AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021​ ಹರಾಜು ಪ್ರಕ್ರಿಯೆಗೆ 1097 ಆಟಗಾರರು ನೋಂದಣಿ

ನೋಂದಣಿಗೆ ಫೆ.4 ಕೊನೆಯ ದಿನಾಂಕವಾಗಿತ್ತು. ಹೆಸರು ದಾಖಲಿಸಿದವರ ಪೈಕಿ 207 ಅಂತಾರಾಷ್ಟ್ರೀಯ ಆಟಗಾರರು ಹಾಗೂ ಟೀಂ ಇಂಡಿಯಾದಲ್ಲಿ ಗುರುತಿಸಿಕೊಂಡ 21 ಆಟಗಾರರು ಇದ್ದಾರೆ.

IPL 2021​ ಹರಾಜು ಪ್ರಕ್ರಿಯೆಗೆ 1097 ಆಟಗಾರರು ನೋಂದಣಿ
ಪ್ರಾತಿನಿಧಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 05, 2021 | 9:54 PM

ಇದೇ ತಿಂಗಳು ನಡೆಯಲಿರುವ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಬರೋಬ್ಬರಿ 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ವೆಸ್ಟ್​ ಇಂಡೀಸ್​ನಿಂದ ಅತಿ ಹೆಚ್ಚು ಅಂದರೆ 56 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾ (42) ಮತ್ತು ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ (38) ಇದೆ.

ನೋಂದಣಿಗೆ ಫೆ.4 ಕೊನೆಯ ದಿನಾಂಕವಾಗಿತ್ತು. ಹೆಸರು ದಾಖಲಿಸಿದವರ ಪೈಕಿ 207 ಅಂತಾರಾಷ್ಟ್ರೀಯ ಆಟಗಾರರು ಹಾಗೂ ಟೀಂ ಇಂಡಿಯಾದಲ್ಲಿ ಗುರುತಿಸಿಕೊಂಡ 21 ಆಟಗಾರರು ಇದ್ದಾರೆ. ಉಳಿದಂತೆ, ರಾಷ್ಟ್ರೀಯ ತಂಡದಲ್ಲಿ ಆಡದೆ ಇರುವ 863 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಭಾರತೀಯರು 743 ಹಾಗೂ ವಿದೇಶದ 68 ಆಟಗಾರರು ಇದ್ದಾರೆ.

ಕಿಂಗ್ಸ್​ ಇಲವೆನ್​ ಪಂಜಾಬ್​ ಬಳಿ ಅತಿ ಹೆಚ್ಚು ಅಂದರೆ, 53.20 ಕೋಟಿ ರೂಪಾಯಿ ಉಳಿದುಕೊಂಡಿದೆ. ನಂತರದಲ್ಲಿ ಆರ್​ಸಿಬಿ (35.90 ಕೋಟಿ ರೂಪಾಯಿ), ರಾಜಸ್ಥಾನ್​ ರಾಯಲ್ಸ್ (34.85 ಕೋಟಿ ರೂಪಾಯಿ), ​ಚೆನ್ನೈ ಸೂಪರ್​ ಕಿಂಗ್ಸ್​ (22.9 ಕೋಟಿ ರೂಪಾಯಿ) ಮುಂಬೈ ಇಂಡಿಯನ್ಸ್​ (15.35 ಕೋಟಿ ರೂಪಾಯಿ), ಡೆಲ್ಲಿ ಕ್ಯಾಪಿಟಲ್ಸ್​ (12.9 ಕೋಟಿ ರೂಪಾಯಿ) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ಹಾಗೂ ಸನ್​ ರೈಸರ್ಸ್​ ಹೈದರಾಬಾದ್ ಬಳಿ ತಲಾ 10.75 ಕೋಟಿ ರೂಪಾಯಿ ಇದೆ.

ಕೊರೊನಾದಿಂದ ಕಳೆದ ಬಾರಿಯ ಐಪಿಎಲ್​ ದುಬೈನಲ್ಲಿ ನಡೆದಿತ್ತು. ಈ ಬಾರಿ ಭಾರತದಲ್ಲಿಯೇ ಐಪಿಎಲ್​ ನಡೆಯುವ ಸಾಧ್ಯತೆ ಇದೆ. ಚೆನ್ನೈನಲ್ಲಿ ಫೆಬ್ರವರಿ 18ರಂದು ಐಪಿಎಲ್​ ಹರಾಜು ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಹರಾಜು ಪ್ರಕ್ರಿಯೆ ಆರಂಭವಾಗಲಿದೆ.

India vs England Test Series | ಐಪಿಎಲ್ ಆಡುವಾಗ ಬಹಳಷ್ಟು ಅಂಶಗಳನ್ನು ವಿದೇಶಿ ಆಟಗಾರರೊಂದಿಗೆ ನಾವು ಶೇರ್ ಮಾಡಲ್ಲ: ರಹಾನೆ

ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ