AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸುವ ಜವಾಬ್ದಾರಿ ನನಗೆ ಹಾಗೂ ಹರ್ಷಗುಪ್ತಾಗೆ ಕೊಡಿ’

ಬೆಂಗಳೂರು: ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಯು ನಿಗದಿತ ದರಕ್ಕಿಂತ ಅಧಿಕವಾಗಿ ಬಿಲ್​ ನೀಡುತ್ತಿದೆ ಎಂದು ಟಿವಿ9 ವರದಿ ಮಾಡಿತ್ತು. ಇದನ್ನೂ ಓದಿ: ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo ಇದಕ್ಕೆ ಸ್ಪಂದಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್‌ ಮಾಡಿದ್ದೇನೆ. […]

‘ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸುವ ಜವಾಬ್ದಾರಿ ನನಗೆ ಹಾಗೂ ಹರ್ಷಗುಪ್ತಾಗೆ ಕೊಡಿ’
KUSHAL V
| Edited By: |

Updated on:Jul 31, 2020 | 12:25 AM

Share

ಬೆಂಗಳೂರು: ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಯು ನಿಗದಿತ ದರಕ್ಕಿಂತ ಅಧಿಕವಾಗಿ ಬಿಲ್​ ನೀಡುತ್ತಿದೆ ಎಂದು ಟಿವಿ9 ವರದಿ ಮಾಡಿತ್ತು.

ಇದನ್ನೂ ಓದಿ: ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo

ಇದಕ್ಕೆ ಸ್ಪಂದಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್‌ ಮಾಡಿದ್ದೇನೆ. ಆದರೂ ಇಂದು ಕೊರೊನಾ ರೋಗಿಗೆ 5 ಲಕ್ಷ ಬಿಲ್‌ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಯಿತು ಎಂದು ಟ್ವೀಟ್​ ಮಾಡಿದ್ದರು.

ಜೊತೆಗೆ, ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆಯ ಆಡಳಿತ ಮಂಡಳಿ, ನಿಗದಿ ಮಾಡಿರುವ ದರಕ್ಕಿಂತಲೂ ಹೆಚ್ಚು ಹಣ ಪಡೆದಿದೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದುಇಂದು ಆ ಖಾಸಗಿ ಆಸ್ಪತ್ರೆಯ ವಿರುದ್ಧ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೀವಿ ಎಂದು ಸಹ ಹೇಳಿದ್ದರು.

ಇದೀಗ, ಸಚಿವರ ಟ್ವೀಟ್​ನ ಸಮರ್ಥನೆ ಮಾಡಿರುವ IPS ಅಧಿಕಾರಿ ಡಿ.ರೂಪಾ ಕೂಡ ಇದಕ್ಕೆ ಸಂಬಂಧಿಸಿ ಟ್ವೀಟ್​ ಮಾಡಿದ್ದಾರೆ. ನಗರದಲ್ಲಿ ಕೊವಿಡ್​ ನಿರ್ವಹಣೆಗಾಗಿ ನೇಮಕವಾಗಿರುವ ಅಧಿಕಾರಿಗಳ ತಂಡಕ್ಕೆ ಸೇರಿರುವ ರೂಪಾ ಅವರು, ಸಾರ್ ನನಗೆ ಹಾಗೂ ಐಎಎಸ್ ಹರ್ಷ ಗುಪ್ತಾ ಅವರಿಗೆ ಎಲ್ಲಾ ಆಸ್ಪತ್ರೆಗಳ ಮೇಲೆ ಈ ಜವಾಬ್ದಾರಿ ಕೊಟ್ಟರೆ, ಈಗಾಗಲೇ ಕೆಲವು ಆಸ್ಪತ್ರೆಗಳಲ್ಲಿ ವ್ಯವಸ್ಥೆ ಸರಿಪಡಿಸಿದಂತೆ ಇದನ್ನೂ ನಿಭಾಯಿಸುತ್ತೇವೆ. Disaster management ಕಾಯ್ದೆ ಅಡಿ, ಸರ್ಕಾರ ದರ ನಿಗದಿಪಡಿಸಿದ ಆದೇಶದ ಉಲ್ಲಂಘನೆಯಾಗಿಎ ಎಂದು ಕೋರ್ಟ್ ಅನುಮತಿ ಪಡೆದು ಸಂಜ್ಞೆಯ ಅಪರಾಧದಂತೆ ತನಿಖೆ ಮಾಡಬಹುದು ಎಂದು ಟ್ವೀಟ್​ ಮಾಡಿದ್ದಾರೆ.

Published On - 6:28 pm, Wed, 29 July 20

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ