AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021​ ಹರಾಜು ಪ್ರಕ್ರಿಯೆಗೆ 1097 ಆಟಗಾರರು ನೋಂದಣಿ

ನೋಂದಣಿಗೆ ಫೆ.4 ಕೊನೆಯ ದಿನಾಂಕವಾಗಿತ್ತು. ಹೆಸರು ದಾಖಲಿಸಿದವರ ಪೈಕಿ 207 ಅಂತಾರಾಷ್ಟ್ರೀಯ ಆಟಗಾರರು ಹಾಗೂ ಟೀಂ ಇಂಡಿಯಾದಲ್ಲಿ ಗುರುತಿಸಿಕೊಂಡ 21 ಆಟಗಾರರು ಇದ್ದಾರೆ.

IPL 2021​ ಹರಾಜು ಪ್ರಕ್ರಿಯೆಗೆ 1097 ಆಟಗಾರರು ನೋಂದಣಿ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 05, 2021 | 9:54 PM

Share

ಇದೇ ತಿಂಗಳು ನಡೆಯಲಿರುವ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಬರೋಬ್ಬರಿ 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ವೆಸ್ಟ್​ ಇಂಡೀಸ್​ನಿಂದ ಅತಿ ಹೆಚ್ಚು ಅಂದರೆ 56 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾ (42) ಮತ್ತು ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ (38) ಇದೆ.

ನೋಂದಣಿಗೆ ಫೆ.4 ಕೊನೆಯ ದಿನಾಂಕವಾಗಿತ್ತು. ಹೆಸರು ದಾಖಲಿಸಿದವರ ಪೈಕಿ 207 ಅಂತಾರಾಷ್ಟ್ರೀಯ ಆಟಗಾರರು ಹಾಗೂ ಟೀಂ ಇಂಡಿಯಾದಲ್ಲಿ ಗುರುತಿಸಿಕೊಂಡ 21 ಆಟಗಾರರು ಇದ್ದಾರೆ. ಉಳಿದಂತೆ, ರಾಷ್ಟ್ರೀಯ ತಂಡದಲ್ಲಿ ಆಡದೆ ಇರುವ 863 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಭಾರತೀಯರು 743 ಹಾಗೂ ವಿದೇಶದ 68 ಆಟಗಾರರು ಇದ್ದಾರೆ.

ಕಿಂಗ್ಸ್​ ಇಲವೆನ್​ ಪಂಜಾಬ್​ ಬಳಿ ಅತಿ ಹೆಚ್ಚು ಅಂದರೆ, 53.20 ಕೋಟಿ ರೂಪಾಯಿ ಉಳಿದುಕೊಂಡಿದೆ. ನಂತರದಲ್ಲಿ ಆರ್​ಸಿಬಿ (35.90 ಕೋಟಿ ರೂಪಾಯಿ), ರಾಜಸ್ಥಾನ್​ ರಾಯಲ್ಸ್ (34.85 ಕೋಟಿ ರೂಪಾಯಿ), ​ಚೆನ್ನೈ ಸೂಪರ್​ ಕಿಂಗ್ಸ್​ (22.9 ಕೋಟಿ ರೂಪಾಯಿ) ಮುಂಬೈ ಇಂಡಿಯನ್ಸ್​ (15.35 ಕೋಟಿ ರೂಪಾಯಿ), ಡೆಲ್ಲಿ ಕ್ಯಾಪಿಟಲ್ಸ್​ (12.9 ಕೋಟಿ ರೂಪಾಯಿ) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ಹಾಗೂ ಸನ್​ ರೈಸರ್ಸ್​ ಹೈದರಾಬಾದ್ ಬಳಿ ತಲಾ 10.75 ಕೋಟಿ ರೂಪಾಯಿ ಇದೆ.

ಕೊರೊನಾದಿಂದ ಕಳೆದ ಬಾರಿಯ ಐಪಿಎಲ್​ ದುಬೈನಲ್ಲಿ ನಡೆದಿತ್ತು. ಈ ಬಾರಿ ಭಾರತದಲ್ಲಿಯೇ ಐಪಿಎಲ್​ ನಡೆಯುವ ಸಾಧ್ಯತೆ ಇದೆ. ಚೆನ್ನೈನಲ್ಲಿ ಫೆಬ್ರವರಿ 18ರಂದು ಐಪಿಎಲ್​ ಹರಾಜು ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಹರಾಜು ಪ್ರಕ್ರಿಯೆ ಆರಂಭವಾಗಲಿದೆ.

India vs England Test Series | ಐಪಿಎಲ್ ಆಡುವಾಗ ಬಹಳಷ್ಟು ಅಂಶಗಳನ್ನು ವಿದೇಶಿ ಆಟಗಾರರೊಂದಿಗೆ ನಾವು ಶೇರ್ ಮಾಡಲ್ಲ: ರಹಾನೆ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ