AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL-2021 ಭಾರತದಲ್ಲಿ ನಡೆಯೋದೇನೋ ಪಕ್ಕಾ: ಆದರೂ, ಪ್ರೇಕ್ಷಕರಿಗೊಂದು ಬ್ಯಾಡ್​ನ್ಯೂಸ್​!

ಮುಂದಿನ ದಿನಗಳಲ್ಲಿ ಕೊರೊನಾ ಸಂಖ್ಯೆ ಮತ್ತೂ ಕಡಿಮೆ ಆಗುವ ನಿರೀಕ್ಷೆ ಇದೆ. ಈ ವೇಳೆ ಭಾರತದಲ್ಲೇ ಐಪಿಎಲ್​ ನಡೆಸೋದು ಸೇಫ್​ ಅನ್ನೋದು ಬಿಸಿಸಿಐ ಅಭಿಪ್ರಾಯ. 

IPL-2021 ಭಾರತದಲ್ಲಿ ನಡೆಯೋದೇನೋ ಪಕ್ಕಾ: ಆದರೂ, ಪ್ರೇಕ್ಷಕರಿಗೊಂದು ಬ್ಯಾಡ್​ನ್ಯೂಸ್​!
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 31, 2021 | 5:10 PM

Share

ಕೊರೊನಾ ಸೋಂಕಿನ ಕಾರಣದಿಂದ 2020ರ ಐಪಿಎಲ್​ ಯುಎಇನಲ್ಲಿ ನಡೆದಿತ್ತು. ಆದರೆ, ಈ ಬಾರಿಯ ಐಪಿಎಲ್​ ಭಾರತದಲ್ಲೇ ನಡೆಯಲಿದೆಯಂತೆ! ಆದಾಗ್ಯೂ ಪ್ರೇಕ್ಷಕರಿಗೆ ಒಂದು ಕಹಿ ಸುದ್ದಿ ಇದೆ. ಅದೇನು ಎನ್ನುವುದಕ್ಕೆ ಇಲ್ಲಿದೆ ಮಾಹಿತಿ.

ಐಪಿಎಲ್​ ಭಾರತದಲ್ಲೇ ನಡೆಯುವ ಬಗ್ಗೆ ಬಿಸಿಸಿಐ ಖಜಾಂಚಿ ಅರುಣ್​ ಸಿಂಗ್​ ಮಾತನಾಡಿದ್ದಾರೆ. ಈ ಬಾರಿಯ ಐಪಿಎಲ್​ನ್ನು ನಾವು ಭಾರತದಲ್ಲೇ ನಡೆಸುತ್ತಿದ್ದೇವೆ. ನಾವು ಬೇರೆ ಯಾವುದೇ ಆಯ್ಕೆಯನ್ನು ಇಟ್ಟುಕೊಂಡಿಲ್ಲ. ಕೊರೊನಾ ವಿಚಾರಕ್ಕೆ ಬಂದರೆ ದುಬೈಗಿಂತ ಭಾರತವೇ ಹೆಚ್ಚು ಸುರಕ್ಷಿತವಾಗಿದೆ. ಪರಿಸ್ಥಿತಿ ಹಿಗೆಯೇ ಮುಂದುವರಿಯುತ್ತದೆ ಎನ್ನುವ ನಂಬಿಕೆ ಇದೆ ಎಂದಿದ್ದಾರೆ ಅವರು.

ಕೊರೊನಾ ವೈರಸ್​ ಪ್ರಕರಣದಲ್ಲಿ ದೇಶದಲ್ಲಿ ಭಾರೀ ಇಳಿಕೆ ಕಂಡಿದೆ. ಈ ಮೊದಲು 80 ಸಾವಿರ ಪ್ರಕರಣಗಳು ನಿತ್ಯ ದೃಢವಾಗುತ್ತಿದ್ದವು. ಆದರೆ, ಈಗ ಈ ಸಂಖ್ಯೆ 14 ಸಾವಿರಕ್ಕೆ ಇಳಿಕೆ ಆಗಿದೆ. ಮುಂದಿನ ದಿನಗಳಲ್ಲಿ ಕೊರೊನಾ ಸಂಖ್ಯೆ ಮತ್ತೂ ಕಡಿಮೆ ಆಗುವ ನಿರೀಕ್ಷೆ ಇದೆ. ಈ ವೇಳೆ ಭಾರತದಲ್ಲೇ ಐಪಿಎಲ್​ ನಡೆಸೋದು ಸೇಫ್​ ಅನ್ನೋದು ಬಿಸಿಸಿಐ ಅಭಿಪ್ರಾಯ.

ಐಪಿಎಲ್​ ಭಾರತದಲ್ಲೇ ನಡೆದರೂ ಮೈದಾನದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡುವ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಮುಂಬರುವ ಇಂಗ್ಲೆಂಡ್​ ಟಿ-20 ಪಂದ್ಯಕ್ಕೆ ಶೇ.50 ಪ್ರೇಕ್ಷಕರಿಗೆ ಅವಕಾಶ ನೀಡೋಕೆ ಬಿಸಿಸಿಐ ಚಿಂತನೆ ನಡೆಸಿದೆ. ಆದರೆ, ಈ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಬಿಸಿಸಿಐ ಹೇಳಿದೆ. ಐಪಿಎಲ್​ನಲ್ಲೂ ಪ್ರೇಕ್ಷಕರಿಗೆ ಬರೋಕೆ ಅವಕಾಶ ನೀಡಿದರೂ, ಈ ನಿಟ್ಟಿನಲ್ಲಿ ಸರ್ಕಾರವೇ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ. ಒಂದೊಮ್ಮೆ ಪ್ರೇಕ್ಷಕರಿಗೆ ಅವಕಾಶ ನೀಡೋಕೆ ಸರ್ಕಾರ ನಿರಾಕರಿಸಿದರೆ ಕ್ರಿಕೆಟ್​ ಪ್ರೇಮಿಗಳಿಗೆ ಭಾರೀ ನಿರಾಸೆ ಉಂಟಾಗಲಿದೆ.

IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್