AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021​ ಹರಾಜು ಪ್ರಕ್ರಿಯೆಗೆ 1097 ಆಟಗಾರರು ನೋಂದಣಿ

ನೋಂದಣಿಗೆ ಫೆ.4 ಕೊನೆಯ ದಿನಾಂಕವಾಗಿತ್ತು. ಹೆಸರು ದಾಖಲಿಸಿದವರ ಪೈಕಿ 207 ಅಂತಾರಾಷ್ಟ್ರೀಯ ಆಟಗಾರರು ಹಾಗೂ ಟೀಂ ಇಂಡಿಯಾದಲ್ಲಿ ಗುರುತಿಸಿಕೊಂಡ 21 ಆಟಗಾರರು ಇದ್ದಾರೆ.

IPL 2021​ ಹರಾಜು ಪ್ರಕ್ರಿಯೆಗೆ 1097 ಆಟಗಾರರು ನೋಂದಣಿ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 05, 2021 | 9:54 PM

Share

ಇದೇ ತಿಂಗಳು ನಡೆಯಲಿರುವ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಬರೋಬ್ಬರಿ 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ವೆಸ್ಟ್​ ಇಂಡೀಸ್​ನಿಂದ ಅತಿ ಹೆಚ್ಚು ಅಂದರೆ 56 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾ (42) ಮತ್ತು ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ (38) ಇದೆ.

ನೋಂದಣಿಗೆ ಫೆ.4 ಕೊನೆಯ ದಿನಾಂಕವಾಗಿತ್ತು. ಹೆಸರು ದಾಖಲಿಸಿದವರ ಪೈಕಿ 207 ಅಂತಾರಾಷ್ಟ್ರೀಯ ಆಟಗಾರರು ಹಾಗೂ ಟೀಂ ಇಂಡಿಯಾದಲ್ಲಿ ಗುರುತಿಸಿಕೊಂಡ 21 ಆಟಗಾರರು ಇದ್ದಾರೆ. ಉಳಿದಂತೆ, ರಾಷ್ಟ್ರೀಯ ತಂಡದಲ್ಲಿ ಆಡದೆ ಇರುವ 863 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಭಾರತೀಯರು 743 ಹಾಗೂ ವಿದೇಶದ 68 ಆಟಗಾರರು ಇದ್ದಾರೆ.

ಕಿಂಗ್ಸ್​ ಇಲವೆನ್​ ಪಂಜಾಬ್​ ಬಳಿ ಅತಿ ಹೆಚ್ಚು ಅಂದರೆ, 53.20 ಕೋಟಿ ರೂಪಾಯಿ ಉಳಿದುಕೊಂಡಿದೆ. ನಂತರದಲ್ಲಿ ಆರ್​ಸಿಬಿ (35.90 ಕೋಟಿ ರೂಪಾಯಿ), ರಾಜಸ್ಥಾನ್​ ರಾಯಲ್ಸ್ (34.85 ಕೋಟಿ ರೂಪಾಯಿ), ​ಚೆನ್ನೈ ಸೂಪರ್​ ಕಿಂಗ್ಸ್​ (22.9 ಕೋಟಿ ರೂಪಾಯಿ) ಮುಂಬೈ ಇಂಡಿಯನ್ಸ್​ (15.35 ಕೋಟಿ ರೂಪಾಯಿ), ಡೆಲ್ಲಿ ಕ್ಯಾಪಿಟಲ್ಸ್​ (12.9 ಕೋಟಿ ರೂಪಾಯಿ) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ಹಾಗೂ ಸನ್​ ರೈಸರ್ಸ್​ ಹೈದರಾಬಾದ್ ಬಳಿ ತಲಾ 10.75 ಕೋಟಿ ರೂಪಾಯಿ ಇದೆ.

ಕೊರೊನಾದಿಂದ ಕಳೆದ ಬಾರಿಯ ಐಪಿಎಲ್​ ದುಬೈನಲ್ಲಿ ನಡೆದಿತ್ತು. ಈ ಬಾರಿ ಭಾರತದಲ್ಲಿಯೇ ಐಪಿಎಲ್​ ನಡೆಯುವ ಸಾಧ್ಯತೆ ಇದೆ. ಚೆನ್ನೈನಲ್ಲಿ ಫೆಬ್ರವರಿ 18ರಂದು ಐಪಿಎಲ್​ ಹರಾಜು ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಹರಾಜು ಪ್ರಕ್ರಿಯೆ ಆರಂಭವಾಗಲಿದೆ.

India vs England Test Series | ಐಪಿಎಲ್ ಆಡುವಾಗ ಬಹಳಷ್ಟು ಅಂಶಗಳನ್ನು ವಿದೇಶಿ ಆಟಗಾರರೊಂದಿಗೆ ನಾವು ಶೇರ್ ಮಾಡಲ್ಲ: ರಹಾನೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ