AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL-2021 ಭಾರತದಲ್ಲಿ ನಡೆಯೋದೇನೋ ಪಕ್ಕಾ: ಆದರೂ, ಪ್ರೇಕ್ಷಕರಿಗೊಂದು ಬ್ಯಾಡ್​ನ್ಯೂಸ್​!

ಮುಂದಿನ ದಿನಗಳಲ್ಲಿ ಕೊರೊನಾ ಸಂಖ್ಯೆ ಮತ್ತೂ ಕಡಿಮೆ ಆಗುವ ನಿರೀಕ್ಷೆ ಇದೆ. ಈ ವೇಳೆ ಭಾರತದಲ್ಲೇ ಐಪಿಎಲ್​ ನಡೆಸೋದು ಸೇಫ್​ ಅನ್ನೋದು ಬಿಸಿಸಿಐ ಅಭಿಪ್ರಾಯ. 

IPL-2021 ಭಾರತದಲ್ಲಿ ನಡೆಯೋದೇನೋ ಪಕ್ಕಾ: ಆದರೂ, ಪ್ರೇಕ್ಷಕರಿಗೊಂದು ಬ್ಯಾಡ್​ನ್ಯೂಸ್​!
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 31, 2021 | 5:10 PM

Share

ಕೊರೊನಾ ಸೋಂಕಿನ ಕಾರಣದಿಂದ 2020ರ ಐಪಿಎಲ್​ ಯುಎಇನಲ್ಲಿ ನಡೆದಿತ್ತು. ಆದರೆ, ಈ ಬಾರಿಯ ಐಪಿಎಲ್​ ಭಾರತದಲ್ಲೇ ನಡೆಯಲಿದೆಯಂತೆ! ಆದಾಗ್ಯೂ ಪ್ರೇಕ್ಷಕರಿಗೆ ಒಂದು ಕಹಿ ಸುದ್ದಿ ಇದೆ. ಅದೇನು ಎನ್ನುವುದಕ್ಕೆ ಇಲ್ಲಿದೆ ಮಾಹಿತಿ.

ಐಪಿಎಲ್​ ಭಾರತದಲ್ಲೇ ನಡೆಯುವ ಬಗ್ಗೆ ಬಿಸಿಸಿಐ ಖಜಾಂಚಿ ಅರುಣ್​ ಸಿಂಗ್​ ಮಾತನಾಡಿದ್ದಾರೆ. ಈ ಬಾರಿಯ ಐಪಿಎಲ್​ನ್ನು ನಾವು ಭಾರತದಲ್ಲೇ ನಡೆಸುತ್ತಿದ್ದೇವೆ. ನಾವು ಬೇರೆ ಯಾವುದೇ ಆಯ್ಕೆಯನ್ನು ಇಟ್ಟುಕೊಂಡಿಲ್ಲ. ಕೊರೊನಾ ವಿಚಾರಕ್ಕೆ ಬಂದರೆ ದುಬೈಗಿಂತ ಭಾರತವೇ ಹೆಚ್ಚು ಸುರಕ್ಷಿತವಾಗಿದೆ. ಪರಿಸ್ಥಿತಿ ಹಿಗೆಯೇ ಮುಂದುವರಿಯುತ್ತದೆ ಎನ್ನುವ ನಂಬಿಕೆ ಇದೆ ಎಂದಿದ್ದಾರೆ ಅವರು.

ಕೊರೊನಾ ವೈರಸ್​ ಪ್ರಕರಣದಲ್ಲಿ ದೇಶದಲ್ಲಿ ಭಾರೀ ಇಳಿಕೆ ಕಂಡಿದೆ. ಈ ಮೊದಲು 80 ಸಾವಿರ ಪ್ರಕರಣಗಳು ನಿತ್ಯ ದೃಢವಾಗುತ್ತಿದ್ದವು. ಆದರೆ, ಈಗ ಈ ಸಂಖ್ಯೆ 14 ಸಾವಿರಕ್ಕೆ ಇಳಿಕೆ ಆಗಿದೆ. ಮುಂದಿನ ದಿನಗಳಲ್ಲಿ ಕೊರೊನಾ ಸಂಖ್ಯೆ ಮತ್ತೂ ಕಡಿಮೆ ಆಗುವ ನಿರೀಕ್ಷೆ ಇದೆ. ಈ ವೇಳೆ ಭಾರತದಲ್ಲೇ ಐಪಿಎಲ್​ ನಡೆಸೋದು ಸೇಫ್​ ಅನ್ನೋದು ಬಿಸಿಸಿಐ ಅಭಿಪ್ರಾಯ.

ಐಪಿಎಲ್​ ಭಾರತದಲ್ಲೇ ನಡೆದರೂ ಮೈದಾನದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡುವ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಮುಂಬರುವ ಇಂಗ್ಲೆಂಡ್​ ಟಿ-20 ಪಂದ್ಯಕ್ಕೆ ಶೇ.50 ಪ್ರೇಕ್ಷಕರಿಗೆ ಅವಕಾಶ ನೀಡೋಕೆ ಬಿಸಿಸಿಐ ಚಿಂತನೆ ನಡೆಸಿದೆ. ಆದರೆ, ಈ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಬಿಸಿಸಿಐ ಹೇಳಿದೆ. ಐಪಿಎಲ್​ನಲ್ಲೂ ಪ್ರೇಕ್ಷಕರಿಗೆ ಬರೋಕೆ ಅವಕಾಶ ನೀಡಿದರೂ, ಈ ನಿಟ್ಟಿನಲ್ಲಿ ಸರ್ಕಾರವೇ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ. ಒಂದೊಮ್ಮೆ ಪ್ರೇಕ್ಷಕರಿಗೆ ಅವಕಾಶ ನೀಡೋಕೆ ಸರ್ಕಾರ ನಿರಾಕರಿಸಿದರೆ ಕ್ರಿಕೆಟ್​ ಪ್ರೇಮಿಗಳಿಗೆ ಭಾರೀ ನಿರಾಸೆ ಉಂಟಾಗಲಿದೆ.

IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ