AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Tendulkar: 20 ಲಕ್ಷ ರೂಪಾಯಿಗೆ ಮುಂಬೈ ತಂಡ ಸೇರಿದ ಅರ್ಜುನ್​ ತೆಂಡೂಲ್ಕರ್​!

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಅಂತೆಯೇ, ಅರ್ಜುನ್​ ಹೆಸರು ಬರುತ್ತಿದ್ದಂತೆ ಮುಂಬೈ ಇಂಡಿಯನ್ಸ್​ ಅವರು ಬಿಡ್​ ಮಾಡಿದರು.

Arjun Tendulkar: 20 ಲಕ್ಷ ರೂಪಾಯಿಗೆ ಮುಂಬೈ ತಂಡ ಸೇರಿದ ಅರ್ಜುನ್​ ತೆಂಡೂಲ್ಕರ್​!
ಅರ್ಜುನ್ ತೆಂಡೂಲ್ಕರ್
ರಾಜೇಶ್ ದುಗ್ಗುಮನೆ
|

Updated on:Feb 18, 2021 | 8:33 PM

Share

ಸಚಿನ್​ ತೆಂಡೂಲ್ಕರ್​ ಅವರ ಮಗ ಅರ್ಜುನ್​ ತೆಂಡೂಲ್ಕರ್​ ಈ ಬಾರಿಯ ಐಪಿಎಲ್​ 2021 ಹರಾಜು ಪ್ರಕ್ರಿಯೆಗೆ ನೋಂದಣಿ ಮಾಡಿಕೊಂಡಿದ್ದರು. ಹರಾಜಿನಲ್ಲಿ ಅರ್ಜುನ್​ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಇತ್ತು. ಎಲ್ಲರೂ ಊಹಿಸಿದಂತೆ ಅರ್ಜುನ್​ ಅವರನ್ನು ಮುಂಬೈ ತಂಡ 20 ಲಕ್ಷ ರೂಪಾಯಿಗೆ ಖರೀದಿ ಮಾಡಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಅರ್ಜುನ್​ ಕಾಲಿಟ್ಟಿದ್ದರು. ಬೌಲರ್​ ಆಗಿರುವ ಇವರು, ಮುಂಬೈ ಪರ ಆಡಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ 34 ರನ್​ ನೀಡಿ ಒಂದು ವಿಕೆಟ್​ ಪಡೆದರೆ, ಪುದುಚೇರಿ ವಿರುದ್ಧ 33 ರನ್​ ನೀಡಿ ಒಂದು ವಿಕೆಟ್​ ಪಡೆದಿದ್ದರು.

ಫೆಬ್ರವರಿ 14 ರಂದು ಮುಂಬೈನಲ್ಲಿ ನಡೆದ 73 ನೇ ಪೊಲೀಸ್ ಆಹ್ವಾನ ಶೀಲ್ಡ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅರ್ಜುನ್ ತೆಂಡೂಲ್ಕರ್ ಅದ್ಭುತ ಆಟ ಪ್ರದರ್ಶಿಸಿದ್ದರು. ಎ ಗುಂಪಿನ ಎರಡನೇ ಸುತ್ತಿನಲ್ಲಿ 31 ಎಸೆತಗಳಲ್ಲಿ ಅಜೇಯ 77 ರನ್ ಗಳಿಸಿದ ಅವರು ಬೌಲಿಂಗ್​ನಲ್ಲಿ 41 ರನ್‌ಗಳಿಗೆ ಮೂರು ವಿಕೆಟ್ ಪಡೆದಿದ್ದರು.

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿತ್ತು. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ. ಹೀಗಾಗಿ, ಎಂಐ ಈ ಬಗ್ಗೆ ಆಸಕ್ತಿ ತೋರಿಸುವ ಸಾಧ್ಯತೆ ಇದೆ ಎಂಬುದು ಭಾರೀ ಚರ್ಚೆ ಆಗಿತ್ತು.

ಹರಾಜಿನಲ್ಲಿ ಅರ್ಜುನ್ ಅವರ ಮೂಲ ಬೆಲೆಯನ್ನು 20 ಲಕ್ಷ ರೂಪಾಯಿ ಎಂದು ನಿಗದಿ ಮಾಡಲಾಗಿತ್ತು. ಅರ್ಜುನ್​ ಹೆಸರು ಬರುತ್ತಿದ್ದಂತೆ ಮುಂಬೈ ಇಂಡಿಯನ್ಸ್​ ಅವರು ಬಿಡ್​ ಮಾಡಿದರು. ಉಳಿದ ಯಾವ ತಂಡದವರೂ ಬಿಡ್​ ಮಾಡದ ಕಾರಣ ಅರ್ಜುನ್​ ಮುಂಬೈ ಪಾಲಾದರು.

ಇದನ್ನೂ ಓದಿ: ಟ್ವಿಟರ್​ನಲ್ಲಿ ಅರ್ಜುನ್ ತೆಂಡೂಲ್ಕರ್ ಟ್ರೆಂಡಿಂಗ್ 

Published On - 8:23 pm, Thu, 18 February 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ