ್ ಹವಾ ಶುರುವಾಗಿದೆ, ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಸೆಪ್ಟೆಂಬರ್ 20 ರಂದು ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್ 2020 ಯನ್ನು ಆರಂಭಿಸಲಿದೆ. ಕೆಎಲ್ ರಾಹುಲ್ ಮೊದಲ ಬಾರಿಗೆ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕತ್ವ ವಹಿಸಲಿದ್ದಾರೆ. ಐಪಿಎಲ್ 2020 ಗಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಈಗಾಗಲೇ ದುಬೈ ಸೇರಿದ್ದು, ಇಲ್ಲಿ ತಂಡವು ಐಸಿಸಿ ಅಕಾಡೆಮಿಯಲ್ಲಿ ತಮ್ಮ ತರಬೇತಿ ಮತ್ತು ಅಭ್ಯಾಸ ಪಂದ್ಯಗಳನ್ನು ಆಡುತ್ತಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬೌಲಿಂಗ್ ಹೊರೆಯನ್ನು ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಹೊರಲಿದ್ದಾರೆ. […]

IPL 2020: ಪಂಜಾಬ್ ಕಿಂಗ್ಸ್ ಹವಾ ಶುರುವಾಗಿದೆ, ಮೈದಾನದಲ್ಲಿ ಬೆವರಿಳಿಸಿದ್ದು ಹೀಗೆ..
ಸಾಧು ಶ್ರೀನಾಥ್​
|

Updated on:Sep 18, 2020 | 3:57 PM

Share

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಸೆಪ್ಟೆಂಬರ್ 20 ರಂದು ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್ 2020 ಯನ್ನು ಆರಂಭಿಸಲಿದೆ. ಕೆಎಲ್ ರಾಹುಲ್ ಮೊದಲ ಬಾರಿಗೆ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕತ್ವ ವಹಿಸಲಿದ್ದಾರೆ.

ಐಪಿಎಲ್ 2020 ಗಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಈಗಾಗಲೇ ದುಬೈ ಸೇರಿದ್ದು, ಇಲ್ಲಿ ತಂಡವು ಐಸಿಸಿ ಅಕಾಡೆಮಿಯಲ್ಲಿ ತಮ್ಮ ತರಬೇತಿ ಮತ್ತು ಅಭ್ಯಾಸ ಪಂದ್ಯಗಳನ್ನು ಆಡುತ್ತಿದೆ.

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬೌಲಿಂಗ್ ಹೊರೆಯನ್ನು ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಹೊರಲಿದ್ದಾರೆ. ಇದಕ್ಕಾಗಿ ಶಮಿ ಕೂಡ ಅಭ್ಯಾಸದಲ್ಲಿ ಭಾರೀ ಬೆವರು ಸುರಿಸುತ್ತಿದ್ದಾರೆ.

ಕಿಂಗ್ಸ್ ಇಲೆವೆನ್ ಪಂಜಾಬ್ ಈ ಆವೃತ್ತಿಯಲ್ಲಿ ಭಾರತದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿದೆ. ಕುಂಬ್ಳೆ ಈ ಹಿಂದೆ ಮುಂಬೈ ಇಂಡಿಯನ್ಸ್‌ನ ಕೋಚಿಂಗ್ ಸಿಬ್ಬಂದಿಯ ಭಾಗವಾಗಿ ಕಾರ್ಯ ನಿರ್ವಹಿಸಿದ್ದರು.

ಎಲ್ಲಾ ತಂಡಗಳಂತೆ ಪಂಜಾಬ್ ತಂಡವು ಎಲ್ಲಾ ಆಟಗಾರರನ್ನು 2 ತಂಡಗಳಾಗಿ ವಿಂಗಡಿಸುವ ಮೂಲಕ ಪಂದ್ಯವನ್ನು ಅಭ್ಯಾಸ ಮಾಡುತ್ತಿದೆ. ಈ ಆವೃತ್ತಿಯಲ್ಲಿ ಕ್ರಿಸ್ ಗೇಲ್ ಅವರ ಬ್ಯಾಟ್ನಿಂದ ಪಂಜಾಬ್​ ತಂಡ ಹೆಚ್ಚಿನ ನಿರೀಕ್ಷೆ ಹೊಂದಿದೆ.

ತಂಡದ ನಾಯಕತ್ವವನ್ನು ಭಾರತದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ನಿರ್ವಹಿಸುತ್ತಿದ್ದಾರೆ. ಕಳೆದ ಆವೃತ್ತಿಯಲ್ಲಿ ರಾಹುಲ್ ಅದ್ಭುತ ಪ್ರದರ್ಶನ ನೀಡಿದ್ದರು. ಈಗ ಮೊದಲ ಬಾರಿಗೆ ಅವರು ತಂಡದ ಬಗ್ಗೆಗಿನ ನಿರ್ಧಾರಗಳನ್ನು ತೆಗೆದುಕೊಳ್ಳಲ್ಲಿದ್ದಾರೆ.

ಪಂಜಾಬ್​ ಪರವಾಗಿ ಕರುಣ್ ನಾಯರ್ ಅವರ ಆಟದ ಮೇಲೆ ಎಲ್ಲರ ಗಮನ ಬಿದಿದ್ದು, ಈ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನವನ್ನು ತೋರಿಸುವ ಮೂಲಕ ನಾಯರ್ ಟೀಮ್ ಇಂಡಿಯಾಕ್ಕೆ ಮರಳುವ ಪ್ರಯತ್ನ ಮಾಡುತ್ತಿದ್ದಾರೆ.

ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಮಾಯಾಂಕ್ ಅಗರ್ವಾಲ್ ಅವರು ಪಂಜಾಬ್‌ನ ಪ್ರಮುಖ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಪಂದ್ಯದ ಅಂತಿಮ ಹಂತದಲ್ಲಿ ಅವರ ಪಾತ್ರ ಮುಖ್ಯವಾಗಿರುತ್ತದೆ.

(Photo courtesy: Kings XI Punjab Twitter)

Published On - 3:52 pm, Fri, 18 September 20

ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!