AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸುವ ಜವಾಬ್ದಾರಿ ನನಗೆ ಹಾಗೂ ಹರ್ಷಗುಪ್ತಾಗೆ ಕೊಡಿ’

ಬೆಂಗಳೂರು: ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಯು ನಿಗದಿತ ದರಕ್ಕಿಂತ ಅಧಿಕವಾಗಿ ಬಿಲ್​ ನೀಡುತ್ತಿದೆ ಎಂದು ಟಿವಿ9 ವರದಿ ಮಾಡಿತ್ತು. ಇದನ್ನೂ ಓದಿ: ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo ಇದಕ್ಕೆ ಸ್ಪಂದಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್‌ ಮಾಡಿದ್ದೇನೆ. […]

‘ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸುವ ಜವಾಬ್ದಾರಿ ನನಗೆ ಹಾಗೂ ಹರ್ಷಗುಪ್ತಾಗೆ ಕೊಡಿ’
KUSHAL V
| Edited By: |

Updated on:Jul 31, 2020 | 12:25 AM

Share

ಬೆಂಗಳೂರು: ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಯು ನಿಗದಿತ ದರಕ್ಕಿಂತ ಅಧಿಕವಾಗಿ ಬಿಲ್​ ನೀಡುತ್ತಿದೆ ಎಂದು ಟಿವಿ9 ವರದಿ ಮಾಡಿತ್ತು.

ಇದನ್ನೂ ಓದಿ: ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo

ಇದಕ್ಕೆ ಸ್ಪಂದಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್‌ ಮಾಡಿದ್ದೇನೆ. ಆದರೂ ಇಂದು ಕೊರೊನಾ ರೋಗಿಗೆ 5 ಲಕ್ಷ ಬಿಲ್‌ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಯಿತು ಎಂದು ಟ್ವೀಟ್​ ಮಾಡಿದ್ದರು.

ಜೊತೆಗೆ, ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆಯ ಆಡಳಿತ ಮಂಡಳಿ, ನಿಗದಿ ಮಾಡಿರುವ ದರಕ್ಕಿಂತಲೂ ಹೆಚ್ಚು ಹಣ ಪಡೆದಿದೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದುಇಂದು ಆ ಖಾಸಗಿ ಆಸ್ಪತ್ರೆಯ ವಿರುದ್ಧ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೀವಿ ಎಂದು ಸಹ ಹೇಳಿದ್ದರು.

ಇದೀಗ, ಸಚಿವರ ಟ್ವೀಟ್​ನ ಸಮರ್ಥನೆ ಮಾಡಿರುವ IPS ಅಧಿಕಾರಿ ಡಿ.ರೂಪಾ ಕೂಡ ಇದಕ್ಕೆ ಸಂಬಂಧಿಸಿ ಟ್ವೀಟ್​ ಮಾಡಿದ್ದಾರೆ. ನಗರದಲ್ಲಿ ಕೊವಿಡ್​ ನಿರ್ವಹಣೆಗಾಗಿ ನೇಮಕವಾಗಿರುವ ಅಧಿಕಾರಿಗಳ ತಂಡಕ್ಕೆ ಸೇರಿರುವ ರೂಪಾ ಅವರು, ಸಾರ್ ನನಗೆ ಹಾಗೂ ಐಎಎಸ್ ಹರ್ಷ ಗುಪ್ತಾ ಅವರಿಗೆ ಎಲ್ಲಾ ಆಸ್ಪತ್ರೆಗಳ ಮೇಲೆ ಈ ಜವಾಬ್ದಾರಿ ಕೊಟ್ಟರೆ, ಈಗಾಗಲೇ ಕೆಲವು ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸರಿಪಡಿಸಿದಂತೆ ಇದನ್ನೂ ನಿಭಾಯಿಸುತ್ತೇವೆ. Disaster management ಕಾಯ್ದೆ ಅಡಿ, ಸರ್ಕಾರ ದರ ನಿಗದಿಪಡಿಸಿದ ಆದೇಶದ ಉಲ್ಲಂಘನೆಯಾಗಿಎ ಎಂದು ಕೋರ್ಟ್ ಅನುಮತಿ ಪಡೆದು ಸಂಜ್ಞೆಯ ಅಪರಾಧದಂತೆ ತನಿಖೆ ಮಾಡಬಹುದು ಎಂದು ಟ್ವೀಟ್​ ಮಾಡಿದ್ದಾರೆ.

Published On - 6:28 pm, Wed, 29 July 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ